'ರಾಜಕೀಯಕ್ಕೆ ರಜನಿಕಾಂತ್ ಬರುವುದು ಬೇಡ'
ಚೆನ್ನೈ, ನ.6: ತಮಿಳುನಾಡಿನ ಸೂಪರ್ ಸ್ಟಾರ್ ರಜನಿಕಾಂತ್ ಅವರು ಬಿಜೆಪಿಗೆ ಸೇರುತ್ತಾರೋ ಇಲ್ಲವೋ ಗೊತ್ತಿಲ್ಲ. ಅದರೆ, ತಮಿಳುನಾಡಿನ ಕಾಂಗ್ರೆಸ್ ಪಕ್ಷವಂತೂ ರಾಜಕೀಯಕ್ಕೆ ರಜನಿಕಾಂತ್ ಬರುವುದು ಬೇಡ, ನಮ್ಮ ಪಕ್ಷದಿಂದ ಆಹ್ವಾನವನ್ನು ನೀಡುವುದಿಲ್ಲ ಎಂದು ಹೇಳಿದೆ.
ಜಿಕೆ ವಾಸನ್ ಅವರು ತಮಿಳುನಾಡಿನ ಕಾಂಗ್ರೆಸ್ ಪಕ್ಷ ತೊರೆಯುತ್ತಿದ್ದಂತೆ ಕಾಂಗ್ರೆಸ್ ಪಕ್ಷದ ಮುಖ್ಯಸ್ಥರಾಗಿ ಇವಿಕೆಎಸ್ ಇಳಂಗೋವನ್ ರನ್ನು ಅಧ್ಯಕ್ಷರನ್ನಾಗಿ ಕೂರಿಸಲಾಗಿದೆ. ಪಟ್ಟಕ್ಕೇರಿದ ಮರುಕ್ಷಣವೇ ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ, ರಜನಿಕಾಂತ್ ಅವರು ರಾಜಕೀಯಕ್ಕೆ ಬರುವುದೇ ಬೇಡ ಎಂಬುದು ನನ್ನ ಅಭಿಪ್ರಾಯ. ಅವರ ಅಭಿಮಾನಿಗಳು ಎಲ್ಲಾ ಪಕ್ಷಗಳಲಿದ್ದಾರೆ. ತಮಿಳುನಾಡಿನ ಎಲ್ಲಾ ಜನರಿಗೂ ಅವರು ಬೇಕಾದವರು. ಒಂದು ಪಕ್ಷಕ್ಕೆ ಸೀಮಿತವಾಗುವುದು ಬೇಡ ಎಂದು ಪಿಟಿಐ ಪ್ರತಿನಿಧಿಯೊಂದಿಗೆ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಜಿಕೆ ವಾಸನ್ ಅವರ ತಂದೆ ಜಿಕೆ ಮೂಪನರ್ ಅವರು 1996ರಲ್ಲಿ ತಮಿಳು ಮನಿಲಾ ಕಾಂಗ್ರೆಸ್ ಸ್ಥಾಪಿಸಿದಾಗ ರಜನಿಕಾಂತ್ ಅವರು ಬೆಂಬಲ ವ್ಯಕ್ತಪಡಿಸಿದ್ದರು. ಕಾಂಗ್ರೆಸ್ ಪಕ್ಷ ಜಾತ್ಯಾತೀತವಾಗಿದ್ದು, ರಜನಿಕಾಂತ್ ಸೇರಿದಂತೆ ಯಾರೇ ಆಗಲಿ ಪಕ್ಷಕ್ಕೆ ಸೇರಬಯಸಿದರೆ ಕಾಂಗ್ರೆಸ್ ಸ್ವಾಗತಿಸುತ್ತದೆ ಎಂದು ಇಳಂಗೋವನ್ ಹೇಳಿದ್ದಾರೆ.[ಜಯಲಲಿತಾ ಸ್ವಾಗತಿಸಿದ ರಜನಿ, ಬಿಜೆಪಿಗೆ ಆತಂಕ]
ಕಳೆದ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದ ರಜನಿಕಾಂತ್ ಅವರು ಬಿಜೆಪಿಗೆ ಬೆಂಬಲ ನೀಡಿದ್ದರು. ಅಲ್ಲಿಂದ ಮೊದಲುಗೊಂಡು ಇಂದಿನ ತನಕ ಬಿಜೆಪಿ ರಜನಿಕಾಂತ್ ರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ಉತ್ಸಾಹ ತೋರಿದೆ.[ಬಿಜೆಪಿಗೆ ಕರೆ ತರಲು ಇದೇ ಸಕಾಲ]
2016ರ ಅಸೆಂಬ್ಲಿ ಚುನಾವಣೆಯಲ್ಲಿ ಎಐಎಡಿಎಂಕೆ ಮಟ್ಟ ಹಾಕಲು ಡಿಎಂಕೆವೊಂದಕ್ಕೆ ಸಾಧ್ಯವಿಲ್ಲದ ಕಾರಣ ಬಿಜೆಪಿ ಬಲಿಷ್ಠವಾಗಿ ಬೆಳೆಯಲು ಯತ್ನಿಸುತ್ತಿದೆ. ಈ ಹಿಂದೆ ಟಿಎಂಸಿ ಹಾಗೂ ಡಿಎಂಕೆಗೆ ಬೆಂಬಲ ನೀಡಿದ್ದ ರಜನಿಕಾಂತ್ ಮಾತ್ರ ರಾಜಕೀಯ ಪ್ರವೇಶದ ಬಗ್ಗೆ ಯಾವುದೇ ನಿಖರವಾದ ಹೇಳಿಕೆ ನೀಡಿಲ್ಲ.(ಪಿಟಿಐ)
-
ರಾಜ್ಯದ 5000ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಕಲುಷಿತ ನೀರು: ಗ್ಯಾರಂಟಿ ಗುಂಗಿನಲ್ಲಿರುವ ಕಾಂಗ್ರೆಸ್ ವಿರುದ್ಧ ಆರ್. ಅಶೋಕ್ ಕಿಡಿ -
ಕೆಲವೇ ಗಂಟೆಗಳಲ್ಲಿ ಇರಾನ್ ಬಂದರುಗಳಿಗೆ ಅಮೆರಿಕದಿಂದ ಕಡಲ ದಿಗ್ಬಂಧನ? ಯುದ್ಧದ ಭೀತಿಯಲ್ಲಿ ಕೊಲ್ಲಿ ರಾಷ್ಟ್ರಗಳು -
Siddaramaiah: ಜನರ ದಾರಿತಪ್ಪಿಸುವ ಬಿಜೆಪಿಯನ್ನು ನಂಬಬೇಡಿ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾರಣವೇನು -
Cabinet Reshuffle: ಶಾಸಕರ ದೆಹಲಿಗೆ ಭೇಟಿ ತಪ್ಪಿಲ್ಲ, ಸಂಪುಟ ಪುನರ್ರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು: ಸಿದ್ದರಾಮಯ್ಯ -
ಮೂರು ವರ್ಷ ಮುಗಿದಿದೆ, ಸಚಿವ ಸಂಪುಟ ಬದಲಿಸಿ: ಹೈಕಮಾಂಡ್ಗೆ ಮನವಿ ಸಲ್ಲಿಸಲು ಟಿ.ಬಿ.ಜಯಚಂದ್ರ ಸಜ್ಜು -
ದಾವಣಗೆರೆ ಬೈಎಲೆಕ್ಷನ್ ಬೆನ್ನಲ್ಲೇ ಭಿನ್ನಮತ ಸ್ಫೋಟ: KPCC ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ರಾಜೀನಾಮೆ -
Vijay: ಇದು ತಲೆಮಾರಿನ ಬದಲಾವಣೆಗಾಗಿ ನಡೆಯುತ್ತಿರುವ ಚುನಾವಣೆ: ಕಾರ್ಯಕರ್ತರಿಗೆ ದಳಪತಿ ವಿಜಯ್ ವಿಶೇಷ ಕರೆ -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
Aditya: ನಿನ್ನೆ ಮೊನ್ನೆ ಬಂದೋರೆಲ್ಲ ದರ್ಶನ್ಗೆ ಕ್ಲೋಸ್ ಅಂತಿದ್ದಾರೆ, ಅವನು ಎಂದಿಗೂ ನನ್ನ ದೋಸ್ತ್: ನಟ ಆದಿತ್ಯ -
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್











Click it and Unblock the Notifications