ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಚೆನ್ನೈ ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್
ಚೆನ್ನೈ, ಮಾರ್ಚ್ 16: ಚೆನ್ನೈ ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಏರ್ ಲೈನ್ ಗೆ ಬಾಂಬ್ ಬೆದರಿಕೆ ಬಂದಿರುವ ಹಿನ್ನಲೆಯಲ್ಲಿ ಈ ಕ್ರಮ ಜರುಗಿಸಲಾಗಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ಹೇಳಿದ್ದಾರೆ.
ಉಪರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು ಹಾಗೂ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಚೆನ್ನೈಗೆ ಶುಕ್ರವಾರ ಬೆಳಗ್ಗೆ ಆಗಮಿಸುವ ಕಾರ್ಯಕ್ರಮ ನಿಗದಿಯಾಗಿದೆ. ಇದಕ್ಕೂ ಮುನ್ನ ಈ ರೀತಿ ಬೆದರಿಕೆ ಕರೆ ಬಂದಿದೆ.
ಚೆನ್ನೈ ಹಾಗೂ ಹೈದರಾಬಾದ್ ನಡುವಿನ ವಿಮಾನ ಸಂಚಾರಕ್ಕೆ ಬೆದರಿಕೆ ಕರೆ ಬಂದಿದೆ. ದಿನವೊಂದರಲ್ಲಿ ಎರಡು ನಗರಗಳ ನಡುವೆ ಸುಮಾರು 22 ವಿಮಾನಗಳು ಸಂಚರಿಸುತ್ತವೆ.
ಬಾಂಬ್ ಬೆದರಿಕೆ ಹಿನ್ನಲೆಯಲ್ಲಿ ವಿಮಾನ ನಿಲ್ದಾಣಕ್ಕೆ ಬಾಂಬ್ ನಿಷ್ಕ್ರಿಯ ದಳ, ಶ್ವಾನದಳ ಆಗಮಿಸಿದ್ದು ಪರಿಶೀಲಿಸುತ್ತಿದ್ದಾರೆ. ಬೆದರಿಕೆ ಕರೆ ಬಗ್ಗೆ ತನಿಖೆ ಆರಂಭವಾಗಿದೆ.
Comments
English summary
Chennai airport officials were put on high alert following a bomb threat call to an airline, hours before the arrival of the vice president and defence minister to the Tamil Nadu capital.
Story first published: Friday, March 16, 2018, 12:22 [IST]