Get Updates
Get notified of breaking news, exclusive insights, and must-see stories!

ಚೆನ್ನೈ ಐಟಿ ದಾಳಿ: ಶೇಖರ್ ರೆಡ್ಡಿ ಸೇರಿದಂತೆ 3 ಜನ ಬಂಧನ

ಮನಿ ಲಾಂಡ್ರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿಟಿಡಿ ಮಾಜಿ ಬೋರ್ಡ್ ಸದಸ್ಯ ಜೆ ಶೇಖರ್ ರೆಡ್ಡಿ ಸೇರಿದಂತೆ ಮೂವರನ್ನು ಸಿಬಿಐ ತಂಡ ಬುಧವಾರ ಬಂಧಿಸಿದೆ.

ಚೆನ್ನೈ, ಡಿಸೆಂಬರ್ 21: ಮನಿ ಲಾಂಡ್ರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿಟಿಡಿ ಮಾಜಿ ಬೋರ್ಡ್ ಸದಸ್ಯ ಜೆ ಶೇಖರ್ ರೆಡ್ಡಿ ಸೇರಿದಂತೆ ಮೂವರನ್ನು ಸಿಬಿಐ ತಂಡ ಬುಧವಾರ ಬಂಧಿಸಿದೆ.

ಶೇಖರ್ ರೆಡ್ಡಿ, ಶ್ರೀನಿವಾಸ್ ರೆಡ್ಡಿ ಹಾಗೂ ಪ್ರೇಮ್ ಅವರನ್ನು ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಜನವರಿ 03ರ ತನಕ ನ್ಯಾಯಾಂಗ ಬಂಧನ ವಿಧಿಸಲಾಗಿದೆ. [ಮುಖ್ಯ ಕಾರ್ಯದರ್ಶಿ ಸಂಬಂಧಿಕರ ಮನೇಲಿ ಸಿಕ್ತು ಕೆಜಿಗಟ್ಟಲೆ ಚಿನ್ನ]

Chennai IT raids: CBI arrests Sekhar Reddy, others

ಆದಾಯ ತೆರಿಗೆ ಅಧಿಕಾರಿಗಳು ಚೆನ್ನೈನ ಸಚಿವಾಲಯದ ಮೇಲೆ ದಾಳಿ ನಡೆಸಿದ ಬಳಿಕ ಅದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರ ಮನೆ, ಕಚೇರಿ ಮೇಲೆ ದಾಳಿ ನಡೆಸಿ 170 ಕೋಟಿ ರು ನಗದು ಹಾಗೂ 130 ಕೆಜಿ ಚಿನ್ನ ಹಾಗೂ ಆಭರಣವನ್ನು ಜಪ್ತಿ ಮಾಡಿದ್ದರು. ಚೆನ್ನೈ ನ ಎಂಟು ಕಡೆಗಳಲ್ಲಿ, ವೆಲ್ಲೂರು ಹಾಗೂ ಮುಂತಾದೆಡೆಗಳಲ್ಲಿ ದಾಳಿ ನಡೆಸಲಾಗಿತ್ತು.

Chennai IT raids: CBI arrests Sekhar Reddy, others

ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ 1988, ಮನಿ ಲಾಂಡ್ರಿಂಗ್ ನಿಯಂತ್ರಣ ಕಾಯ್ದೆ (PMLA) ಉಲ್ಲಂಘನೆ ಆರೋಪದ ಮೇಲೆ ಸಿಬಿಐ ಈ ಮೂವರ ಮೇಲೆ ಎಫ್ ಐಆರ್ ದಾಖಲಿಸಿದೆ. ಜಾರಿ ನಿರ್ದೇಶನಾಲಯ ಕೂಡಾ ಐಪಿಸಿ ಸೆಕ್ಷನ್ 120 ಬಿ, 409, 420 ಅನ್ವಯ ಪ್ರಕರಣ ದಾಖಲಿಸಿಕೊಂಡಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+