ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಾಂಗ್ರೆಸ್ ನಾಯಕಿ ಜಯಂತಿ ನಟರಾಜನ್ ನಿವಾಸದ ಮೇಲೆ ಸಿಬಿಐ ದಾಳಿ

|
Google Oneindia Kannada News

ಚೆನ್ನೈ, ಸೆಪ್ಟೆಂಬರ್ 9: ತಮಿಳುನಾಡಿನ ಕಾಂಗ್ರೆಸ್ ನಾಯಕಿ ಜಯಂತಿ ನಟರಾಜನ್ ಅವರ ನಿವಾಸದ ಮೇಲೆ ಶನಿವಾರ ಸಿಬಿಐ ಅಧಿಕಾರಿಗಳು ದಾಳಿ ನಡೆಸಿ ಕೆಲವಾರು ದಾಖಲೆಗಳ ಪರಿಶೀಲನೆ ನಡೆಸಿ, ಎಫ್ ಐಆರ್ ದಾಖಲಿಸಿದೆ.

ಜಯಂತಿ ನಟರಾಜನ್ ವಿವಾದ: ಮೊದಲ ಬಾರಿ ಬಾಯ್ಬಿಟ್ಟ ರಾಹುಲ್ಜಯಂತಿ ನಟರಾಜನ್ ವಿವಾದ: ಮೊದಲ ಬಾರಿ ಬಾಯ್ಬಿಟ್ಟ ರಾಹುಲ್

2009ರಿಂದ 2014ರವರೆಗಿನ ಅವಧಿಯಲ್ಲಿ ಕೇಂದ್ರದಲ್ಲಿ ಯುಪಿಎ-2 ಸರ್ಕಾರ ಅಸ್ತಿತ್ವದಲ್ಲಿದ್ದಾಗ, ಜಯಂತಿ ನಟರಾಜನ್ ಅವರು ಕೇಂದ್ರ ಪರಿಸರ ಖಾತೆ ಸಚಿವರಾಗಿದ್ದರು.

CBI raids former union minister Jayanthi Natarajan's house in Chennai

ಆ ಸಂದರ್ಭದಲ್ಲಿ, ಜಿಂದಾಲ್ ಸ್ಟೀಲ್ ಮತ್ತು ಪವರ್ ಲಿಮಿಟೆಡ್ ಹಾಗೂ ಜೆಎಸ್ ಡಬ್ಲ್ಯೂ ಸ್ಟೀಲ್ ಲಿಮಿಟೆಡ್ ಎಂಬ ಎರಡು ಕಂಪನಿಗಳು ಜಾರ್ಖಂಡ್ ನ ಅರಣ್ಯ ಭೂಮಿಯ ಕೆಲ ಭಾಗಗಳಲ್ಲಿ ಅಕ್ರಮವಾಗಿ ಗಣಿಗಾರಿಕೆ ಮಾಡಿದ್ದವು.

ಜಯಂತಿ ನಟರಾಜನ್ ಕಾಂಗ್ರೆಸ್ ವಿದಾಯದ ಹಿಂದಿನ ರಹಸ್ಯವೇ ಬೇರೆ?ಜಯಂತಿ ನಟರಾಜನ್ ಕಾಂಗ್ರೆಸ್ ವಿದಾಯದ ಹಿಂದಿನ ರಹಸ್ಯವೇ ಬೇರೆ?

ಈ ಕಂಪನಿಗಳಿಗೆ ಅರಣ್ಯ ಭೂಮಿಯನ್ನು ಅಕ್ರಮವಾಗಿ ಒತ್ತುವರಿ ಮಾಡಲು ಆಗಿನ ಕೇಂದ್ರ ಪರಿಸರ ಖಾತೆ ಸಚಿವೆಯಾಗಿದ್ದ ಜಯಂತಿ ನಟರಾಜನ್ ಅವರು ಸಾಥ್ ನೀಡಿದ್ದರೆಂಬ ಆರೋಪ ಅವರ ವಿರುದ್ಧ ಕೇಳಿಬಂದಿತ್ತು.

ಇದೀಗ, ಆ ಪ್ರಕರಣದ ತನಿಖೆಗೆ ನಡೆಸುತ್ತಿರುವ ಸಿಬಿಐ, ಶನಿವಾರ (ಸೆ. 9) ಇಲ್ಲಿನ ಅವರ ನಿವಾಸದ ಮೇಲೆ ದಾಳಿ ನಡೆಸಿ ಹಲವಾರು ದಾಖಲೆಗಳನ್ನು ಪರಿಶೀಲಿಸಿದೆ.

English summary
Officials of the Central Bureau of Investigation are carrying out searches at the premises of former Environment minister Jayanthi Natarajan. Raids are being conducted at the former Congress leader's properties in Chennai.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X