ಡಿಎಂಕೆ ಉಚ್ಛಾಟಿತ ಅಳಗಿರಿ ಜಯಲಲಿತಾ ಕೈಹಿಡಿಯುವರೇ?

ಕರುಣಾನಿಧಿ ನಂತರ ಡಿಎಂಕೆ ಅಧಿಪತ್ಯಕ್ಕಾಗಿ ಹಿರಿಯ ಮತ್ತು ಕಿರಿಯ ಪುತ್ರರ ನಡುವಣ ಕದನ ಇದಾಗಿದೆ ಎಂಬುದು ಸುಸ್ಪಷ್ಟ. ಡಿಎಂಕೆ ಪಕ್ಷದ (Dravida Munetra Kazhakam) ಕಾರ್ಯಕರ್ತರ ವಿಶ್ವಾಸ ಗಳಿಸಿರುವ ಅಳಗಿರಿ, ಕರುಣಾನಿಧಿ ನಂತರ ಅಧ್ಯಕ್ಷ ಸ್ಥಾನಕ್ಕೇರಲು ಸಹಜವಾಗಿಯೇ ಬಯಸಿದ್ದರು.
ಆದರೆ ಕಿರಿಯ ಮಗ ಸ್ಟಾಲಿನ್ ರಚ್ಚೆ ಹಿಡಿದಿದ್ದು ಅನ್ಯ ಕಾಣದೆ (ಕರುಣಾನಿಧಿ ದ್ವಿತೀಯ ಪತ್ನಿ ದಯಾಳು ಅಮ್ಮಾಳ್ ಅವರ ಪುತ್ರ) ಅಳಗಿರಿಯನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ. ಇದು ರಾಜಕೀಯವಾಗಿ ಡಿಎಂಕೆಗೆ ಮಾರಕವಾಗುತ್ತದೆ ಅನ್ನುತ್ತಾರೆ ತಮಿಳುನಾಡು ರಾಜಕೀಯ ಪಂಡಿತರು.
ಮುಂದೇನು ಅಂದರೆ ಮಧುರೈ ಸೇರಿದಂತೆ ಇತರೆ ಕಡೆಗಳಲ್ಲಿ ಪಕ್ಷದ ಮೇಲೆ ಹಿಡಿತ ಹೊಂದಿರುವ ಅಳಗಿರಿ ರಾಜಕೀಯವಾಗಿ ತಮ್ಮ ಭವಿಷ್ಯವನ್ನು ಕಿಂಡುಕೊಳ್ಳುವುದು. ಆ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷ ಸೇರುವುದು ಅಳಗಿರಿ ಮುಂದಿರುವ ತಕ್ಷಣದ ದಾರಿ. ಆದರೆ DMKಯನ್ನು UPA ಮೈತ್ರಿಯಾಗಿಸಿಕೊಂಡಿರುವ ಕಾಂಗ್ರೆಸ್ ಅಳಗಿರಿಯತ್ತ ಕೈಚಾಚದೇ ಹೋಗಬಹುದು.
ಅಳಗಿರಿ ಕೈಗೆ ಜಯಾ ಸುಪಾರಿ: ಇದೇ ಸುಸಂದರ್ಭಕ್ಕಾಗಿ ಕಾಯುತ್ತಿರುವ DMK ರಾಜಕೀಯ ವೈರಿ AIADMK ಅಧಿನಾಯಕಿ, ಮುಖ್ಯಮಂತ್ರಿ ಜಯಲಲಿತಾ ಅಳಗಿರಿಗೆ ಮಣೆ ಹಾಕುತ್ತಾರಾ? ಶತ್ರುವಿನ ಶತ್ರು ಮಿತ್ರ ಎಂಬಂತೆ ರಾಜಕೀಯ ಮಹತ್ವಾಕಾಂಕ್ಷೆಯ ಜಯಾ, ಡಿಎಂಕೆ ಕುಟುಂಬವನ್ನು ಒಡೆಯುತ್ತಾರಾ? ಅಳಗಿರಿಯನ್ನು ತಮ್ಮ ತೆಕ್ಕೆಗೆ ತೆಗೆದುಕೊಳ್ಳುತ್ತಾರಾ?
ಇಲ್ಲಿ ಅಳಗಿರಿ ಎಷ್ಟು ಲೋಕಸಭಾ ಸೀಟುಗಳನ್ನು ಗೆಲ್ಲುತ್ತಾರೆ ಅನ್ನುವುದಕ್ಕಿಂತ DMK ಮತ್ತು ಕಾಂಗ್ರೆಸ್ ಮತ ವಿಭಜನೆ ಮಾಡಬಹುದು ಎಂಬುದು ಜಯಾ ಲೆಕ್ಕಾಚಾರಚಾದೀತು. ಹಾಗಾದಲ್ಲಿ ತಮ್ಮ ಗುರಿಯಾದ 39+1 ಸ್ಥಾನವನ್ನು ಅನಾಯಾಸವಾಗಿ ಗೆಲ್ಲುವ ಮೂಲಕ ಪ್ರಧಾನಿಯಾಗುವ ಸದವಕಾಶವನ್ನು ತಮ್ಮದಾಗಿಸಿಕೊಳ್ಳಬಹುದು ಎಂಬ ಲೆಕ್ಕಾಚಾರ ಹಾಕುತ್ತಾರಾ ಜಯಾ? ಕಾದುನೋಡಬೇಕು.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications