400ಕೆಜಿ ಚಿನ್ನ, 20 ಕೋಟಿಯ ವಜ್ರಕ್ಕಾಗಿ ಚೆನ್ನೈ ಕಟ್ಟಡದಲ್ಲಿ ಹುಡುಕಾಟ
ಚೆನ್ನೈ, ಜೂನ್ 2: ಭಾರೀ ಬೆಂಕಿ ಕಾಣಿಸಿಕೊಂಡ ನಂತರ ಚೆನ್ನೈನ ಟಿ ನಗರದಲ್ಲಿದ್ದ ಚೆನ್ನೈ ಸಿಲ್ಕ್ಸ್ ಕಟ್ಟಡವನ್ನು ನೆಲಸಮಗೊಳಿಸಲಾಗಿದೆ. ಕಟ್ಟಡ ಹೋಗಿದ್ದಕ್ಕೆ ಮಾಲಿಕರು ಹೆಚ್ಚು ತಲೆಕೆಡಿಸಿಕೊಂಡಿಲ್ಲ. ಆದರೆ, ಈ ಕಟ್ಟಡದ ಲಾಕರುಗಳಲ್ಲಿ 400 ಕೆಜಿ ಚಿನ್ನ ಹಾಗೂ ಸುಮಾರು 20 ಕೋಟಿ ಮೌಲ್ಯದ ವಜ್ರಗಳನ್ನು ಇಡಲಾಗಿತ್ತು. ಇದೀಗ ಕಟ್ಟಡದ ಮಾಲಿಕರಿಗೆ ಇವುಗಳದ್ದೇ ಚಿಂತೆ ಕಾಡುತ್ತಿದೆ.
ಕಟ್ಟಡದಲ್ಲಿ ಕಾಣಸಿಕೊಂಡ ಬೆಂಕಿಗೆ ಇದೆಲ್ಲಾ ನಾಶವಾಗಿರಲಿಕ್ಕಿಲ್ಲ ಎಂದುಕೊಂಡಿರುವ ಕಟ್ಟಡ ಮಾಲಿಕರು, ಇದಕ್ಕಾಗಿ ಭರ್ಜರಿ ಹುಡುಕಾಟದಲ್ಲಿ ತೊಡಗಿದ್ದಾರೆ.

7 ಮಹಡಿಗಳ ಕಟ್ಟಡ ಚೆನ್ನೈ ಸಿಲ್ಕ್ಸ್ ಟಿ ನಗರದ ಹೆಗ್ಗುರುತಾಗಿತ್ತು. ಇದರ ನೆಲ ಮಹಡಿಯಲ್ಲಿ ಶ್ರೀ ಕುಮಾರನ್ ತಂಗಮಾಳೈ ಜ್ಯುವೆಲ್ಲರಿ ಅಂಗಡಿ ಇತ್ತು. ಇದೇ ಮಹಡಿಯ ಲಾಕರುಗಳಲ್ಲಿ ಚಿನ್ನವನ್ನು ಇಡಲಾಗಿತ್ತು. ಆದರೆ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡು ನೆಲಸಮವಾಗಿರುವುದರಿಂದ ಇದೆಲ್ಲಾ ಅವಶೇಷಗಳಡಿಯಲ್ಲಿ ಮುಚ್ಚಿ ಹೋಗಿವೆ.
ಸಾಮಾನ್ಯವಾಗಿ ಲಾಕರುಗಳು ಸಾಧಾರಣಮಟ್ಟದ ಬೆಂಕಿಯನ್ನು ತಡೆದುಕೊಳ್ಳುತ್ತವೆ. ಹೀಗಾಗಿ ಈ ಲಾಕರುಗಳಲ್ಲಿ ಇನ್ನೂ ಚಿನ್ನ ಮತ್ತು ವಜ್ರಗಳು ಇರಬಹುದು ಎಂದು ಮಾಲಿಕರು ಅಂದುಕೊಂಡಿದ್ದಾರೆ. ಆದರೆ ಈ ಲಾಕರುಗಳು ಎಷ್ಟರಮಟ್ಟಿಗೆ ಬೆಂಕಿಯನ್ನು ತಡೆದುಕೊಳ್ಳುತ್ತವೆ ಎಂದು ತಿಳಿಯಬೇಕಾಗಿದೆ.

ಇನ್ನು ಚೆನ್ನೈ ಸಿಲ್ಕ್ಸ್ ಕಟ್ಟಡಕ್ಕೆ ಬೆಂಕಿ ಬಿದ್ದಿದ್ದರಿಂದ ಅಪಾರ ಪ್ರಮಾಣದ ನಷ್ಟ ಉಂಟಾಗಿದೆ. ಮಾಲಿಕರು ಕಟ್ಟಡವನ್ನು ಕಳೆದುಕೊಂಡಿದ್ದಲ್ಲದೆ, ಕಟ್ಟಡದಲ್ಲಿದ್ದ ಸುಮಾರು 80 ಕೋಟಿ ಮೌಲ್ಯದ ಬಟ್ಟೆಗಳೂ ಬೆಂಕಿಗೆ ಆಹುತಿಯಾಗಿವೆ. ಇದೀಗ ಚಿನ್ನ ಮತ್ತು ವಜ್ರವನ್ನೂ ಕಳೆದುಕೊಳ್ಳುವ ಅಪಾಯದಲ್ಲಿದ್ದಾರೆ.

ಬುಧವಾರ ಚೆನ್ನೈ ಸಿಲ್ಕ್ಸ್ ಕಟ್ಟಡಕ್ಕೆ ಬೆಂಕಿ ಬಿದ್ದಿತ್ತು. ಇದನ್ನು ನಂದಿಸಲು ಅಗ್ನಿ ಶಾಮಕದಳದವರಿಗೆ ಒಂದು ದಿನಕ್ಕಿಂತಲೂ ಹೆಚ್ಚು ಸಮಯ ಹಿಡಿದಿತ್ತು. ಇನ್ನು ಕಟ್ಟಡವನ್ನು ಅಕ್ರಮವಾಗಿ ಕಟ್ಟಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಅಗ್ನಿ ದುರಂತದಿಂದ ಯಾವುದೇ ಜೀವ ಹಾನಿ ಆಗಿಲ್ಲವಾದರೂ ಅಕ್ರಮವಾಗಿ ಕಟ್ಟಿದ ಕಟ್ಟಡಗಳಿಗೆ ಅನುಮತಿ ನೀಡಿರುವ ಸ್ಥಳೀಯ ಸಂಸ್ಥೆಗಳಿಗೆ ಇದೊಂದು ಎಚ್ಚರಿಕೆಯ ಗಂಟೆಯಾಗಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications