ಹಿಂದೂ ಭಯೋತ್ಪಾದನೆ ಹೇಳಿಕೆ, ಕಮಲ್ ಹಾಸನ್ ವಿರುದ್ಧ ದೂರು
ಚೆನ್ನೈ, ನವೆಂಬರ್ 3: ಹಿಂದೂಗಳಲ್ಲಿ ಉಗ್ರವಾದ, ಭಯೋತ್ಪಾದನೆ ಇದೆ. ಇಲ್ಲ ಎಂದು ಬಲಪಂಥೀಯರು ಸವಾಲು ಹಾಕುವಂತಿಲ್ಲ. ಕಾರಣ, ಹಿಂದೂಗಳ ಕ್ಯಾಂಪಿನಲ್ಲೂ ಭಯೋತ್ಪಾದನೆ ಹರಡಿದೆ ಎಂದು ಕಮಲ್ ತಮ್ಮ ಅಂಕಣದಲ್ಲಿ ಹೇಳಿದ್ದರು.
ಇದೀಗ ಈ ಸಂಬಂಧ ಅವರ ಮೇಲೆ ಪ್ರಕರಣ ದಾಖಲಾಗಿದೆ. ಐಪಿಸಿ ಸೆಕ್ಷನ್ 500, 511, 298, 295 (a) ಮತ್ತು 505 (c) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣದ ವಿಚಾರಣೆ ನಾಳೆ ಅಂದರೆ ಶನಿವಾರ ನಡೆಯಲಿದೆ.

ತಮಿಳು ನಿಯತಕಾಲಿಕೆಗೆ ಬರೆದ ತಮ್ಮ ವಾರದ ಅಂಕಣದಲ್ಲಿ ಕಮಲ್ ಹಾಸನ್, ಹಿಂದೂ ಸಂಘಟನೆಗಳು ವಿರೋಧಿಗಳ ಧ್ವನಿ ಅಡಗಿಸಲು ಭುಜ ಬಲ ಬಳಸುತ್ತಿದ್ದಾರೆ ಎಂದು ಹೇಳಿದ್ದರು. ಅವರ ಈ ಲೇಖನದ ವಿರುದ್ಧ ಕಿಡಿಕಾರಿದ್ದ ಆರ್.ಎಸ್.ಎಸ್ ಮತ್ತು ಬಿಜೆಪಿ ತಕ್ಷಣ ಈ ಲೇಖನವನ್ನು ಹಿಂತೆಗೆದುಕೊಳ್ಳಬೇಕು ಮತ್ತು ಕ್ಷಮೆ ಕೇಳಬೇಕು ಎಂದು ಆಗ್ರಹಿಸಿತ್ತು.
ಜತೆ ಜತೆಗೆ ಬಿಜೆಪಿ ರಾಷ್ಟ್ರೀಯ ವಕ್ತಾರ ನರಸಿಂಹ ರಾವ್ ಕಮಲ್ ಹಾಸನ್ ರನ್ನು ಲಷ್ಕರ್ ಇ ತಯ್ಯಬಾ ಸಂಸ್ಥಾಪಕ ಹಫೀಜ್ ಸಯೀದ್ ಗೆ ಹೋಲಿಸಿದ್ದರು.
ಇದೀಗ ಕಮಲ್ ಹಾಸನ್ ವಿರುದ್ಧ ಪ್ರಕರಣ ದಾಖಲಾಗಿದ್ದು ಶನಿವಾರ ವಿಚಾರಣೆ ನಡೆಯಲಿದೆ.












Click it and Unblock the Notifications