ಚೆನ್ನೈ ಕಾರ್ಪೋರೇಶನ್ ಚುನಾವಣೆ: ಗೆದ್ದ ಬಿಜೆಪಿ ಅಭ್ಯರ್ಥಿ ಗೋಡ್ಸೆ ಅನುಯಾಯಿ
ಚೆನ್ನೈ, ಫೆ 23: ತಮಿಳುನಾಡಿನ ವಿವಿಧ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಮಂಗಳವಾರದಂದು (ಫೆ 22) ಹೊರಬಿದ್ದಿದೆ. ನಿರೀಕ್ಷೆಯಂತೆ ಆಡಳಿತಾರೂಢ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಭರ್ಜರಿ ಜಯಭೇರಿ ಸಾಧಿಸಿದೆ. ಎಐಎಡಿಎಂಕೆ ಎರಡನೇ ಸ್ಥಾನದಲ್ಲಿದೆ.
ತಮಿಳುನಾಡಿನಲ್ಲಿ ಅಕೌಂಟ್ ಓಪನ್ ಮಾಡಲು ತಿಣುಕಾಡುತ್ತಿರುವ ಬಿಜೆಪಿ ನಿರೀಕ್ಷೆಗಿಂತ ಹೆಚ್ಚು ಸ್ಥಾನವನ್ನು ಗೆಲ್ಲುವ ಮೂಲಕ ಪ್ರಾದೇಶಿಕ ಪಕ್ಷಗಳಿಗೆ ಎಚ್ಚರಿಕೆಯ ಸೈರನ್ ಹೊಡೆದಿದೆ. ಬಿಜೆಪಿ ಸೀಟು ಹಂಚಿಕೆಯಲ್ಲಿ ಎಐಎಡಿಎಂಕೆ ಜೊತೆ ಹೊಂದಾಣಿಕೆ ಆಗದ ಕಾರಣ ಪ್ರತ್ಯೇಕವಾಗಿ ಸ್ಪರ್ಧಿಸಿತ್ತು.
Recommended Video

ಗ್ರೇಟರ್ ಚೆನ್ನೈ ಕಾರ್ಪೋರೇಶನ್ ಚುನಾವಣೆಯಲ್ಲಿ ಡಿಎಂಕೆ ಅಭೂತಪೂರ್ವ ಜಯವನ್ನು ಸಾಧಿಸಿದೆ. ಬಹುತೇಕ ವಾರ್ಡ್ಗಳಲ್ಲಿ ಡಿಎಂಕೆ ಗೆದ್ದಿದ್ದು, ಎಐಎಡಿಎಂಕೆ ಎರಡನೇ ಸ್ಥಾನದಲ್ಲಿದೆ. ಫೆಬ್ರವರಿ ಹತ್ತೊಂಬತ್ತಕ್ಕೆ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆದಿತ್ತು.
ಚೆನ್ನೈ ಚುನಾವಣೆಯಲ್ಲಿ ಬಿಜೆಪಿಯ ಒಬ್ಬ ಅಭ್ಯರ್ಥಿ ಗೆಲ್ಲುವ ಮೂಲಕ ಕೌನ್ಸಿಲಿಗೆ ಪ್ರವೇಶ ಪಡೆದಿದ್ದಾರೆ. ಆ ಅಭ್ಯರ್ಥಿ ಗೆದ್ದ ಕೂಡಲೇ ಈ ಹಿಂದೆ ಸಂದರ್ಶನವೊಂದರಲ್ಲಿ ನಾಥೂರಾಂ ಗೋಡ್ಸೆ ಪರವಾಗಿ ಮಾತನಾಡಿದ ವಿಡಿಯೋ ವೈರಲ್ ಆಗಿದೆ.

ಡಿಎಂಕೆಯ ರಾಜ್ಯಭಾರ ಚೆನ್ನೈ ಕಾರ್ಪೋರೇಶನ್ ನಲ್ಲಿ ಆರಂಭ
ಇನ್ನೂರು ಸದಸ್ಯ ಬಲದ ಚೆನ್ನೈ ಕಾರ್ಪೋರೇಶನ್ ನಲ್ಲಿ ಡಿಎಂಕೆ 153, ಎಐಎಡಿಎಂಕೆ 15, ಕಾಂಗ್ರೆಸ್ 13 ವಾರ್ಡುಗಳಲ್ಲಿ ಜಯ ಸಾಧಿಸಿದೆ. ಇನ್ನು, ಸಿಪಿಐ(ಎಂ) ನಾಲ್ಕು, ಪಕ್ಷೇತರರು ಐದು, ವಿಸಿಕೆ ನಾಲ್ಕು, ಎಂಡಿಎಂಕೆ ಎರಡು, ಬಿಜೆಪಿ, ಸಿಪಿಐ, ಐಯುಎಂಎಲ್ ಮತ್ತು ಎಎಂಎಂಕೆ ತಲಾ ಒಂದು ಸ್ಥಾನದಲ್ಲಿ ಗೆಲುವು ಸಾಧಿಸಿದೆ. ಆ ಮೂಲಕ, ಮೂರನೇ ಎರಡು ಬಹುಮತದೊಂದಿಗೆ ಡಿಎಂಕೆಯ ರಾಜ್ಯಭಾರ ಚೆನ್ನೈ ಕಾರ್ಪೋರೇಶನ್ ನಲ್ಲಿ ಆರಂಭವಾಗಲಿದೆ.

ವರ್ಷಧಾರೆಗೆ ಈ ವಾರ್ಡಿನ ಭಾಗಗಳಲ್ಲಿ ಹೆಚ್ಚಿನ ಹಾನಿ
ವಾರ್ಡ್ ನಂಬರ್ 134, ಪಶ್ಚಿಮ ಮಾಂಬಲಂ ಕ್ಷೇತ್ರದಲ್ಲಿ ಬಿಜೆಪಿಯ ಉಮಾ ಆನಂದನ್ ಜಯಶೀಲರಾಗಿದ್ದಾರೆ. ಚೆನ್ನೈ ಕಾರ್ಪೋರೇಶನ್ನಲ್ಲಿ ಬಿಜೆಪಿಯ ಏಕಮೇವ ಕೌನ್ಸಿಲರ್ ಇವರಾಗಿದ್ದಾರೆ. ಈಕೆಯ ಗೆಲುವಿಗೆ ಆಡಳಿತ ವಿರೋಧಿ ಅಲೆ ಕಾರಣ ಎಂದು ವ್ಯಾಖ್ಯಾನಿಸಲಾಗುತ್ತಿದೆ. ಹೋದ ವರ್ಷದ ಭಾರೀ ವರ್ಷಧಾರೆಗೆ ಈ ವಾರ್ಡಿನ ಭಾಗಗಳಲ್ಲಿ ಹೆಚ್ಚಿನ ಹಾನಿಗಳಾಗಿದ್ದವು. ಸರಕಾರ ಇಲ್ಲಿನ ಸಮಸ್ಯೆಗಳಿಗೆ ಸರಿಯಾಗಿ ಸ್ಪಂದಿಸದೇ ಇದ್ದಿದ್ದೇ ಉಮಾ ಆನಂದನ್ ಗೆಲುವಿಗೆ ಕಾರಣ ಎಂದು ವಿಶ್ಲೇಷಿಸಲಾಗುತ್ತಿದೆ.

ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಹಂತಕ ನಾಥೂರಾಂ ಗೋಡ್ಸೆ
ಚುನಾವಣಾ ಪ್ರಚಾರದ ವೇಳೆ ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಹಂತಕ ನಾಥೂರಾಂ ಗೋಡ್ಸೆಯನ್ನು ಉಮಾ ಆನಂದನ್ ಹೊಗಳಿದ್ದರು. ಇದರ ಜೊತೆಗೆ, ಮುಸ್ಲಿಂ ಮತ್ತು ಕ್ರಿಶ್ಚಿಯನ್ ಸಮುದಾಯದ ವಿರುದ್ದವೂ ಮಾತನಾಡಿದ್ದರು. ಗನ್ ಮತ್ತು ಕತ್ತಿ ಹಿಡಿಯುವ ಹೆಚ್ಚಿನವರು ಅಲ್ಪಸಂಖ್ಯಾತ ಸಮುದಾಯದವರಾ ಎನ್ನುವ ಮಾಧ್ಯಮಗಳ ಪ್ರಶ್ನೆಗೆ ಉಮಾ ಹೌದು ಎಂದು ಉತ್ತರಿಸಿದ್ದರು. ಉಮಾ ಅವರ ಸಂದರ್ಶನದ ವಿಡಿಯೋ ಅವರ ಗೆಲುವಿನ ನಂತರ ವೈರಲ್ ಆಗಿದೆ.

ಉಮಾ ಆನಂದನ್ ಚೆನ್ನೈ ಕಾರ್ಪೋರೇಶನ್ ನಲ್ಲಿ ಬಿಜೆಪಿಯ ಏಕಮೇವ ಕೌನ್ಸಿಲರ್
ಮಹಾತ್ಮ ಗಾಂಧಿಯವರನ್ನು ಗೋಡ್ಸೆ ಕೊಂದಿದ್ದೇಕೆ ಎನ್ನುವ ಪ್ರಶ್ನೆಗೆ ಉತ್ತರಿಸುತ್ತಾ ಉಮಾ ಆನಂದನ್, "ಗೋಡ್ಸೆ ಯಾತಕ್ಕಾಗಿ ಗಾಂಧಿಯವರನ್ನು ಕೊಂದ ಎನ್ನುವುದಿಲ್ಲಿ ಪ್ರಶ್ನೆ. ಆತ ಹಿಂದೂ ಎನ್ನುವುದನ್ನು ನಾನು ಒಪ್ಪಿಕೊಳ್ಳುತ್ತೇನೆ. ಗಾಂಧಿಯವರನ್ನು ಕೊಲ್ಲಲು ಅವನಿಗೆ ಅವನದ್ದೇ ಆದ ಕಾರಣವಿದ್ದಿರಬಹುದು. ಈ ವಿಚಾರದಲ್ಲಿ ನನಗೆ ಯಾವುದೇ ರೀತಿಯ ವಿಷಾದವಿಲ್ಲ. ನಾನು ನಾಥೂರಾಂ ಗೋಡ್ಸೆಯ ಬೆಂಬಲಿಗ"ಎಂದು ಉಮಾ ಸಂದರ್ಶನದಲ್ಲಿ ಹೇಳಿದ್ದರು.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ












Click it and Unblock the Notifications