ಅಧ್ಯಕ್ಷರಾಗುತ್ತಿದ್ದಂತೆಯೇ ಕೇಂದ್ರದ ಮೇಲೆ ವಾಗ್ದಾಳಿ ಮಾಡಿದ ಸ್ಟಾಲಿನ್
ಚೆನ್ನೈ, ಆಗಸ್ಟ್ 28: "ಕೇಂದ್ರ ಸರ್ಕಾರ ಜಾತ್ಯತೀತ ತತ್ವಗಳಿಗೆ ಧಕ್ಕೆಯನ್ನುಂಟುಮಾಡುತ್ತಿದೆ" ಎಂದು ಡಿಎಂಕೆ ನೂತನ ಅಧ್ಯಕ್ಷ ಎಂಕೆ ಸ್ಟಾಲಿನ್ ಹೇಳಿದ್ದಾರೆ.
ಇಂದು ಬೆಳಿಗ್ಗೆಯಷ್ಟೇ ದ್ರಾವಿಡ ಮುನ್ನೆಟ್ರ ಕಳಗಂ(ಡಿಎಂಕೆ) ಪಕ್ಷದ ಅಧ್ಯಕ್ಷರಾಗಿ ಆಯ್ಕೆಯಾದ ಎಂಕೆ ಸ್ಟಾಲಿನ್, ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.
"ಇಂದಿನ ರಾಜಕೀಯ ಒಂದು ದೊಡ್ಡ ಸವಾಲಾಗಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧರ್ಮ ಇವೆಲ್ಲವೂ ಕೋಮುವಾದಿ ಶಕ್ತಿಗಳಿಂದ ದಾಳಿಗೊಳಗಾಗುತ್ತಿವೆ. ನ್ಯಾಯಾಂಗವನ್ನು ಅಸ್ಥಿರಗೊಳಿಸಲು ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿದೆ. ಇವೆಲ್ಲ ಸೇರಿ ಜಾತ್ಯತೀತ ತತ್ತ್ವಕ್ಕೆ ಧಕ್ಕೆಯಾಗುತ್ತಿದೆ" ಎಂದು ಸ್ಟಾಲಿನ್ ಹೇಳಿದರು.

ಪಕ್ಷದ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಅವರು ಪಕ್ಷದ ನಾಯಕರು ಮತ್ತು ಕಾರ್ಯಕರ್ತರನ್ನುದ್ದೇಶಿಸಿ ಚೆನ್ನೈನಲ್ಲಿ ಮಾತನಾಡಿದರು.
ಮಾಜಿ ಮುಖ್ಯಮಂತ್ರಿ ಎಂ ಕರುಣಾನಿಧಿ ಅವರ ನಿಧನಾನಂತರ ತೆರವಾದ ಅಧ್ಯಕ್ಷ ಸ್ಥಾನಕ್ಕೆ 65 ವರ್ಷ ವಯಸ್ಸಿನ ಸ್ಟಾಲಿನ್ ಆಯ್ಕೆಯಾಗಿದ್ದಾರೆ.












Click it and Unblock the Notifications