ಶೀತಕ್ಕೆ ತಾನೇ ಕಂಡುಹಿಡಿದ ಔಷಧ ಸೇವಿಸಿ ಫಾರ್ಮಾಸಿಸ್ಟ್ ಸಾವು
ಚೆನ್ನೈ, ಮೇ 8: ತಾನೇ ಕಂಡು ಹಿಡಿದಿದ್ದ ಔಷಧ ಸೇವಿಸಿ ಚೆನ್ನೈನ ಫಾರ್ಮಾಸಿಸ್ಟ್ ಒಬ್ಬರು ಮೃತಪಟ್ಟಿರುವ ಘಟನೆ ವರದಿಯಾಗಿದೆ.
ಒಂದೆಡೆ ಇಡೀ ವಿಶ್ವವೇ ಲುಗಿಹೋಗಿರುವ ಕೊರೊನಾ ವೈರಸ್ಗೆ ಔಷಧ ಕಂಡುಹಿಡಿಲು ವಿಜ್ಞಾನಿಗಳು ಕಷ್ಟ ಪಡುತ್ತಿದ್ದಾರೆ. ಇನ್ನೊಂದೆಡೆ ಶೀತಕ್ಕಾಗಿ ತಾನೇ ಕಂಡು ಹಿಡಿದಿದ್ದ ಔಷಧ ಸೇವಿಸಿ ಫಾರ್ಮಾಸಿಸ್ಟ್ ಮೃತಪಟ್ಟಿದ್ದಾರೆ.
ಚೆನ್ನೈ ಮೂಲದ 47 ವರ್ಷದ ಫಾರ್ಮಾಸಿಸ್ಟ್ ಶಿವನೇಸನ್ ತೀನಂಪೇಟ್ ನಲ್ಲಿ ಸಾವನ್ನಪ್ಪಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ ಶಿವನೇಸನ್ ಪೆರುಂಗುಡಿ ನಿವಾಸಿಯಾಗಿದ್ದು, ಫಾರ್ಮಸಿ ಪದವಿ ಹೊಂದಿದ್ದ ಈತ ಖಾಸಗಿ ಬೈಯೋಟೆಕ್ ಸಂಸ್ಥೆಯಲ್ಲಿ ಪ್ರೊಡಕ್ಷನ್ ಮ್ಯಾನೇಜರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ.

ಈ ಉತ್ತರಾಖಂಡ್ ನಲ್ಲಿ ಕೆಲಸ ಮಾಡುತ್ತಿದ್ದ ಈತ ಅದೇ ಸಂಸ್ಥೆಯ ಚೆನ್ನೈನ ಕೊಡಂಬಕ್ಕಂನ ಭೂಪತಿ ನಗರದ ಬ್ರಾಂಚ್ ಗೆ ವರ್ಗಾವಣೆಯಾಗಿದ್ದ. ಪ್ರಸ್ತುತ ಪ್ರಕರಣ ದಾಖಲಿಸಿಕೊಂಡಿರುವ ತೇನಂಪೇಟ್ ಪೊಲೀಸರು ವಿಚಾರಣೆ ನಡೆಸುತ್ತಿದ್ದು, ಮೃತ ಶಿವನೇಸನ್ ದೇಹವನ್ನು ಮರಣೋತ್ತರ ಪರೀಕ್ಷೆ ರವಾನಿಸಿದ್ದಾರೆ.
ಅಂತೆಯೇ ಔಷಧಿ ತಯಾರಿಕೆಯಲ್ಲಿ ವೈದ್ಯ ರಾಜ್ ಕುಮಾರ್ ಪಾತ್ರದ ಕುರಿತು ಶಂಕಿಸಿದ್ದು, ಆತನ ಸಾವಿಗೆ ಸೋಡಿಯಂ ನೈಟ್ರೇಟ್ ಕಾರಣವಾಗಿರಬಹುದು ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.
ಕಳೆದ ಹಲವು ತಿಂಗಳಿನಿಂದ ಈತ ಶೀತಕ್ಕೆ ಸಂಬಂಧಿಸಿದ ಔಷಧಿ ಕಂಡು ಹಿಡಿಯುವಲ್ಲಿ ನಿರತನಾಗಿದ್ದ. ಗುರುವಾರ ಸಂಜೆ ತಾನು ಕಂಡು ಹಿಡಿದಿದ್ದ ಔಷಧಿಯನ್ನು ತೇನಂಪೇಟ್ ನಲ್ಲಿರುವ ವೈದ್ಯ ಡಾ.ರಾಜ್ ಕುಮಾರ್ ಬಳಿಗೆ ತಂದಿದ್ದ. ಈ ವೇಳೆ ಔಷಧಿ ಪರೀಕ್ಷೆಗಾಗಿ ಶಿವನೇಸನ್ ಮತ್ತು ವೈದ್ಯ ರಾಜ್ ಕುಮಾರ್ ಇಬ್ಬರೂ ಸೇವಿಸಿದ್ದರು.
ವೈದ್ಯ ರಾಜ್ ಕುಮಾರ್ ಅಲ್ಪ ಪ್ರಮಾಣದ ಔಷಧ ಸೇವಿಸಿದರೆ, ಶಿವನೇಸನ್ ಇಡೀ ಔಷಧಿಯನ್ನು ಸೇವಿಸಿದ್ದ. ಔಷಧ ಸೇವಿಸಿದ ಕೆಲವೇ ಕ್ಷಣಗಳಲ್ಲಿ ಶವನೇಸನ್ ಪ್ರಜ್ಞೆ ತಪ್ಪಿದ್ದು, ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಬಳಿಕ ಅವರು ಸಾವನ್ನಪ್ಪಿದ್ದಾರೆ.
-
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
Prem: ಆಗ ಅಪ್ಪಾಜಿ-ಅಂಬರೀಷಣ್ಣ ಇದ್ರು, ಈಗ ಯಾರಿದ್ದಾರೆ; ಕೆಡಿ ವಿವಾದ ಆದಾಗಲೂ ಯಾರೂ ಸಪೋರ್ಟ್ಗೆ ಬರಲಿಲ್ಲ: ಪ್ರೇಮ್ ಬೇಸರ












Click it and Unblock the Notifications