ಬಿಜೆಪಿ ವಿರುದ್ಧ ಆರೋಪ: ಪುದುಚೇರಿ ವಿಧಾನಸಭೆ ಚುನಾವಣೆ ಮುಂದೂಡುವ ಬಗ್ಗೆ ಕೋರ್ಟ್ ಪ್ರಶ್ನೆ
ಚೆನ್ನೈ, ಮಾರ್ಚ್ 26: ಮುಂದಿನ ತಿಂಗಳು ನಡೆಯಲಿರುವ ಐದು ವಿಧಾನಸಭೆ ಚುನಾವಣೆಗಳ ಪೈಕಿ ಪುದುಚೆರಿ ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆ ಮೇಲೆ ಕರಿನೆರಳು ಆವರಿಸಿದೆ. ಏಪ್ರಿಲ್ 6ರಂದು ನಿಗದಿಯಾಗಿರುವ ಪುದುಚೆರಿ ವಿಧಾನಸಭೆ ಚುನಾವಣೆಯನ್ನು ಮುಂದೂಡಬಹುದೇ ಎಂದು ಚುನಾವಣಾ ಆಯೋಗವನ್ನು ಮದ್ರಾಸ್ ಹೈಕೋರ್ಟ್ ಪ್ರಶ್ನಿಸಿದೆ.
ಬಿಜೆಪಿಯು ಚುನಾವಣಾ ಪ್ರಚಾರದ ಉದ್ದೇಶಕ್ಕಾಗಿ ಅಕ್ರಮವಾಗಿ ಮತದಾರರ ಆಧಾರ್ ವಿವರಗಳನ್ನು ಹಾಗೂ ಅವರ ನೋಂದಾಯಿತ ಫೋನ್ ಸಂಖ್ಯೆಗಳನ್ನು ಸಂಗ್ರಹಿಸಿ ದುರ್ಬಳಕೆ ಮಾಡುತ್ತಿದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಮದ್ರಾಸ್ ಹೈಕೋರ್ಟ್ ಈ ಪ್ರಶ್ನೆ ಇರಿಸಿದೆ.
'ಇದು ಬಹಳ ಗಂಭೀರವಾದ ಕಳವಳಕಾರಿ ವಿಚಾರ' ಎಂದು ವ್ಯಾಖ್ಯಾನಿಸಿದ ನ್ಯಾಯಾಲಯ, ಮಾರ್ಚ್ 30ರ ಒಳಗೆ ಸಂಪೂರ್ಣ ವರದಿ ಸಲ್ಲಿಸುವಂತೆ ಆಯೋಗಕ್ಕೆ ನಿರ್ದೇಶನ ನೀಡಿತು. ಈ ವಿಚಾರದಲ್ಲಿ ಚುನಾವಣಾ ಆಯೋಗ ಮೂಕಪ್ರೇಕ್ಷಕನಂತೆ ನಿಂತಿದೆ. ವಿಷಯವನ್ನು ಅದರ ಅಗತ್ಯಕ್ಕೆ ತಕ್ಕಂತೆ ಗಂಭೀರವಾಗಿ ಪರಿಗಣಿಸಲಿ ಎಂದು ಸೂಚನೆ ನೀಡಿತು.

'ಈ ಪ್ರಕರಣದಲ್ಲಿ ಸೈಬರ್ ಕ್ರೈಂ ವಿಭಾಗ ತನಿಖೆ ನಡೆಸುತ್ತಿದೆ ಎಂದು ಚುನಾವಣಾ ಆಯೋಗ ಜವಾಬ್ದಾರಿಯಿಂದ ನುಣುಚಿಕೊಳ್ಳಲಾಗದು. ಇಂತಹ ಎಲ್ಲ ಪ್ರಕರಣಗಳೂ ಚುನಾವಣಾ ಆಯೋಗದ ಕರ್ತವ್ಯ ಮತ್ತು ಅಧಿಕಾರದಲ್ಲಿ ಬರುತ್ತವೆ. ಈ ಆರೋಪದ ಬಗ್ಗೆ ಅದು ತಕ್ಷಣವೇ ಗಮನ ಹರಿಸಬೇಕು. ಹಾಗೂ ಅದರ ಗಂಭೀರತೆಗೆ ಅನುಗುಣವಾಗಿ ಕಾನೂನು ಕ್ರಮ ತೆಗೆದುಕೊಳ್ಳಬೇಕು' ಎಂದು ಮುಖ್ಯ ನ್ಯಾಯಮೂರ್ತಿ ಸಂಜೀಬ್ ಬ್ಯಾನರ್ಜಿ ಮತ್ತು ನ್ಯಾಯಮೂರ್ತಿ ಸೆಂಥಿಲ್ ಕುಮಾರ್ ರಾಮಮೂರ್ತಿ ಅವರನ್ನು ಒಳಗೊಂಡ ಇಬ್ಬರು ಸದಸ್ಯರ ನ್ಯಾಯಪೀಠ ಆದೇಶದಲ್ಲಿ ತಿಳಿಸಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications