ಚೆನ್ನೈ ವ್ಯಕ್ತಿ ಪೊಲೀಸ್ ಕಸ್ಟಡಿಯಲ್ಲಿ ಸಾವು- 2 ತಿಂಗಳಲ್ಲಿ 2ನೇ ಪ್ರಕರಣ
ಚೆನ್ನೈ ಜೂನ್ 13: ತಮಿಳುನಾಡಿನ ಚೆನ್ನೈನಲ್ಲಿ ಭಾನುವಾರ ಸಂಜೆ 30 ವರ್ಷದ ವ್ಯಕ್ತಿಯೊಬ್ಬರು ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದು, ಇದು ಎರಡು ತಿಂಗಳಲ್ಲಿ ರಾಜ್ಯದಲ್ಲಿ ನಡೆದ ಎರಡನೇ ಘಟನೆಯಾಗಿದೆ. ಕಳೆದ ಶನಿವಾರ ಕೊಡಂಗಯ್ಯೂರು ಪೊಲೀಸರು ರಾಜಶೇಖರ್ ಅವರನ್ನು ವಶಕ್ಕೆ ಪಡೆದಿದ್ದರು. ಈತನ ವಿರುದ್ಧ 20ಕ್ಕೂ ಹೆಚ್ಚು ಕ್ರಿಮಿನಲ್ ಮೊಕದ್ದಮೆಗಳಿವೆ ಎಂದು ಆರೋಪಿಸಲಾಗಿದೆ.
ತಿರುವಳ್ಳೂರು ಜಿಲ್ಲೆಯ ನಿವಾಸಿ ರಾಜಶೇಖರ್ ಕೂಡ ಅಪರಾಧವನ್ನು ಒಪ್ಪಿಕೊಂಡಿದ್ದರು. ಈ ವೇಳೆ ಆತ ಅಸ್ವಸ್ಥನಾಗಿರುವುದು ಕಂಡುಬಂದಿದೆ. ಕೂಡಲೇ ಪೊಲೀಸರು ಆತನನ್ನು ಆಸ್ಪತ್ರೆ ಕರೆದೊಯ್ದಿದ್ದಾರೆ. ಅಲ್ಲಿ ಅವರು ಚಿಕಿತ್ಸೆಯ ನಂತರ ಉತ್ತಮವಾಗಿದ್ದು ಬಳಿಕ ಅವರನ್ನು ಮತ್ತೆ ಪೊಲೀಸ್ ಠಾಣೆಗೆ ಕರೆತರಲಾಗಿತ್ತು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಐವರು ಪೊಲೀಸ್ ಸಿಬ್ಬಂದಿ ಅಮಾನತು
ಅವರು ಪತ್ತೆ ಅಸ್ವಸ್ಥಗೊಂಡಿದ್ದು ಸರ್ಕಾರಿ ಸ್ಟಾನ್ಲಿ ಆಸ್ಪತ್ರೆಗೆ ಕರೆದೊಯ್ದಾಗ ಅವರು ಸಾವನ್ನಪ್ಪಿರುವುದು ತಿಳಿದು ಬಂದಿದೆ. ಪ್ರಕರಣದಲ್ಲಿ ಇನ್ಸ್ಪೆಕ್ಟರ್ ಮತ್ತು ಸಬ್ ಇನ್ಸ್ಪೆಕ್ಟರ್ ಸೇರಿದಂತೆ ಐವರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ ಎಂದು ಚೆನ್ನೈನ ಹೆಚ್ಚುವರಿ ಪೊಲೀಸ್ ಕಮಿಷನರ್ ಟಿ ಎಸ್ ಅನ್ಬು ತಿಳಿಸಿದ್ದಾರೆ.

ಪಳನಿಸ್ವಾಮಿ ಆರೋಪಿ
ತಮಿಳುನಾಡು ಪೊಲೀಸ್ ಮಹಾನಿರ್ದೇಶಕ ಸೈಲೇಂದ್ರ ಬಾಬು ಅವರು ರಾಜಶೇಖರ್ ಸಾವಿನ ತನಿಖೆಯನ್ನು ಅಪರಾಧ ತನಿಖಾ ಇಲಾಖೆಗೆ (ಸಿಬಿ-ಸಿಐಡಿ) ಆದೇಶಿಸಿದ್ದಾರೆ. ಪ್ರತಿಪಕ್ಷದ ನಾಯಕ ಎಡಪ್ಪಾಡಿ ಕೆ ಪಳನಿಸ್ವಾಮಿ ಅವರು ರಾಜಶೇಖರ್ ಸಾವಿನ ಕುರಿತು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ ಮತ್ತು ಹೈಕೋರ್ಟ್ ನ್ಯಾಯಾಧೀಶರು ಈ ವಿಷಯವನ್ನು ಪರಿಶೀಲಿಸಬೇಕೆಂದು ಒತ್ತಾಯಿಸಿದ್ದಾರೆ.

ಕಾನೂನು ಕ್ರಮಕ್ಕೆ ಒತ್ತಾಯ
"ತಮಿಳುನಾಡಿನಲ್ಲಿ ಮತ್ತೊಂದು ಲಾಕಪ್ ಡೆತ್ ಸಂಭವಿಸಿದೆ. ಡಿಎಂಕೆ ಸರ್ಕಾರದಲ್ಲಿ ಲಾಕಪ್ ಡೆತ್ ಮುಂದುವರೆದಿದೆ ಮತ್ತು ಲಾಕಪ್ ಡೆತ್ ತಡೆಯಲು ಯಾವುದೇ ಭೀತಿಯಿಲ್ಲ. ಡಿಎಂಕೆ ಸರ್ಕಾರದ ಅವಧಿಯಲ್ಲಿ ಸಂಭವಿಸಿದ ಲಾಕಪ್ ಡೆತ್ ಬಗ್ಗೆ ಕಾನೂನು ಕ್ರಮ ಕೈಗೊಳ್ಳಲು ಹೈಕೋರ್ಟ್ ನ್ಯಾಯಾಧೀಶರು ಮುಂದಾಗಬೇಕು" ಪಳನಿಸ್ವಾಮಿ ಹೇಳಿದರು.

ಕೊಲೆ ಆರೋಪ
ಇದಕ್ಕೂ ಮೊದಲು, 25 ವರ್ಷದ ವಿ ವಿಘ್ನೇಶ್ ಎಂಬ ವ್ಯಕ್ತಿಯನ್ನು ಈ ವರ್ಷದ ಏಪ್ರಿಲ್ನಲ್ಲಿ ಡ್ರಗ್ಸ್ ಹೊಂದಿದ್ದ ಆರೋಪದ ಮೇಲೆ ಬಂಧಿಸಲಾಯಿತು ಮತ್ತು ಮರುದಿನ ಆತ ಸಾವನ್ನಪ್ಪಿರುವುದು ವರದಿಯಾಗಿತ್ತು. ಮರಣೋತ್ತರ ಪರೀಕ್ಷೆಯ ನಂತರ ವಿಘ್ನೇಶ್ ಅವರ ದೇಹದ ಮೇಲೆ ಗಾಯಗಳು ಕಂಡುಬಂದಿವೆ. ಹೀಗಾಗಿ ಕೊಲೆ ಆರೋಪದ ಮೇಲೆ ಆರು ಪೊಲೀಸರನ್ನು ಬಂಧಿಸಲಾಯಿತು.
-
Siddaramaiah: ಶಿಸ್ತು, ಪ್ರಾಮಾಣಿಕತೆ ಮತ್ತು ಮಾನವೀಯತೆ ಪೊಲೀಸ್ ಸೇವೆಯ ಆಧಾರ: ಸಿದ್ದರಾಮಯ್ಯ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ












Click it and Unblock the Notifications