ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಾವೇರಿ ನಿರ್ವಹಣಾ ಮಂಡಳಿ ರಚಿಸದಿದ್ದರೆ ಆತ್ಮಹತ್ಯೆ:ಸಂಸದನಿಂದ ಬೆದರಿಕೆ

|
Google Oneindia Kannada News

ಚೆನ್ನೈ, ಮಾರ್ಚ್ 29: ಕೇಂದ್ರ ಸರ್ಕಾರ ಕಾವೇರಿ ನಿರ್ವಹಣ ಮಂಡಳಿ ರಚಿಸುವಲ್ಲಿ ವಿಫಲವಾದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಎಐಎಡಿಎಂಕೆ ಸಂಸದ ಎ.ನವನೀತಕೃಷ್ಣನ್ ಬೆದರಿಕೆ ಒಡ್ಡಿದ್ದಾರೆ.

ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಫೆ.16 ರಂದು ಸುಪ್ರೀಂ ಕೋರ್ಟ್ ನೀಡಿದ್ದ ತೀರ್ಪಿನಲ್ಲಿ ಆರು ವಾರಗಳಲ್ಲಿ ಕೇಂದ್ರ ಸರ್ಕಾರವು ಕಾವೇರಿ ನಿರ್ವಹಣಾ ಮಂಡಳಿಯನ್ನು ನಿರ್ಮಿಸಲು ಆದೇಶ ನೀಡಿತ್ತು. ಆದರೆ ಕೇಂದ್ರ ಸರ್ಕಾರ, ಮಂಡಳಿ ನಿರ್ಮಾಣದಲ್ಲಿ ವಿಳಂಬ ನೀತಿ ಅನುಸರಿಸುತ್ತಿದೆ ಎಂದು ದೂರಿ ನವನೀತಕೃಷ್ಣನ್ ಈ ರೀತಿ ಬೆದರಿಕೆ ಒಡ್ಡಿದ್ದಾರೆ.

ಸುಪ್ರೀಂನಲ್ಲಿ ಸಲ್ಲಿಕೆಯಾಗದ ಮೇಲ್ಮನವಿ, ಕಾವೇರಿ ವಿವಾದ ಅಂತ್ಯ?ಸುಪ್ರೀಂನಲ್ಲಿ ಸಲ್ಲಿಕೆಯಾಗದ ಮೇಲ್ಮನವಿ, ಕಾವೇರಿ ವಿವಾದ ಅಂತ್ಯ?

ಈ ಮೊದಲೂ 'ಕಾವೇರಿ ನಿರ್ವಹಣಾ ಮಂಡಳಿ' ರಚಿಸುವಂತೆ ಕೋರಿ ಹಲವು ದಿನಗಳ ಕಾಲ ಎಐಎಡಿಎಂಕೆ ಸಚಿವರು ಸಂಸತ್ತಿನೆದುರು ಧರಣಿ ನಡೆಸಿದ್ದನ್ನು ಇಲ್ಲಿ ಉಲ್ಲೇಖಿಸಬಹುದು.

Cauvery row: AIADMK MP threatens to commit suicide

ಸುಪ್ರೀಂ ಕೋರ್ಟ್ ತೀರ್ಪಿನನ್ವಯ ಕರ್ನಾಟಕ ತಮಿಳುನಾಡಿಗೆ ನೀಡುತ್ತಿದ್ದ 192 ಟಿಎಂಸಿ ಅಡಿ ನೀರಿಗೆ ಬದಲಾಗಿ 177.25 ಟಿಎಂಸಿ ಅಡಿ ನೀರನ್ನಷ್ಟೇ ನೀಡಲು ಆದೇಶಿಸಿತ್ತು. ಇದರಿಂದಾಗಿ ಕರ್ನಾಟಕದ ಬಳಿ 14.75 ಟಿಎಂಸಿ ಅಡಿ ಹೆಚ್ಚುವರಿ ನೀರು ಉಳಿದಂತಾಗಿದೆ. ಇದರೊಂದಿಗೆ ಕಾವೇರಿ ಜಲ ನಿರ್ವಹಣಾ ಮಂಡಳಿ ರಚನೆ ಕೇಂದ್ರ ಸರ್ಕಾರದ ಕೆಲಸ ಎಂದು ಸಹ ಹೇಳಿತ್ತು.

English summary
All India Anna Dravida Munnetra Kazhagam(AIADMK) MP A. Navaneethakrishnan on Thursday threatened that he will commit suicide if the Centre failed to constitute a Cauvery Management Board (CMB) by the March 29.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X