ಕೂದಲು ಉದುರುವ ಸಮಸ್ಯೆಗೆ ಬೇಸತ್ತು ಬೆಂಗಳೂರಿನ ಟೆಕ್ಕಿ ಆತ್ಮಹತ್ಯೆ
ಮದುರೈ, ಜನವರಿ 2 : ಕೂದಲು ಉದುರುವ ಸಮಸ್ಯೆ ತಡೆಯುವುದಕ್ಕೆ ಆಗಲಿಲ್ಲ ಎಂಬ ಕಾರಣಕ್ಕೆ ಇಪ್ಪತ್ತೇಳು ವರ್ಷದ ಟೆಕ್ಕಿಯೊಬ್ಬರು ಮದುರೈನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಮಸ್ಯೆಯಿಂದ ಆತ ಬಹಳ ಬೇಸರಗೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಬೆಂಗಳೂರಿನ ಸಾಫ್ಟ್ ವೇರ್ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ, ಜೈಹಿಂದ್ ಪುರಂನ ಆರ್.ಮಿಥುನ್ ರಾಜ್ ಆತ್ಮಹತ್ಯೆ ಮಾಡಿಕೊಂಡವರು. ತಲೆ ಹೊಟ್ಟಿನ ಸಮಸ್ಯೆಯಿದ್ದ ಮಿಥುನ್ ಗೆ ವಿಪರೀತ ಕೂದಲು ಉದುರುತ್ತಿತ್ತು. ಹಲವು ಔಷಧೋಪಚಾರ ಮಾಡಿದ ನಂತರವೇ ಸಮಸ್ಯೆ ಪರಿಹಾರ ಆಗಿರಲಿಲ್ಲ.

ಚೆನ್ನೈನ ಇನ್ಫೋಸಿಸ್ ನಲ್ಲಿ ವೃತ್ತಿ ಆರಂಭಿಸಿದ್ದ ಮಿಥುನ್ ಕಳೆದ ವರ್ಷವಷ್ಟೇ ಬೆಂಗಳೂರಿನ ಐಟಿ ಕಂಪೆನಿಗೆ ಸೇರಿದ್ದರು. ಆತನ ತಂದೆ ಬಹಳ ವರ್ಷಗಳ ಹಿಂದೆಯೇ ತೀರಿಕೊಂಡಿದ್ದು, ತಾಯಿ ವಸಂತಿ ಮದುರೈನ ಜೈಹಿಂದ್ ಪುರಂನಲ್ಲಿ ವಾಸವಿದ್ದಾರೆ. ಮಗನಿಗೆ ಮದುವೆಗಾಗಿ ಹೆಣ್ಣು ಹುಡುಕುತ್ತಿದ್ದರು. ಈ ಮಧ್ಯೆ ಮಿಥುನ್ ಗೆ ಕೂದಲು ಉದುರುವ ಸಮಸ್ಯೆ ಜಾಸ್ತಿಯಾಗಿತ್ತು.
ಕಳೆದ ಕೆಲವು ವಾರದಿಂದ ಮಿಥುನ್ ಖಿನ್ನತೆಗೊಳಗಾಗಿದ್ದರು. ತನ್ನ ಆತಂಕವನ್ನು ಆತ ತಾಯಿಯ ಮುಂದೆ ಕೂಡ ಹೇಳಿದ್ದರು. ಕಂಪೆನಿಗೆ ರಜಾ ಹಾಕಿದ್ದ ಮಿಥುನ್, ತಾಯಿಯು ದೇವಸ್ಥಾನಕ್ಕೆ ತೆರಳಿದ್ದ ವೇಳೆ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
-
AI ಎಫೆಕ್ಟ್: 2026ರಲ್ಲೂ ಮುಂದುವರಿದ ಉದ್ಯೋಗ ಕಡಿತ; ಯಾವ್ಯಾವ ಕಂಪನಿಗಳಿಂದ ಎಷ್ಟು ವಜಾ? ಪಟ್ಟಿ ಇಲ್ಲಿದೆ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್












Click it and Unblock the Notifications