ಕಾಂಗ್ರೆಸ್ ನಾಯಕಿ ಜಯಂತಿ ನಟರಾಜನ್ ನಿವಾಸದ ಮೇಲೆ ಸಿಬಿಐ ದಾಳಿ
ಚೆನ್ನೈ, ಸೆಪ್ಟೆಂಬರ್ 9: ತಮಿಳುನಾಡಿನ ಕಾಂಗ್ರೆಸ್ ನಾಯಕಿ ಜಯಂತಿ ನಟರಾಜನ್ ಅವರ ನಿವಾಸದ ಮೇಲೆ ಶನಿವಾರ ಸಿಬಿಐ ಅಧಿಕಾರಿಗಳು ದಾಳಿ ನಡೆಸಿ ಕೆಲವಾರು ದಾಖಲೆಗಳ ಪರಿಶೀಲನೆ ನಡೆಸಿ, ಎಫ್ ಐಆರ್ ದಾಖಲಿಸಿದೆ.
ಜಯಂತಿ ನಟರಾಜನ್ ವಿವಾದ: ಮೊದಲ ಬಾರಿ ಬಾಯ್ಬಿಟ್ಟ ರಾಹುಲ್
2009ರಿಂದ 2014ರವರೆಗಿನ ಅವಧಿಯಲ್ಲಿ ಕೇಂದ್ರದಲ್ಲಿ ಯುಪಿಎ-2 ಸರ್ಕಾರ ಅಸ್ತಿತ್ವದಲ್ಲಿದ್ದಾಗ, ಜಯಂತಿ ನಟರಾಜನ್ ಅವರು ಕೇಂದ್ರ ಪರಿಸರ ಖಾತೆ ಸಚಿವರಾಗಿದ್ದರು.
ಆ ಸಂದರ್ಭದಲ್ಲಿ, ಜಿಂದಾಲ್ ಸ್ಟೀಲ್ ಮತ್ತು ಪವರ್ ಲಿಮಿಟೆಡ್ ಹಾಗೂ ಜೆಎಸ್ ಡಬ್ಲ್ಯೂ ಸ್ಟೀಲ್ ಲಿಮಿಟೆಡ್ ಎಂಬ ಎರಡು ಕಂಪನಿಗಳು ಜಾರ್ಖಂಡ್ ನ ಅರಣ್ಯ ಭೂಮಿಯ ಕೆಲ ಭಾಗಗಳಲ್ಲಿ ಅಕ್ರಮವಾಗಿ ಗಣಿಗಾರಿಕೆ ಮಾಡಿದ್ದವು.
ಜಯಂತಿ ನಟರಾಜನ್ ಕಾಂಗ್ರೆಸ್ ವಿದಾಯದ ಹಿಂದಿನ ರಹಸ್ಯವೇ ಬೇರೆ?
ಈ ಕಂಪನಿಗಳಿಗೆ ಅರಣ್ಯ ಭೂಮಿಯನ್ನು ಅಕ್ರಮವಾಗಿ ಒತ್ತುವರಿ ಮಾಡಲು ಆಗಿನ ಕೇಂದ್ರ ಪರಿಸರ ಖಾತೆ ಸಚಿವೆಯಾಗಿದ್ದ ಜಯಂತಿ ನಟರಾಜನ್ ಅವರು ಸಾಥ್ ನೀಡಿದ್ದರೆಂಬ ಆರೋಪ ಅವರ ವಿರುದ್ಧ ಕೇಳಿಬಂದಿತ್ತು.
ಇದೀಗ, ಆ ಪ್ರಕರಣದ ತನಿಖೆಗೆ ನಡೆಸುತ್ತಿರುವ ಸಿಬಿಐ, ಶನಿವಾರ (ಸೆ. 9) ಇಲ್ಲಿನ ಅವರ ನಿವಾಸದ ಮೇಲೆ ದಾಳಿ ನಡೆಸಿ ಹಲವಾರು ದಾಖಲೆಗಳನ್ನು ಪರಿಶೀಲಿಸಿದೆ.