ತಮಿಳುನಾಡು ಪ್ರವಾಹ ಸಂತ್ರಸ್ತರಿಗೆ ಉಚಿತ ಟಾಕ್ಟೈಮ್
ಚೆನ್ನೈ, ಡಿಸೆಂಬರ್, 02: ಚೆನ್ನೈ ಪ್ರವಾಹದಲ್ಲಿ ಸಿಲುಕಿ ಒದ್ದಾಡುತ್ತಿರುವವರ ನೆರವಿಗೆ ಮೊಬೈಲ್ ಕಂಪನಿಗಳು ನಿಂತಿವೆ. ಉಚಿತ ಟಾಕ್ ಟೈಮ್, ಡಾಟಾ ನೀಡುತ್ತೇವೆ ಎಂದು ಅಧಿಕೃತವಾಗಿ ಘೊಷಣೆ ಮಾಡಿವೆ.
ಭಾರತ ದೂರ ಸಂಚಾರ ನಿಗಮ (ಬಿಎಸ್ ಎನ್ ಎಲ್) ಮುಂದಿನ 1 ವಾರಗಳ ಕಾಲ ಉಚಿತ ದೂರವಾಣಿ ಸೇವೆ ನೀಡಲಿದೆ. ಬಿಲ್ ಪಾವತಿಸದೇ ಇರುವ ಟೆಲಿಫೋನ್ ಗಳಿಗೂ ಸೇವೆ ಕಲ್ಪಿಸಲಿದೆ. ಒಲಾ ಕ್ಯಾಬ್ ಗಳು ಸಹ ನೆರವಿಗೆ ಧಾವಿಸುತ್ತಿವೆ.[ಜಲ ಪ್ರಳಯ: ನೀರಿನಲ್ಲಿ ಸಿಲುಕಿ ದ್ವೀಪವಾದ ಚೆನ್ನೈ]

ತನ್ನ ಗ್ರಾಹಕರಿಗೆ ಏರ್ ಟೆಲ್ 30 ರೂಪಾಯಿ ಕರೆನ್ಸಿ, 50 ಎಂಬಿ ಡಾಟಾ ಫ್ರೀ ಕೊಡುವುದಾಗಿ ಘೋಷಿಸಿದೆ. ಈ ಬಗ್ಗೆ ಅಧಿಕೃತ ಹೇಳಿಕೆ ನೀಡಿರುವ ವೋಡಾಪೋನ್ ತನ್ನ ಗ್ರಾಹಕರಿಗೆ 10 ರು. ಉಚಿತ ಟಾಕ್ ಟೈಮ್, ವೋಡಾಫೋನ್ ನಿಂದ ವೋಡಾಫೊನ್ ಗೆ 10 ನಿಮಿಷ ಉಚಿತ ಕರೆ ಸೌಲಭ್ಯ ಮತ್ತು 100 ಎಂಬಿ ಡಾಟಾ ನೀಡುವುದಾಗಿ ಹೇಳಿದೆ. ಬಿಲ್ ಪಾವತಿಸದ ಗ್ರಾಹಕರಿಗೂ ಸೌಲಭ್ಯ ವಿಸ್ತರಣೆ ಮಾಡಿದೆ,. ಮುಂದಿನ ಎರಡು ದಿನಗಳ ಕಾಲ ಈ ಸವಲತ್ತುಗಳನ್ನು ಜಾರಿಯಲ್ಲಿ ಇಡುತ್ತೇವೆ ಎಂದು ವೋಡಾಫೋನ್ ತಿಳಿಸಿದೆ.[ತಮಿಳುನಾಡಲ್ಲಿ ಮಳೆ ಅವಾಂತರ ಹೇಗಿದೆ?]
ಪ್ರವಾಹಕ್ಕೆ ಸಿಲುಕಿ ಸಂತ್ರಸ್ತರಾಗಿರುವವರ ನೆರವಿಗೆ ಕೇಂದ್ರ ಸರ್ಕಾರ ನಿಂತಿದೆ. ಸೈನ್ಯ ಮತ್ತು ಸ್ವಯಂ ಸೇವಕರು ರಕ್ಷಣಾ ಕಾರ್ಯದಲ್ಲಿ ನಿರತರಾಗಿದ್ದಾರೆ. ವಿವಿಧ ರಾಜ್ಯಗಳು ಮತ್ತು ಸ್ವಯಂ ಸೇವಾ ಸಂಸ್ಥೆಗಳು ಆಹಾರ ಸೇರಿದಂತೆ ವಿವಿಧ ನೆರವು ನೀಡುತ್ತಿವೆ.
-
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
IMD Weather Forecast: ದೇಶದ ಈ ಭಾಗಗಳಲ್ಲಿ ಮಾರ್ಚ್ ಅಂತ್ಯದಲ್ಲಿ ಭಾರೀ ಮಳೆ ಮುನ್ಸೂಚನೆ: ಐಎಂಡಿ ಎಚ್ಚರಿಕೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
Bengaluru Airport: ಮಳೆ ಅಬ್ಬರಕ್ಕೆ 30 ವಿಮಾನಗಳ ಮಾರ್ಗ ಬದಲು, ಏರ್ಪೋರ್ಟ್ ಟರ್ಮಿನಲ್ನಲ್ಲಿ ನೀರು ಸೋರಿಕೆ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ












Click it and Unblock the Notifications