ಶಶಿಕಲಾ ರಾಜಕೀಯ ನಿರ್ಗಮನ "ಅಮ್ಮ"ನ ಕನಸು ಈಡೇರಿಸಲು ಸಹಕಾರಿಯಾಗಲಿದೆ; ಸಿಟಿ ರವಿ
ಚೆನ್ನೈ, ಮಾರ್ಚ್ 4: ಜಯಲಲಿತಾ ಆಪ್ತೆ ವಿ.ಕೆ. ಶಶಿಕಲಾ ನಟರಾಜನ್ ಬುಧವಾರ ರಾಜಕೀಯಕ್ಕೆ ವಿದಾಯ ಘೋಷಿಸಿದ್ದು, ತಮ್ಮ ಈ ನಿರ್ಧಾರ ಮಾಜಿ ಮುಖ್ಯಮಂತ್ರಿ ದಿವಂಗತ ಜಯಲಲಿತಾ ಅವರ ಪ್ರಗತಿಪರ ಹಾಗೂ ಸಮೃದ್ಧ ತಮಿಳುನಾಡಿನ ಕನಸು ನೆರವೇರಲು ಸಹಾಯ ಮಾಡಲಿದೆ ಎಂದು ಹೇಳಿದ್ದರು.
ಶಶಿಕಲಾ ಅವರ ಈ ಘೋಷಣೆಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ತಮಿಳುನಾಡು ಬಿಜೆಪಿ ಉಸ್ತುವಾರಿ ಸಿ.ಟಿ.ರವಿ ಪ್ರತಿಕ್ರಿಯಿಸಿದ್ದು, "ಶಶಿಕಲಾ ಅವರ ಈ ನಿರ್ಧಾರವನ್ನು ಬಿಜೆಪಿ ಸ್ವಾಗತಿಸುತ್ತದೆ. ಅವರ ನಿರ್ಧಾರ "ಅಮ್ಮಾ" ಅವರ ಕನಸುಗಳನ್ನು ಈಡೇರಿಸುತ್ತದೆ" ಎಂದು ಹೇಳಿದ್ದಾರೆ.
ರಾಜಕೀಯಕ್ಕೆ ವಿದಾಯ ಹೇಳಿರುವುದು ಶಶಿಕಲಾ ಅವರ ಸ್ವ ನಿರ್ಧಾರ ಎಂಬುದನ್ನು ಒತ್ತಿ ಹೇಳಿದ ಸಿ.ಟಿ.ರವಿ, "ತಮಿಳುನಾಡಿನಲ್ಲಿ ಎನ್ಡಿಎ ಬಲಪಡಿಸುವುದು ಹಾಗೂ 234 ಕ್ಷೇತ್ರಗಳಲ್ಲಿಯೂ ಗೆಲ್ಲುವುದು ಬಿಜೆಪಿ ಗುರಿ. ಡಿಎಂಕೆ ಪಕ್ಷವನ್ನು ಸೋಲಿಸಿ ಎಐಎಡಿಎಂಕೆ ಅಧಿಕಾರ ಪುನರ್ಪ್ರತಿಷ್ಠಾಪನೆ ಮಾಡುವುದು ನಮ್ಮ ಮುಖ್ಯ ಉದ್ದೇಶ" ಎಂದು ಹೇಳಿದ್ದಾರೆ.

"ಜಯಲಲಿತಾ ಅವರ ಕನಸುಗಳನ್ನು ನೆರವೇರಿಸಲು ಎಐಎಡಿಎಂಕೆ ಅಧಿಕಾರಕ್ಕೆ ಮರಳಲೇಬೇಕು. ಅಮ್ಮಾ ಯಾವಾಗಲೂ ಒಗ್ಗಟ್ಟಾದ ಹಾಗೂ ಬಲವಾದ ಎಐಎಡಿಎಂಕೆ ಪಕ್ಷ ಸ್ಥಾಪನೆ ಬಯಸಿದ್ದರು. ಪ್ರಗತಿಪರ ಹಾಗೂ ಸಮೃದ್ಧ ತಮಿಳುನಾಡಿನ ಕನಸು ಕಂಡಿದ್ದರು. ಅವರ ಕನಸುಗಳು ಈಡೇರಲಿವೆ" ಎಂದು ಭರವಸೆ ವ್ಯಕ್ತಪಡಿಸಿದರು.
ಶಶಿಕಲಾ ಸೋದರಳಿಯ ಟಿಟಿವಿ ದಿನಕರನ್ ಕೂಡ ಜಯಲಲಿತಾ ಅವರ ಕನಸು ಈಡೇರಿಸಲು ಪ್ರಯತ್ನಿಸುತ್ತಾರೆ ಎನ್ನುವ ಭರವಸೆಯಿದೆ. ಪ್ರಧಾನಿ ಮೋದಿ ನೇತೃತ್ವದಲ್ಲಿ ಎಐಎಡಿಎಂಕೆ ಪಕ್ಷ ತಮಿಳುನಾಡಿಗೆ ಉನ್ನತಿ ತರಲಿದೆ ಎಂದರು.
ಬುಧವಾರ ತಮ್ಮ ರಾಜಕೀಯ ವಿದಾಯದ ನಿರ್ಧಾರ ಪ್ರಕಟಿಸಿದ್ದ ಶಶಿಕಲಾ ನಟರಾಜನ್, "ಜಯಾ ಬದುಕಿದ್ದಾಗ ನಾನು ಎಂದಿಗೂ ಅಧಿಕಾರ ಅಥವಾ ಸ್ಥಾನಮಾನದ ಹಿಂದೆ ಹೋಗಿರಲಿಲ್ಲ. ಆಕೆ ನಿಧನರಾದ ಬಳಿಕವೂ ಅದನ್ನು ಮಾಡುವುದಿಲ್ಲ. ನಾನು ರಾಜಕಾರಣ ತ್ಯಜಿಸುತ್ತಿದ್ದೇನೆ. ಆದರೆ ಆಕೆಯ ಪಕ್ಷದ ಗೆಲುವಿಗೆ ಪ್ರಾರ್ಥಿಸುತ್ತೇನೆ. ಆಕೆಯ ಪಾರಂಪರ್ಯ ಮುಂದುವರಿಯಲಿ" ಎಂದು ಹೇಳಿದ್ದರು.
ತಮಿಳುನಾಡು ಚುನಾವಣೆಗೆ ಎರಡು ವಾರ ಬಾಕಿ ಇರುವಾಗಲೇ ಶಶಿಕಲಾ ಅವರ ಈ ನಿರ್ಧಾರ ರಾಜ್ಯದ ಜನರಲ್ಲಿ ಅಚ್ಚರಿ ಮೂಡಿಸಿತ್ತು. ಜೈಲಿನಿಂದ ಚೆನ್ನೈಗೆ ಶಶಿಕಲಾ ವಾಪಸ್ಸಾದ ನಂತರ ತಮಿಳುನಾಡು ರಾಜಕೀಯದಲ್ಲಿ ಸಂಚಲನ ಮೂಡಿತ್ತು. ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಶಶಿಕಲಾ ಎಐಎಡಿಎಂಕೆ ಪಕ್ಷವನ್ನು ಮುನ್ನಡೆಸುತ್ತಾರೆ ಎಂದೇ ಭಾವಿಸಲಾಗಿತ್ತು. ಆದರೆ ಏಕಾಏಕಿ ಶಶಿಕಲಾ ರಾಜಕೀಯ ವಿದಾಯ ಘೋಷಿಸಿದ್ದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications