ತಮಿಳುನಾಡಿನಲ್ಲಿ ಕನ್ನಡಿಗರ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ
ಚೆನ್ನೈ, ಸೆ. 12: ತಮಿಳುನಾಡಿನಲ್ಲಿರುವ ಕನ್ನಡಿಗರ ಮೇಲೆ ದುಷ್ಕರ್ಮಿಗಳು ಹಲ್ಲೆ ಮಾಡಿದ್ದಾರೆ. ಕನ್ನಡಿಗರಿಗೆ ಸೇರಿರುವ ವಾಹನ, ಕಚೇರಿ ಮೇಲೆ ದಾಳಿ ನಡೆದಿದೆ. ಚೆನ್ನೈನ ಹೋಟೆಲ್ ವೊಂದರ ಮೇಲೆ 6 ಪೆಟ್ರೋಲ್ ಬಾಂಬ್ ಗಳನ್ನು ಸೋಮವಾರ ಬೆಳಗ್ಗೆ ಎಸೆಯಲಾಗಿದೆ.
ಚೆನ್ನೈನಲ್ಲಿರುವ ನ್ಯೂ ವುಡ್ ಲ್ಯಾಂಡ್ಸ್ ಹೋಟೆಲ್ ಮೇಲೆ ಪೆಟ್ರೋಲ್ ಬಾಂಬ್ ಎಸೆಯಲಾಗಿದೆ. ಬೆಂಗಳೂರಿನಲ್ಲಿ ತಮಿಳುನಾಡು ಮೂಲದ ಯುವಕನೊಬ್ಬನಿಗೆ ಕನ್ನಡಿಗರು ಗೂಸಾ ಕೊಟ್ಟ ಪ್ರತಿಕಾರಕ್ಕಾಗಿ ಈ ದಾಳಿ ನಡೆಸಲಾಗಿದೆ ಎಂದು ತಿಳಿದು ಬಂದಿದೆ. [Live : 12 ಸಾವಿರ ಕ್ಯೂಸೆಕ್ ನೀರು ಹರಿಸಲು ಆದೇಶ]

ಕನ್ನಡ ಚಲನಚಿತ್ರ ನಟ, ನಟಿಯರ ವಿರುದ್ಧ ಅವಹೇಳನಕಾರಿ ಕಾಮೆಂಟ್ ಮಾಡಿ, ಟ್ರಾಲ್ ಮಾಡುತ್ತಿದ್ದ ತಮಿಳುನಾಡು ಮೂಲದ ಯುವಕನೊಬ್ಬನ ಮೇಲೆ ಬೆಂಗಳೂರಿನ ಗಿರಿನಗರದಲ್ಲಿ ಕನ್ನಡಿಗರ ಗುಂಪೊಂದು ಹಲ್ಲೆ ಮಾಡಿತ್ತು. ಇದು ಸಾಮಾಜಿಕ ಜಾಲ ತಾಣಗಳಲ್ಲಿ ಭಾರಿ ಚರ್ಚೆಯಾಗಿತ್ತು.

ಇದರಿಂದ ರೊಚ್ಚಿಗೆದ್ದ ತಮಿಳರು, ಸೋಮವಾರ ಚೆನ್ನೈನಲ್ಲಿರುವ ಕನ್ನಡಿಗರನ್ನು ಗುರಿಯಾಗಿಸಿಕೊಂಡು ಹಲ್ಲೆ ಮಾಡುತ್ತಿದ್ದಾರೆ. ತಮಿಳರ ಮೇಲೆ ಹಲ್ಲೆ ಮುಂದುವರೆದರೆ ಇಲ್ಲಿರುವ ಕನ್ನಡಿಗರಿಗೂ ಅದೇ ಗತಿಯಾಗುತ್ತದೆ ಎಂಬರ್ಥದ ಪಾಂಪ್ಲೇಟ್ ಗಳನ್ನು ಹಂಚಲಾಗುತ್ತಿದೆ. ಟೂರಿಸ್ಟ್ ಗಳಿದ್ದ ಬಸ್ ಅಡ್ಡಗಟ್ಟಿ ಗಾಜುಗಳನ್ನ ಪುಡಿ ಪುಡಿ ಮಾಡಿದ್ದಾರೆ.
#WATCH: Bus from Karnataka vandalised by Naam Tamilar Katchi party workers in Rameswaram, driver threatened #Cauvery pic.twitter.com/3til65O5jU
— ANI (@ANI_news) September 12, 2016
ಕನ್ನಡಿಗರ ಮೇಲೆ ಹಲ್ಲೆ ಮಾಡಿದವರನ್ನು ನಾಮ್ ತಮಿಳರ್ ಕಚ್ಚಿಯವರು ಎಂದು ತಿಳಿದು ಬಂದಿದೆ. ಹಲ್ಲೆಕೋರರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಕನ್ನಡಿಗರು ಇರುವ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಒದಗಿಸಲಾಗಿದೆ ಎಂದು ಚೆನ್ನೈ ಪೊಲೀಸರು ತಿಳಿಸಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications