ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬುರೆವಿ ಚಂಡಮಾರುತ : ತಮಿಳುನಾಡಿನಲ್ಲಿ ಹೆಚ್ಚು ಮಳೆ ಸಾಧ್ಯತೆ

|
Google Oneindia Kannada News

ಚೆನ್ನೈ, ಡಿಸೆಂಬರ್ 5: ತಮಿಳುನಾಡು ಹಾಗೂ ಕೇರಳಕ್ಕೆ ಭೀತಿ ಸೃಷ್ಟಿಸಿದ್ದ ಬುರೆವಿ ಚಂಡಮಾರುತ ಶುಕ್ರವಾರ ಅಪ್ಪಳಿಸುವುದಕ್ಕಿಂತ ಮುನ್ನವೇ ವಾಯುಭಾರ ಕುಸಿತವಾಗಿ ಬದಲಾಗಿದೆ.

ಆದರೆ ಕೇರಳದಲ್ಲಿ ಅಪಾಯ ಕಡಿಮೆಯಾಗಿದ್ದು, ತಮಿಳುನಾಡಿನಲ್ಲಿ ಇಂದು ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ.

ತಮಿಳುನಾಡಿನ ರಾಮನಾಥಪುರಂ ಜಿಲ್ಲೆಯ ಮನ್ನಾರ್ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಅದು ನಿಧಾನವಾಗಿ ನೈಋತ್ಯ ದಿಕ್ಕಿನತ್ತ ಚಲಿಸಿ ಇನ್ನಷ್ಟು ದುರ್ಬಲಗೊಳ್ಳಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Burevi Cyclone: Chennai To Get More Rain Today

ವಾಯುಭಾರ ಕುಸಿತದ ಪರಿಣಾಮವಾಗಿ ತಮಿಳುನಾಡು, ಪುದುಚೇರಿ, ಕೇರಳದಲ್ಲಿ ಭಾರಿ ಮಳೆಯಾಗುತ್ತಿದೆ. ಕೇರಳದ 7 ಜಿಲ್ಲೆಗಳಿಗೆ ನೀಡಿದ್ದ ರೆಡ್ ಅಲರ್ಟ್ ಹಿಂಪಡೆಯಲಾಗಿದೆ.

ಪಂಬನ್ ಸಮೀಪದಲ್ಲಿರುವ ಬುರೆವಿ ಚಂಡಮಾರುತ ಗಂಟೆಗೆ 9 ಕಿಲೋ ಮೀಟರ್ ವೇಗದಲ್ಲಿ ಪಶ್ಚಿಮದತ್ತ ಚಲಿಸುತ್ತಿದ್ದು, ಪಂಬನ್‌ನಿಂದ ನೈರುತ್ಯಕ್ಕೆ 20 ಕಿ.ಮೀ ಮತ್ತು ಕನ್ಯಾಕುಮಾರಿಯ ಪೂರ್ವ-ಈಶಾನ್ಯಕ್ಕೆ 210 ಕಿ.ಮೀ ದೂರದಲ್ಲಿರುವ ರಾಮನಾಥಪುರಂ ಕರಾವಳಿಯ ಸಮೀಪದಲ್ಲಿದೆ.

ಶನಿವಾರ ಮುಂಜಾನೆ 50-60 ರಿಂದ 70 ಕಿಲೋ ಮೀಟರ್ ವೇಗದ ಗಾಳಿಯೊಂದಿಗೆ ರಾಮನಾಥಪುರಂ ಮತ್ತು ತುತುಕೂಡಿಯನ್ನು ದಾಟಲಿದೆ. ಭಾನುವಾ ಮುಂಜಾನೆಯಷ್ಟೊತ್ತಿಗೆ ಮುಂಜಾನೆ ಮತ್ತಷ್ಟು ದುರ್ಬಲಗೊಳ್ಳುವ ಸಾಧ್ಯತೆಯಿದೆ ಎಂದು ಪ್ರಾದೇಶಿಕ ಹವಾಮಾನ ಕೇಂದ್ರದ ಸೈಕ್ಲೋನ್ ವಾರ್ನಿಂಗ್ ಸೆಂಟರ್ ನಿರ್ದೇಶಕ ಎನ್. ಪುವಿಯಾರಸನ್ ಹೇಳಿದ್ದಾರೆ.

ರಾಮನಾಥಪುರಂ, ತುತುಕೂಡಿ, ತಿರುನೆಲ್ವೇಲಿ,ಕನ್ಯಾಕುಮಾರಿ, ತೆಂಕಸಿ, ವಿರುಧುನಗರ, ಮಧುರೈ, ಮತ್ತು ಶಿವಗಂಗೈ ಜಿಲ್ಲೆಗಳಲ್ಲಿ ಶನಿವಾರದವರೆಗೂ ಭಾರೀ ಮಳೆ ಮುಂದುವರೆಯಲಿದೆ.

English summary
The deep depression weakened into a depression over the Gulf of Mannar and is likely to remain practically stationary over the same region and weaken into a well-marked low-pressure area, IMD said while referring to cyclone Burevi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X