ಚೆನ್ನೈ: ಇನ್ಫೋಸಿಸ್ ಮಹಿಳಾ ಉದ್ಯೋಗಿ ಬರ್ಬರ ಹತ್ಯೆ
ಚೆನ್ನೈ, ಜೂನ್.24: ಚೆನ್ನೈನಲ್ಲಿ ಇನ್ಫೋಸಿಸ್ ಮಹಿಳಾ ಉದ್ಯೋಗಿಯೊಬ್ಬರನ್ನು ಹಾಡಹಗಲೇ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಚೆನ್ನೈನ ನುಂಗಂಬಾಕಂ ರೈಲು ನಿಲ್ದಾಣದಲ್ಲಿ ಬರ್ಬರ ಕೃತ್ಯ ನಡೆದಿದೆ.
ಮುಂಜಾನೆಯೇ 6.30ಕ್ಕೆ ನೆತ್ತರು ಹರಿದಿದೆ. ಕಚೇರಿಗೆ ತೆರಳಲು ನಿಂತಿದ್ದ್ 24 ವರ್ಷದ ಸ್ವಾತಿ ಎಂಬ ಯುವತಿಯನ್ನು ಯುವಕನೊಬ್ಬ ಚೂರಿಯಿಂದ ಮನಬಂದಂತೆ ಇರಿದು ಹತ್ಯೆ ಮಾಡಿದ್ದಾನೆ.[ಚೆನ್ನೈ ಸ್ಫೋಟಕ್ಕೆ ಬೆಂಗಳೂರು ರೈಲು ನಿಲ್ದಾಣದಲ್ಲಿ ಬಾಂಬ್ ಜೋಡಣೆ]

ಚೂಳೈಮೇಡು ಗಂಗೈ ಅಮ್ಮನ್ ಸ್ಟ್ರೀಟ್ ನಿವಾಸಿ ಯುವತಿಯನ್ನು ಆಕೆಯ ತಂದೆ ಎಂದಿನಂತೆ ರೈಲು ನಿಲ್ದಾಣಕ್ಕೆ ಕರೆ ತಂದು ಬಿಟ್ಟಿದ್ದಾರೆ. ಆದರೆ ಇದ್ದಕ್ಕಿದ್ದಂತೆ ಆಗಮಿಸಿದ ಯುವಕನೊಬ್ಬ ಯುವತಿ ಮೇಲೆ ಎರಗಿದ್ದು ಮನಬಂದಂತೆ ಇರಿದಿದ್ದಾನೆ.
ಇತರ ಪ್ರಯಾಣಿಕರು ಆಕೆಯ ಹತ್ತಿರ ಧಾವಿಸುವಷ್ಟರಲ್ಲಿ ಯುವತಿ ಕೊನೆ ಉಸಿರು ಎಳೆದಿದ್ದಾಳೆ. ಯುವತಿಗೆ ಪರಿಚಯ ಇರುವ ವ್ಯಕ್ತಿಯೇ ಕೃತ್ಯ ಎಸಗಿದ್ದಾನೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.[ಧಾರವಾಡದಲ್ಲಿ ಜಿಲ್ಲಾ ಪಂಚಾಯತಿ ಸದಸ್ಯನ ಹತ್ಯೆ]
ಈ ಬಗ್ಗೆ ಪ್ರತಿಕ್ರಿಯಿಸಿರುವ ಇನ್ಫೋಸಿಸ್ ಸಂಸ್ಥೆ, ಈ ಘಟನೆಯಿಂದ ಆಘಾತವಾಗಿದ್ದು ಇದರ ಬಗ್ಗೆ ಹೆಚ್ಚಿನ ತನಿಖೆಗೆ ಸಹಕರಿಸುತ್ತೇವೆ ಎಂದು ತಿಳಿಸಿದೆ. ಯುವತಿಯ ಸ್ನೇಹಿತರೂ ಕೂಡ ಘಟನೆಯಿಂದ ಶಾಕ್ ಆಗಿದ್ದಾರೆ. ಹತ್ಯೆಗೀಡಾದ ಯುವತಿ ಪ್ರತಿದಿನ ರೈಲಿನಲ್ಲಿ ಪ್ರಯಾಣಿಸುತ್ತಿದ್ದಳು. ನಿಲ್ದಾಣದಲ್ಲಿ ಸಿಸಿಟಿವಿ ಇಲ್ಲದ ಕಾರಣ ಆರೋಪಿ ಪತ್ತೆ ಮಾಡುವುದು ಪೊಲೀಸರಿಗೆ ಸವಾಲಿನ ಕೆಲಸವಾಗಿದೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ












Click it and Unblock the Notifications