ರೈಲಿನಲ್ಲಿ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಬಿಜೆಪಿ ಸದಸ್ಯನ ಬಂಧನ
ಚೆನ್ನೈ, ಏಪ್ರಿಲ್ 23: ರೈಲಿನಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದ ಮೇಲೆ ಚೆನ್ನೈನ ಬಿಜೆಪಿ ಕಾರ್ಯಕರ್ತರೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಕೇರಳದ ತಿರುವನಂತಪುರಂನಿಂದ ತಮಿಳುನಾಡಿನ ಚೆನ್ನೈಗೆ ರೈಲಿನಲ್ಲಿ ಚಲಿಸುತ್ತಿದ್ದ ಬಿಜೆಪಿ ಸದಸ್ಯ ಪ್ರೇಮ್ ಆನಂದ್ ರೈಲಿನಲ್ಲಿ ಸಹಪ್ರಯಾಣ ಮಾಡುತ್ತಿದ್ದ ಅಪ್ರಾಪ್ತ ಬಾಲಕಿಗೆ ಲೈಂಗಿಕ ನೀಡಿದ್ದರು. ಈ ಕುರಿತು ಅಪ್ರಾಪ್ತೆ ನೀಡಿದ ದೂರಿನನ್ವಯ ಪೋಕ್ಸೋ(Protection of Children from Sexual Offences Act) ಕಾಯ್ದೆಯಡಿ ದೂರು ದಾಖಲಿಸಲಾಗಿದೆ.
ಬಾಲಕಿಗೆ ಅವರು ಲೈಂಗಿಕ ಕಿರುಕುಳ ನೀಡುತ್ತಿದ್ದಂತೆಯೇ ಬಾಲಕಿ ಜೋರಾಗಿ ಕೂಗಿದ್ದರಿಂದ ಮಲಗಿದ್ದ ತಂದೆ, ತಾಯಿ ಎಚ್ಚರಗೊಂಡು ಪ್ರೇಮ್ ಆನಂದ್ ಅವರಿಗೆ ದಬಾಯಿಸಿದ್ದಾರೆ. ಆ ಸಂದರ್ಭದಲ್ಲಿ ಪ್ರೇಮ್ ಆನಂದ್, 'ನಾನು ಬಿಜೆಪಿ ಸದಸ್ಯ. ನನಗೆ ದೊಡ್ಡ ದೊಡ್ಡ ರಾಜಕಾರಣಿಗಳೊಂದಿಗೆ ಸಂಪರ್ಕವಿದೆ' ಎಂದು ಹೆದರಿಸಿದ್ದಾರೆ ಎಂದು ಪೊಲೀಸರಿಗೆ ದೂರು ನೀಡುವ ಸಮಯದಲ್ಲಿ ಬಾಲಕಿಯ ತಂದೆ-ತಾಯಿ ಆರೋಪಿಸಿದ್ದಾರೆ.

2006 ರಲ್ಲಿ ಉತ್ತರ ಚೆನ್ನೈನ ಆರ್ ಕೆ ನಗರ ಕ್ಷೇತ್ರದಿಂದ ಇವರು ಬಿಜೆಪಿ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಿದ್ದರು.
ಅಪ್ರಾಪ್ತೆಯರಿಗೆ ಲೈಂಗಿಕ ಕಿರುಕುಳ ನೀಡುವ ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿದ್ದು, ಉತ್ತರ ಪ್ರದೇಶದ ಉನ್ನಾವೋ ದಲ್ಲಿ ಅಪ್ರಾಪ್ತೆಯ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಕುಲ್ದೀಪ್ ಸಿಂಗ್ ಸೆನ್ಗಾರ್ ಅವರನ್ನು ಬಂಧಿಸಿರುವುದನ್ನು ಈ ಸಂದರ್ಭದಲ್ಲಿ ಸ್ಮರಿಸಬಹುದು.
12 ವರ್ಷ ಅಥವಾ ಅದಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಮೇಲೆ ಅತ್ಯಾಚಾರ ಎಸಗುವವರಿಗೆ ಮರಣದಂಡನೆ ನೀಡುವ ಮಹತ್ವದ ತಿದ್ದುಪಡಿಯನ್ನು ಪೋಕ್ಸೋ ಕಾಯ್ದೆಯಲ್ಲಿ ಕೇಂದ್ರ ಸರ್ಕಾರ ತಂದಿರುವುದನ್ನು ಈ ಸಂದರ್ಭದಲ್ಲಿ ನೆನೆಯಬಹುದು.
-
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ? -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ












Click it and Unblock the Notifications