'ರಾಜಕೀಯಕ್ಕೆ ರಜನಿಕಾಂತ್ ಬರುವುದು ಬೇಡ'
ಚೆನ್ನೈ, ನ.6: ತಮಿಳುನಾಡಿನ ಸೂಪರ್ ಸ್ಟಾರ್ ರಜನಿಕಾಂತ್ ಅವರು ಬಿಜೆಪಿಗೆ ಸೇರುತ್ತಾರೋ ಇಲ್ಲವೋ ಗೊತ್ತಿಲ್ಲ. ಅದರೆ, ತಮಿಳುನಾಡಿನ ಕಾಂಗ್ರೆಸ್ ಪಕ್ಷವಂತೂ ರಾಜಕೀಯಕ್ಕೆ ರಜನಿಕಾಂತ್ ಬರುವುದು ಬೇಡ, ನಮ್ಮ ಪಕ್ಷದಿಂದ ಆಹ್ವಾನವನ್ನು ನೀಡುವುದಿಲ್ಲ ಎಂದು ಹೇಳಿದೆ.
ಜಿಕೆ ವಾಸನ್ ಅವರು ತಮಿಳುನಾಡಿನ ಕಾಂಗ್ರೆಸ್ ಪಕ್ಷ ತೊರೆಯುತ್ತಿದ್ದಂತೆ ಕಾಂಗ್ರೆಸ್ ಪಕ್ಷದ ಮುಖ್ಯಸ್ಥರಾಗಿ ಇವಿಕೆಎಸ್ ಇಳಂಗೋವನ್ ರನ್ನು ಅಧ್ಯಕ್ಷರನ್ನಾಗಿ ಕೂರಿಸಲಾಗಿದೆ. ಪಟ್ಟಕ್ಕೇರಿದ ಮರುಕ್ಷಣವೇ ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ, ರಜನಿಕಾಂತ್ ಅವರು ರಾಜಕೀಯಕ್ಕೆ ಬರುವುದೇ ಬೇಡ ಎಂಬುದು ನನ್ನ ಅಭಿಪ್ರಾಯ. ಅವರ ಅಭಿಮಾನಿಗಳು ಎಲ್ಲಾ ಪಕ್ಷಗಳಲಿದ್ದಾರೆ. ತಮಿಳುನಾಡಿನ ಎಲ್ಲಾ ಜನರಿಗೂ ಅವರು ಬೇಕಾದವರು. ಒಂದು ಪಕ್ಷಕ್ಕೆ ಸೀಮಿತವಾಗುವುದು ಬೇಡ ಎಂದು ಪಿಟಿಐ ಪ್ರತಿನಿಧಿಯೊಂದಿಗೆ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಜಿಕೆ ವಾಸನ್ ಅವರ ತಂದೆ ಜಿಕೆ ಮೂಪನರ್ ಅವರು 1996ರಲ್ಲಿ ತಮಿಳು ಮನಿಲಾ ಕಾಂಗ್ರೆಸ್ ಸ್ಥಾಪಿಸಿದಾಗ ರಜನಿಕಾಂತ್ ಅವರು ಬೆಂಬಲ ವ್ಯಕ್ತಪಡಿಸಿದ್ದರು. ಕಾಂಗ್ರೆಸ್ ಪಕ್ಷ ಜಾತ್ಯಾತೀತವಾಗಿದ್ದು, ರಜನಿಕಾಂತ್ ಸೇರಿದಂತೆ ಯಾರೇ ಆಗಲಿ ಪಕ್ಷಕ್ಕೆ ಸೇರಬಯಸಿದರೆ ಕಾಂಗ್ರೆಸ್ ಸ್ವಾಗತಿಸುತ್ತದೆ ಎಂದು ಇಳಂಗೋವನ್ ಹೇಳಿದ್ದಾರೆ.[ಜಯಲಲಿತಾ ಸ್ವಾಗತಿಸಿದ ರಜನಿ, ಬಿಜೆಪಿಗೆ ಆತಂಕ]
ಕಳೆದ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದ ರಜನಿಕಾಂತ್ ಅವರು ಬಿಜೆಪಿಗೆ ಬೆಂಬಲ ನೀಡಿದ್ದರು. ಅಲ್ಲಿಂದ ಮೊದಲುಗೊಂಡು ಇಂದಿನ ತನಕ ಬಿಜೆಪಿ ರಜನಿಕಾಂತ್ ರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ಉತ್ಸಾಹ ತೋರಿದೆ.[ಬಿಜೆಪಿಗೆ ಕರೆ ತರಲು ಇದೇ ಸಕಾಲ]
2016ರ ಅಸೆಂಬ್ಲಿ ಚುನಾವಣೆಯಲ್ಲಿ ಎಐಎಡಿಎಂಕೆ ಮಟ್ಟ ಹಾಕಲು ಡಿಎಂಕೆವೊಂದಕ್ಕೆ ಸಾಧ್ಯವಿಲ್ಲದ ಕಾರಣ ಬಿಜೆಪಿ ಬಲಿಷ್ಠವಾಗಿ ಬೆಳೆಯಲು ಯತ್ನಿಸುತ್ತಿದೆ. ಈ ಹಿಂದೆ ಟಿಎಂಸಿ ಹಾಗೂ ಡಿಎಂಕೆಗೆ ಬೆಂಬಲ ನೀಡಿದ್ದ ರಜನಿಕಾಂತ್ ಮಾತ್ರ ರಾಜಕೀಯ ಪ್ರವೇಶದ ಬಗ್ಗೆ ಯಾವುದೇ ನಿಖರವಾದ ಹೇಳಿಕೆ ನೀಡಿಲ್ಲ.(ಪಿಟಿಐ)
-
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ?












Click it and Unblock the Notifications