ಇಂಡಿಯನ್ 2 ಸೆಟ್ ನಲ್ಲಿ ಅಪಘಾತ, ಶಂಕರ್ ಪವಾಡ ಸದೃಶ ಪಾರು
ಚೆನ್ನೈ, ಫೆಬ್ರವರಿ 20: ಯೂನಿವರ್ಸಲ್ ಸ್ಟಾರ್ ಕಮಲ್ ಹಾಸನ್ ನಟನೆಯ ಬಹುನಿರೀಕ್ಷೆಯ ಇಂಡಿಯನ್ 2 ಚಿತ್ರದ ಚಿತ್ರೀಕರಣ ವೇಳೆಯಲ್ಲಿ ಭಾರಿ ಅವಘಡ ಸಂಭವಿಸಿದೆ. ನಿರ್ದೇಶಕ ಶಂಕರ್ ಅವರು ಪವಾಡ ಸದೃಶ ರೀತಿಯಲ್ಲಿ ಅಪಾಯದಿಂದ ಪಾರಾಗಿದ್ದಾರೆ. ಆದರೆ, ಕ್ರೇನ್ ಬಿದ್ದ ಪರಿಣಾಮ ಮೂವರು ಮೃತಪಟ್ಟಿದ್ದು, ಅನೇಕರಿಗೆ ಗಾಯಗಳಾಗಿವೆ.
ಇಂಡಿಯನ್ 2 ಗಾಗಿ ಸೆಟ್ ನಿರ್ಮಾಣ ವೇಳೆಯಲ್ಲಿ ಕ್ರೇನ್ ಕುಸಿದು ಬಿದ್ದಿದೆ. ಕ್ರೇನ್ ಪಕ್ಕದಲ್ಲೇ ನಿರ್ದೇಶನ ನೀಡುತ್ತಿದ್ದ ಶಂಕರ್ ಹಾಗೂ ತಂಡದ ಸದಸ್ಯರು ತಕ್ಷಣವೇ ಪಾರಾಗಲು ಯತ್ನಿಸಿದ್ದಾರೆ. ಆದರೆ, ಶಂಕರ್ ಅವರ ಸಹಾಯಕರ ಮೇಲೆ ಕ್ರೇನ್ ಬಿದ್ದ ಪರಿಣಾಮ ಸ್ಥಳದಲ್ಲೇ ಮೃತ ಪಟ್ಟಿದ್ದಾರೆ. ಮೂವರು ಮೃತಪಟ್ಟಿದ್ದರೆ, 10 ಮಂದಿಗೆ ಗಾಯಗಳಾಗಿವೆ.

ಈ ಬಗ್ಗೆ ಭಾರಿ ದುಃಖ ವ್ಯಕ್ತಪಡಿಸಿರುವ ನಟ ಕಮಲ್ ಹಾಸನ್, ಟ್ವಿಟ್ಟರ್ ನಲ್ಲಿ ದುರಂತದ ಬಗ್ಗೆ ಬರೆದುಕೊಂಡಿದ್ದಾರೆ. ನಾನು ಅನೇಕ ದುರಂತಗಳನ್ನು ಕಂಡಿದ್ದೇನೆ, ಆದರೆ, ಇದು ದೊಡ್ಡ ನೋವು ತಂದಿರುವ ಅಪಘಾತ. ನನ್ನ ಜೊತೆಗಾರರನ್ನು ಕಳೆದುಕೊಂಡಿದ್ದೇನೆ. ನಮ್ಮ ದುಃಖ ನೋವಿಗಿಂತ ಅವರ ಕುಟುಂಬಸ್ಥರ ನೋವು ಹಿರಿದಾಗಿದ್ದು, ಅವರ ದುಃಖದಲ್ಲಿ ನಾವು ಭಾಗಿಯಾಗಿದ್ದೇವೆ. ತೀವ್ರ ಸಂತಾಪ ವ್ಯಕ್ತಪಡಿಸುತ್ತಿದ್ದೇನೆ ಎಂದಿದ್ದಾರೆ.
#Indian2 mishap: 3 dead & 9 injured in the crane accident. The injured have been taken to a nearby hospital. Director Shankar is unhurt. pic.twitter.com/62Ux5Bav53
— Shabbir Ahmed (@Ahmedshabbir20) February 19, 2020
ಪ್ರಾಥಮಿಕ ವರದಿಯಂತೆ, ಶಂಕರ್ ಅವರ ಕಾಲು ಮುರಿದಿರುವ ಸುದ್ದಿ ಬಂದಿತ್ತು. ಆದರೆ, ನಂತರ ಅದು ಸುಳ್ಳು ಸುದ್ದಿ ಎಂದು ಚಿತ್ರ ತಂಡ ಸ್ಪಷ್ಟಪಡಿಸಿದೆ. ಶಂಕರ್ ಅವರ ನಿರ್ದೇಶಕ ತಂಡದ ಸಹಾಯಕರಾಗಿದ್ದ ಕೃಷ್ಣ(34), ಸಹಾಯಕ ಮಧು (29) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮತ್ತೊಬ್ಬರು ಆಸ್ಪತ್ರೆಗೆ ಸಾಗಿಸುವಾಗ ಮೃತರಾಗಿದ್ದಾರೆ. ಇವಿಪಿ ಸ್ಟುಡಿಯೋಸ್ ನಲ್ಲಿ ಚಿತ್ರೀಕರಣ ನಡೆಯುತ್ತಿದ್ದು, ಲೈಟ್ ಸೆಟ್ ಅಪ್ ಗಾಗಿ ಬಳಸಿದ್ದ ಕ್ರೇನ್ ಬಿದ್ದ ಪರಿಣಾಮ ದುರಂತ ಸಂಭವಿಸಿದೆ.ಕಮಲ್ ಹಾಸನ್, ರಾಕುಲ್ ಪ್ರೀತ್ ಸಿಂಗ್, ಸಿದ್ದಾರ್ಥ್ ಮುಖ್ಯಭೂಮಿಕೆಯಲ್ಲಿರುವ ಚಿತ್ರವು 2021ರಲ್ಲಿ ತೆರೆಗೆ ಬರಲಿದೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video












Click it and Unblock the Notifications