ದೂರವಾಣಿ ದುರ್ಬಳಕೆ: ಮಾರನ್ ಸಹೋದರರ ಖುಲಾಸೆ ಪ್ರಶ್ನಿಸಿ ಸಿಬಿಐ ಮೇಲ್ಮನವಿ
ಚೆನ್ನೈ, ಜೂನ್ 12: ದೂರವಾಣಿ ಸಂಪರ್ಕದ ದುರ್ಬಳಕೆ ಪ್ರಕರಣದಲ್ಲಿ ಕೇಂದ್ರದ ಮಾಜಿ ಸಚಿವ ದಯಾನಿಧಿ ಮಾರನ್ ಮತ್ತು ಅವರ ಹಿರಿಯ ಸಹೋದರ ಕಲಾನಿಧಿ ಮಾರನ್ ಅವರನ್ನು ಆರೋಪಮುಕ್ತಗೊಳಿಸಿರುವ ಸಿಬಿಐ ವಿಶೇಷ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಸಿಬಿಐ ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿದೆ.
ಸಿಬಿಐ ವಿಶೇಷ ನ್ಯಾಯಾಲಯವು ಮಾರನ್ ಸಹೋದರರು ನಿರಪರಾಧಿಗಳು ಎಂದು ತೀರ್ಪು ನೀಡಿದ ಮೂರು ತಿಂಗಳ ಬಳಿಕ ಸಿಬಿಐ ಅದನ್ನು ಪ್ರಶ್ನಿಸಿದೆ.
ಅಪರಾಧ ಪರಿಷ್ಕರಣೆ ಅರ್ಜಿಯನ್ನು ಮಾನ್ಯ ಮಾಡಿದ ನ್ಯಾಯಮೂರ್ತಿ ಜಿ. ಜಯಚಂದ್ರನ್, ಮಾರನ್ ಸಹೋದರರು ಮತ್ತು ಇತರೆ ಐವರು ಆರೋಪಿಗಳಿಗೆ ಜೂನ್ 20ರ ಒಳಗೆ ನೋಟಿಸ್ ನೀಡುವಂತೆ ಆದೇಶ ನೀಡಿದೆ.

ಮಾರ್ಚ್ 14ರಂದು ತೀರ್ಪು ನೀಡಿದ್ದ ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ನಟರಾಜನ್, ಎಲ್ಲ ಏಳು ಮಂದಿ ಆರೋಪಿಗಳ ವಿರುದ್ಧದ ಆರೋಪಗಳನ್ನು ಸಾಬೀತುಪಡಿಸಲು ಯಾವುದೇ ಮೇಲ್ಮಟ್ಟದ ಪುರಾವೆಗಳು ಲಭ್ಯವಿಲ್ಲ ಎಂದು ಅವರನ್ನು ಆರೋಪಮುಕ್ತಗೊಳಿಸಿದ್ದರು.
2004ರ ಜೂನ್ನಿಂದ 2006ರ ಡಿಸೆಂಬರ್ ಅವಧಿಯಲ್ಲಿ ಕೇಂದ್ರ ದೂರಸಂಪರ್ಕ ಮತ್ತು ಮಾಹಿತಿ ತಂತ್ರಜ್ಞಾನ ಸಚಿವರಾಗಿದ್ದ ದಯಾನಿಧಿ ಮಾರನ್, ತಮ್ಮ ಕಚೇರಿಯನ್ನು ದುರ್ಬಳಕೆ ಮಾಡಿಕೊಂಡು ತಮ್ಮ ಮನೆಯಲ್ಲಿಯೇ ಟೆಲಿಫೋನ್ ಎಕ್ಸ್ಚೇಂಜ್ ಅನ್ನು ಸ್ಥಾಪಿಸಿದ್ದರು.
ಈ ದೂರವಾಣಿ ಸಂಪರ್ಕವನ್ನು ತಮ್ಮ ಮಾಲೀಕತ್ವದ ಸನ್ ನೆಟ್ವರ್ಕ್ನ ಕಾರ್ಯಕ್ರಮಗಳ ಪ್ರಸಾರಕ್ಕಾಗಿ ಅಕ್ರಮವಾಗಿ ಬಳಸಿಕೊಂಡಿದ್ದರು.
ಈ ಅವಧಿಯಲ್ಲಿ ಅವರಿಗೆ ಒದಗಿಸಲಾಗಿದ್ದ 764 ದೂರವಾಣಿ ಸಂಪರ್ಕಗಳಿಗೆ ಶುಲ್ಕ ಪಾವತಿ ಮಾಡಿರಲಿಲ್ಲ. ಇದರಿಂದ ಬಿಎಸ್ಎನ್ಎಲ್ ಮತ್ತು ಎಂಟಿಎನ್ಎಲ್ಗೆ 1.78 ಕೋಟಿ ನಷ್ಟ ಉಂಟಾಗಿತ್ತು ಎಂದು ಸಿಬಿಐ ಆರೋಪಿಸಿದೆ.
-
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
ವಾಂಖೆಡೆಯಲ್ಲಿ ಆರ್ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Duet Songs: ಆಶಾ ಭೋಸ್ಲೆ-ಲತಾ ಮಂಗೇಶ್ಕರ್ ಸಹೋದರಿಯರ ಕಂಠಸಿರಿಯಲ್ಲಿ ಅರಳಿದ ಮಾಧುರ್ಯ: ಒಟ್ಟಿಗೆ ಹಾಡಿದ ಹಿಟ್ ಹಾಡುಗಳಿವು -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
ಎಪಿಎಂಸಿಯಲ್ಲಿ ಮೂಟೆಗಳು ಮೈಮೇಲೆ ಬಿದ್ದರೂ ಪವಾಡಸದೃಶ್ಯದಂತೆ ಬದುಕಿದ ಮಹಿಳೆ Video Viral -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
BESCOM Mithra: 'ಬೆಸ್ಕಾಂ ಮಿತ್ರ' ಸೇವೆ ತಾತ್ಕಾಲಿಕ ಸ್ಥಗಿತ, ಸುಧಾರಿತ ವ್ಯವಸ್ಥೆ ಶೀಘ್ರವೇ ಲಭ್ಯ











Click it and Unblock the Notifications