ಪ್ರತಿಭಟನೆಗೆ ತೆರಳುತ್ತಿದ್ದ ನಟಿ, ಬಿಜೆಪಿ ನಾಯಕಿ ಖುಷ್ಬೂ ಬಂಧನ
ಚೆನ್ನೈ, ಅಕ್ಟೋಬರ್ 27: ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ನಟಿ, ಬಿಜೆಪಿ ನಾಯಕಿ ಖುಷ್ಬೂ ಸುಂದರ್ ಹಾಗೂ ಕೆಲವು ಬಿಜೆಪಿ ಸದಸ್ಯರನ್ನು ತಮಿಳುನಾಡಿನ ಮುಟ್ಟುಕಾಡುದಲ್ಲಿ ಮಂಗಳವಾರ ಬಂಧಿಸಲಾಗಿದೆ.
ವಿಸಿಕೆ ಅಧ್ಯಕ್ಷ ದೋಳ್ ತಿರುಮಾವಳವನ್ ಅವರು ಮನುಸ್ಮೃತಿ ಉಲ್ಲೇಖಿಸಿ ಮಹಿಳೆಯರ ಬಗ್ಗೆ ಆಡಿದ್ದರು ಎನ್ನಲಾದ ಮಾತುಗಳ ವಿರುದ್ಧ ಬಿಜೆಪಿ ಪ್ರತಿಭಟನೆ ಆಯೋಜಿಸಿತ್ತು. ಅದರಲ್ಲಿ ಪಾಲ್ಗೊಳ್ಳಲು ಖುಷ್ಬೂ ಅವರು ಚಿದಂಬರಂಗೆ ತೆರಳುತ್ತಿದ್ದಾಗ ಮಾರ್ಗಮಧ್ಯೆ ಅವರನ್ನು ಬಂಧಿಸಲಾಗಿದೆ.

ಚಿದಂಬರಂನಲ್ಲಿ ಪ್ರತಿಭಟನೆ ನಡೆಸಲು ಪೊಲೀಸರು ಸೋಮವಾರ ಅನುಮತಿ ನಿರಾಕರಿಸಿದ್ದರು. ಖುಷ್ಬೂ ಅವರ ಬಂಧನದ ಬೆನ್ನಲ್ಲೇ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕೆಟಿ ರಾಘವನ್ ಅವರನ್ನು ಮೇಲ್ಮರುವಥುರ್ ಸಮೀಪದ ಅಥುರ್ ಟೋಲ್ಗೇಟ್ನಲ್ಲಿ ಬಂಧಿಸಿದ್ದಾರೆ. ಮುನ್ನೆಚ್ಚರಿಕೆ ಕ್ರಮದಿಂದ ಅವರನ್ನು ಬಂಧಿಸಲಾಗಿದ್ದು, ಬಳಿಕ ಬಿಡುಗಡೆ ಮಾಡಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
'ಬಂಧನಕ್ಕೆ ಒಳಗಾಗಿದ್ದೇನೆ.. ಪೊಲೀಸ್ ವ್ಯಾನ್ನಲ್ಲಿ ಕರೆದೊಯ್ಯಲಾಗುತ್ತಿದೆ. ಮಹಿಳೆಯರ ಗೌರವಕ್ಕಾಗಿ ನಮ್ಮ ಕೊನೆ ಉಸಿರಿನವರೆಗೂ ಹೋರಾಡುತ್ತೇವೆ. ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿ ಅವರು ಯಾವಾಗಲೂ ಮಹಿಳೆಯರ ಸುರಕ್ಷತೆ ಬಗ್ಗೆ ಮಾತನಾಡುತ್ತಾರೆ. ನಾವು ಅವರ ಹಾದಿಯಲ್ಲಿ ಸಾಗುತ್ತಿದ್ದೇವೆ. ಕೆಲವು ಕೆಟ್ಟ ವ್ಯಕ್ತಿಗಳ ದೌರ್ಜನ್ಯಕ್ಕೆ ನಾವು ಮಂಡಿಯೂರುವುದಿಲ್ಲ. ಭಾರತ್ ಮಾತಾ ಕಿ ಜೈ' ಎಂದು ಖುಷ್ಬೂ ಟ್ವೀಟ್ ಮಾಡಿದ್ದಾರೆ.
ವಿದುತಲೈ ಚಿರುತೈಗಲ್ ಕಚ್ಚಿ (ವಿಸಿಕೆ) ಪಕ್ಷದ ವಿರುದ್ಧ ಹರಿಹಾಯ್ದಿರುವ ಖುಷ್ಬೂ, 'ಹೇಡಿ ವಿಸಿಕೆ. ಖುಷಿ ಪಡಬೇಡಿ. ಇದು ನಿಮ್ಮ ವೈಫಲ್ಯ. ನಾವು ಶಕ್ತಿಯುತರು ಎಂಬುದು ಗೊತ್ತಿರುವುದರಿಂದ ನಮ್ಮನ್ನು ಬಂಧಿಸಿದ್ದಾರೆ. ನಾವು ಮಂಡಿಯೂರುವುದಿಲ್ಲ. ಈ ಮಣ್ಣಿನ ಪ್ರತಿ ಹೆಣ್ಣುಮಗಳ ಗೌರವ ಕಾಪಾಡಲು ನರೇಂದ್ರ ಮೋದಿ ಅವರು ಪ್ರತಿ ಹೆಜ್ಜೆಯನ್ನೂ ತೆಗೆದುಕೊಳ್ಳುತ್ತಾರೆ. ಹೇಡಿ ವಿಸಿಕೆ, ಮಹಿಳೆಯನ್ನು ಗೌರವಿಸುವುದು ನಿಮಗೆ ಕಷ್ಟವಾಗುತ್ತಿದೆ' ಎಂದು ಕಿಡಿಕಾರಿದ್ದಾರೆ.
ಮನುಸ್ಮೃತಿ ಹಾಗೂ ಮಹಿಳೆಯರ ಕುರಿತು ಅದರ ದೃಷ್ಟಿಕೋನದ ಬಗ್ಗೆ ತಿರುಮಾವಳವನ್ ವ್ಯಂಗ್ಯವಾಡಿದ್ದರು. ಸೆಪ್ಟೆಂಬರ್ನಲ್ಲಿ ನಡೆದ ವೆಬಿನಾರ್ನಲ್ಲಿ ಮಹಿಳೆಯರ ಬಗ್ಗೆ ಕೀಳಾಗಿ ಮಾತನಾಡಿದ್ದರು ಎಂದು ಆರೋಪಿಸಲಾಗಿದೆ. ಈ ಹೇಳಿಕೆಗೆ ಕ್ಷಮೆ ಕೇಳುವಂತೆ ಬಿಜೆಪಿ ಒತ್ತಾಯಿಸಿತ್ತು. ಆದರೆ ಅವರು ಕ್ಷಮೆಕೋರಲು ನಿರಾಕರಿಸಿದ್ದರು.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ












Click it and Unblock the Notifications