ತಮಿಳುನಾಡಿನಲ್ಲಿ ಕನ್ನಡಿಗರ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ
ಚೆನ್ನೈ, ಸೆ. 12: ತಮಿಳುನಾಡಿನಲ್ಲಿರುವ ಕನ್ನಡಿಗರ ಮೇಲೆ ದುಷ್ಕರ್ಮಿಗಳು ಹಲ್ಲೆ ಮಾಡಿದ್ದಾರೆ. ಕನ್ನಡಿಗರಿಗೆ ಸೇರಿರುವ ವಾಹನ, ಕಚೇರಿ ಮೇಲೆ ದಾಳಿ ನಡೆದಿದೆ. ಚೆನ್ನೈನ ಹೋಟೆಲ್ ವೊಂದರ ಮೇಲೆ 6 ಪೆಟ್ರೋಲ್ ಬಾಂಬ್ ಗಳನ್ನು ಸೋಮವಾರ ಬೆಳಗ್ಗೆ ಎಸೆಯಲಾಗಿದೆ.
ಚೆನ್ನೈನಲ್ಲಿರುವ ನ್ಯೂ ವುಡ್ ಲ್ಯಾಂಡ್ಸ್ ಹೋಟೆಲ್ ಮೇಲೆ ಪೆಟ್ರೋಲ್ ಬಾಂಬ್ ಎಸೆಯಲಾಗಿದೆ. ಬೆಂಗಳೂರಿನಲ್ಲಿ ತಮಿಳುನಾಡು ಮೂಲದ ಯುವಕನೊಬ್ಬನಿಗೆ ಕನ್ನಡಿಗರು ಗೂಸಾ ಕೊಟ್ಟ ಪ್ರತಿಕಾರಕ್ಕಾಗಿ ಈ ದಾಳಿ ನಡೆಸಲಾಗಿದೆ ಎಂದು ತಿಳಿದು ಬಂದಿದೆ. [Live : 12 ಸಾವಿರ ಕ್ಯೂಸೆಕ್ ನೀರು ಹರಿಸಲು ಆದೇಶ]

ಕನ್ನಡ ಚಲನಚಿತ್ರ ನಟ, ನಟಿಯರ ವಿರುದ್ಧ ಅವಹೇಳನಕಾರಿ ಕಾಮೆಂಟ್ ಮಾಡಿ, ಟ್ರಾಲ್ ಮಾಡುತ್ತಿದ್ದ ತಮಿಳುನಾಡು ಮೂಲದ ಯುವಕನೊಬ್ಬನ ಮೇಲೆ ಬೆಂಗಳೂರಿನ ಗಿರಿನಗರದಲ್ಲಿ ಕನ್ನಡಿಗರ ಗುಂಪೊಂದು ಹಲ್ಲೆ ಮಾಡಿತ್ತು. ಇದು ಸಾಮಾಜಿಕ ಜಾಲ ತಾಣಗಳಲ್ಲಿ ಭಾರಿ ಚರ್ಚೆಯಾಗಿತ್ತು.

ಇದರಿಂದ ರೊಚ್ಚಿಗೆದ್ದ ತಮಿಳರು, ಸೋಮವಾರ ಚೆನ್ನೈನಲ್ಲಿರುವ ಕನ್ನಡಿಗರನ್ನು ಗುರಿಯಾಗಿಸಿಕೊಂಡು ಹಲ್ಲೆ ಮಾಡುತ್ತಿದ್ದಾರೆ. ತಮಿಳರ ಮೇಲೆ ಹಲ್ಲೆ ಮುಂದುವರೆದರೆ ಇಲ್ಲಿರುವ ಕನ್ನಡಿಗರಿಗೂ ಅದೇ ಗತಿಯಾಗುತ್ತದೆ ಎಂಬರ್ಥದ ಪಾಂಪ್ಲೇಟ್ ಗಳನ್ನು ಹಂಚಲಾಗುತ್ತಿದೆ. ಟೂರಿಸ್ಟ್ ಗಳಿದ್ದ ಬಸ್ ಅಡ್ಡಗಟ್ಟಿ ಗಾಜುಗಳನ್ನ ಪುಡಿ ಪುಡಿ ಮಾಡಿದ್ದಾರೆ.
#WATCH: Bus from Karnataka vandalised by Naam Tamilar Katchi party workers in Rameswaram, driver threatened #Cauvery pic.twitter.com/3til65O5jU
— ANI (@ANI_news) September 12, 2016
ಕನ್ನಡಿಗರ ಮೇಲೆ ಹಲ್ಲೆ ಮಾಡಿದವರನ್ನು ನಾಮ್ ತಮಿಳರ್ ಕಚ್ಚಿಯವರು ಎಂದು ತಿಳಿದು ಬಂದಿದೆ. ಹಲ್ಲೆಕೋರರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಕನ್ನಡಿಗರು ಇರುವ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಒದಗಿಸಲಾಗಿದೆ ಎಂದು ಚೆನ್ನೈ ಪೊಲೀಸರು ತಿಳಿಸಿದ್ದಾರೆ.












Click it and Unblock the Notifications