ದೂರವಾಣಿ ದುರ್ಬಳಕೆ: ಮಾರನ್ ಸಹೋದರರ ಖುಲಾಸೆ ಪ್ರಶ್ನಿಸಿ ಸಿಬಿಐ ಮೇಲ್ಮನವಿ
ಚೆನ್ನೈ, ಜೂನ್ 12: ದೂರವಾಣಿ ಸಂಪರ್ಕದ ದುರ್ಬಳಕೆ ಪ್ರಕರಣದಲ್ಲಿ ಕೇಂದ್ರದ ಮಾಜಿ ಸಚಿವ ದಯಾನಿಧಿ ಮಾರನ್ ಮತ್ತು ಅವರ ಹಿರಿಯ ಸಹೋದರ ಕಲಾನಿಧಿ ಮಾರನ್ ಅವರನ್ನು ಆರೋಪಮುಕ್ತಗೊಳಿಸಿರುವ ಸಿಬಿಐ ವಿಶೇಷ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಸಿಬಿಐ ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿದೆ.
ಸಿಬಿಐ ವಿಶೇಷ ನ್ಯಾಯಾಲಯವು ಮಾರನ್ ಸಹೋದರರು ನಿರಪರಾಧಿಗಳು ಎಂದು ತೀರ್ಪು ನೀಡಿದ ಮೂರು ತಿಂಗಳ ಬಳಿಕ ಸಿಬಿಐ ಅದನ್ನು ಪ್ರಶ್ನಿಸಿದೆ.
ಅಪರಾಧ ಪರಿಷ್ಕರಣೆ ಅರ್ಜಿಯನ್ನು ಮಾನ್ಯ ಮಾಡಿದ ನ್ಯಾಯಮೂರ್ತಿ ಜಿ. ಜಯಚಂದ್ರನ್, ಮಾರನ್ ಸಹೋದರರು ಮತ್ತು ಇತರೆ ಐವರು ಆರೋಪಿಗಳಿಗೆ ಜೂನ್ 20ರ ಒಳಗೆ ನೋಟಿಸ್ ನೀಡುವಂತೆ ಆದೇಶ ನೀಡಿದೆ.

ಮಾರ್ಚ್ 14ರಂದು ತೀರ್ಪು ನೀಡಿದ್ದ ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ನಟರಾಜನ್, ಎಲ್ಲ ಏಳು ಮಂದಿ ಆರೋಪಿಗಳ ವಿರುದ್ಧದ ಆರೋಪಗಳನ್ನು ಸಾಬೀತುಪಡಿಸಲು ಯಾವುದೇ ಮೇಲ್ಮಟ್ಟದ ಪುರಾವೆಗಳು ಲಭ್ಯವಿಲ್ಲ ಎಂದು ಅವರನ್ನು ಆರೋಪಮುಕ್ತಗೊಳಿಸಿದ್ದರು.
2004ರ ಜೂನ್ನಿಂದ 2006ರ ಡಿಸೆಂಬರ್ ಅವಧಿಯಲ್ಲಿ ಕೇಂದ್ರ ದೂರಸಂಪರ್ಕ ಮತ್ತು ಮಾಹಿತಿ ತಂತ್ರಜ್ಞಾನ ಸಚಿವರಾಗಿದ್ದ ದಯಾನಿಧಿ ಮಾರನ್, ತಮ್ಮ ಕಚೇರಿಯನ್ನು ದುರ್ಬಳಕೆ ಮಾಡಿಕೊಂಡು ತಮ್ಮ ಮನೆಯಲ್ಲಿಯೇ ಟೆಲಿಫೋನ್ ಎಕ್ಸ್ಚೇಂಜ್ ಅನ್ನು ಸ್ಥಾಪಿಸಿದ್ದರು.
ಈ ದೂರವಾಣಿ ಸಂಪರ್ಕವನ್ನು ತಮ್ಮ ಮಾಲೀಕತ್ವದ ಸನ್ ನೆಟ್ವರ್ಕ್ನ ಕಾರ್ಯಕ್ರಮಗಳ ಪ್ರಸಾರಕ್ಕಾಗಿ ಅಕ್ರಮವಾಗಿ ಬಳಸಿಕೊಂಡಿದ್ದರು.
ಈ ಅವಧಿಯಲ್ಲಿ ಅವರಿಗೆ ಒದಗಿಸಲಾಗಿದ್ದ 764 ದೂರವಾಣಿ ಸಂಪರ್ಕಗಳಿಗೆ ಶುಲ್ಕ ಪಾವತಿ ಮಾಡಿರಲಿಲ್ಲ. ಇದರಿಂದ ಬಿಎಸ್ಎನ್ಎಲ್ ಮತ್ತು ಎಂಟಿಎನ್ಎಲ್ಗೆ 1.78 ಕೋಟಿ ನಷ್ಟ ಉಂಟಾಗಿತ್ತು ಎಂದು ಸಿಬಿಐ ಆರೋಪಿಸಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications