ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚಿತ್ರ ನಿರ್ದೇಶಕ ಮಣಿರತ್ನಂ ಕಚೇರಿ, ನಿವಾಸಕ್ಕೆ ಬಾಂಬ್ ಬೆದರಿಕೆ

|
Google Oneindia Kannada News

ಚೆನ್ನೈ, ಅಕ್ಟೋಬರ್ 02: ಖ್ಯಾತ ಸಿನಿಮಾ ನಿರ್ದೇಶಕ ಮಣಿರತ್ನಂ ಅವರ ಕಚೇರಿ ಹಾಗೂ ನಿವಾಸಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ನಿರ್ದೇಶಕ ಮಣಿರತ್ನಂ ಅವರ ಚೆನ್ನೈನ ಅಭಿರಾಮಪುರದಲ್ಲಿನ ನಿವಾಸಕ್ಕೆ ಇಂದು ಬೆಳಿಗ್ಗೆ ಬಾಂಬ್ ಕರೆ ಬಂದಿದೆ. ಮನೆಯಲ್ಲಿ ಇದ್ದ ಮಣಿರತ್ನಂ ಹಾಗೂ ಇತರರನ್ನು ಮನೆಯಿಂದ ಸ್ಥಳಾಂತರ ಮಾಡಲಾಗಿದ್ದು, ಪೊಲೀಸರು, ಬಾಂಬ್ ಸ್ಕ್ವಾಡ್ ಮತ್ತು ಶ್ವಾನದಳ ಬಾಂಬ್‌ಗಾಗಿ ಹುಡುಕಾಟ ನಡೆಸಿವೆ.

ಮೋಜಿಗಾಗಿ ಹುಸಿ ಬಾಂಬ್ ಕರೆ ಮಾಡುತ್ತಿದ್ದವನ ಬಂಧನಮೋಜಿಗಾಗಿ ಹುಸಿ ಬಾಂಬ್ ಕರೆ ಮಾಡುತ್ತಿದ್ದವನ ಬಂಧನ

ಮಣಿರತ್ನಂ ಅವರು ನಿರ್ದೇಶಿಸಿದ್ದ 'ಚೆಕ್ಕ ಚಿವಂತ ವಾನಂ' ಎಂಬ ತಮಿಳು ಸಿನಿಮಾ ಇತ್ತೀಚೆಗಷ್ಟೆ ಬಿಡುಗಡೆ ಆಗಿ ಉತ್ತಮ ಪ್ರದರ್ಶನ ಕಾಣುತ್ತಿದೆ. ಅದರಲ್ಲಿನ ಸಂಭಾಷಣೆಯೊಂದು ವಿವಾದ ಸೃಷ್ಠಿಸಿರುವ ಕಾರಣ ಈ ಬಾಂಬ್ ಬೆದರಿಕೆ ಕರೆ ಬಂದಿದೆ ಎಂದು ಮಣಿರತ್ನಂ ಅವರು ಪೊಲೀಸ್ ದೂರು ದಾಖಲಿಸಿದ್ದಾರೆ.

Bomb threat to director Mani Ratnam’s Chennai office

ಈ ಮುಂಚೆಯೂ ಮಣಿರತ್ನಂ ಅವರ ಮನೆಯ ಮೇಲೆ ಬಾಂಬ್ ದಾಳಿ ನಡೆದಿತ್ತು. ಹಿಂದೂ-ಮುಸ್ಲಿಂ ಯುವಕ-ಯುವತಿಯ ಮದುವೆ ಕತೆ ಹೊಂದಿ೦ದ್ದ 'ಬಾಂಬೆ' ಸಿನಿಮಾ ನಿರ್ದೇಶಿಸಿದ್ದಾಗ ಮಣಿರತ್ನಂ ಅವರ ನಿವಾಸದ ಮೇಲೆ ಬಾಂಬ್ ದಾಳಿ ನಡೆದಿತ್ತು. ಆ ದಾಳಿಯಲ್ಲಿ ಮಣಿರತ್ನಂ ಅವರಿಗೆ ಗಾಯಗಳಾಗಿತ್ತು. ಹಾಗಾಗಿ ಈಗಿನ ಬೆದರಿಕೆ ಕರೆಯನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದಾರೆ.

ಚಿನ್ನಸ್ವಾಮಿ ಕ್ರೀಡಾಂಗಣ ಬಾಂಬ್ ಸ್ಫೋಟ ಪ್ರಕರಣ: ಆರೋಪಿಗಳ ತಪ್ಪೊಪ್ಪಿಗೆಚಿನ್ನಸ್ವಾಮಿ ಕ್ರೀಡಾಂಗಣ ಬಾಂಬ್ ಸ್ಫೋಟ ಪ್ರಕರಣ: ಆರೋಪಿಗಳ ತಪ್ಪೊಪ್ಪಿಗೆ

ಮಣಿರತ್ನಂ ಅವರು ಕನ್ನಡ, ತಮಿಳು, ತೆಲುವು, ಮಲಯಾಳಂ, ಹಿಂದಿ ಭಾಷೆಗಳಲ್ಲಿ ಹಲವು ಸಿನಿಮಾಗಳನ್ನು ನಿರ್ದೇಶಿಸಿದ್ದಾರೆ. ಪಲ್ಲವಿ-ಅನುಪಲ್ಲವಿ, ರೋಜಾ, ಬಾಂಬೆ, ದಿಲ್‌ ಸೆ, ನಾಯಗನ್, ಗೀತಾಂಜಲಿ, ಅಂಜಲಿ ಇನ್ನೂ ಹಲವು ಸಿನಿಮಾಗಳನ್ನು ಅವರು ಭಾರತೀಯ ಸಿನಿಮಾಕ್ಕೆ ನೀಡಿದ್ದಾರೆ. ಅವರ ಕೆಲವು ಸಿನಿಮಾಗಳು ವಿವಿವಾದಗಳನ್ನೂ ಹುಟ್ಟುಹಾಕಿವೆ.

English summary
Film director Manirathnam receives bomb threat call today. Call received at office in Abiramapuram, Chennai. Manirathna once attacked by bomb in 1995 for his Bombay movie.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X