ಚೆನ್ನೈ ಸ್ಫೋಟಕ್ಕೆ ಬೆಂಗಳೂರು ರೈಲು ನಿಲ್ದಾಣದಲ್ಲಿ ಬಾಂಬ್ ಜೋಡಣೆ
ಬೆಂಗಳೂರು, ಜೂನ್ 24 : ಚೆನ್ನೈ ರೈಲು ನಿಲ್ದಾಣದಲ್ಲಿ ನಡೆದ ಬಾಂಬ್ ಸ್ಫೋಟದ ಬಗ್ಗೆ ಆತಂಕಕಾರಿ ಮಾಹಿತಿ ಬಹಿರಂಗವಾಗಿದೆ. ಬೆಂಗಳೂರು ರೈಲು ನಿಲ್ದಾಣದಲ್ಲಿ ಆರೋಪಿಗಳು ಬಾಂಬ್ ಅನ್ನು ಜೋಡಿಸಿ ನಂತರ ಬೆಂಗಳೂರು-ಗುವಾಹಟಿ ಎಕ್ಸ್ಪ್ರೆಸ್ ರೈಲಿನಲ್ಲಿ ಇಟ್ಟಿದ್ದರು ಎಂದು ತನಿಖೆಯಿಂ ತಿಳಿದುಬಂದಿದೆ.
2014ರ ಮೇ 1ರಂದು ಬೆಳಗ್ಗೆ ಚೆನ್ನೈ ರೈಲು ನಿಲ್ದಾಣದಲ್ಲಿ ಬಾಂಬ್ ಸ್ಫೋಟಗೊಂಡಿತ್ತು. ಬೆಂಗಳೂರು-ಗುವಾಹಟಿ ಎಕ್ಸ್ಪ್ರೆಸ್ ರೈಲು ನಿಲ್ದಾಣಕ್ಕೆ ಆಗಮಿಸಿದ ತಕ್ಷಣ ಸ್ಫೋಟ ನಡೆದಿತ್ತು. ಬೆಂಗಳೂರು ರೈಲು ನಿಲ್ದಾಣದ ಶೌಚಾಲಯದಲ್ಲಿ ಬಾಂಬ್ ಜೋಡಿಸಿ ಆರೋಪಿಗಳು ರೈಲಿನಲ್ಲಿಟ್ಟಿದ್ದರು. [ಬಾಂಬ್ ಸ್ಫೋಟ : ಚೆನ್ನೈ ರೈಲು ನಿಲ್ದಾಣದ ಚಿತ್ರಗಳು]

ಸ್ಟೂಡೆಂಟ್ ಇಸ್ಲಾಮಿಕ್ ಮೂವ್ಮೆಂಟ್ ಆಫ್ ಇಂಡಿಯಾದ (ಸಿಮಿ) ಝಾಕೀರ್ ಮತ್ತು ಮೆಹಬೂಬ್ ಈ ಬಾಂಬ್ ಸ್ಫೋಟದ ಯೋಜನೆ ರೂಪಿಸಿದ್ದರು. ರೈಲಿನಲ್ಲಿ ಬಾಂಬ್ ಇಟ್ಟ ಆರೋಪಿಗಳು ಧಾರವಾಡದಲ್ಲಿ ಮನೆ ಮಾಡಿಕೊಂಡಿದ್ದರು. ತಾವು ಬಟ್ಟೆ ವ್ಯಾಪಾರಿಗಳು ಎಂದು ಹೇಳಿಕೊಂಡಿದ್ದರು. [ಚೆನ್ನೈ: ಬೆಂಗಳೂರಿನ ಪ್ರಯಾಣಿಕ ಹರ್ಷ ಪ್ರತಿಕ್ರಿಯೆ]
ಬೆಂಗಳೂರಿಗೆ ಬಂದಿದ್ದರು : ಆರೋಪಿಗಳು ಏ.30ರಂದು ಬೆಂಗಳೂರಿಗೆ ಬಂದಿದ್ದರು. ಸ್ಫೋಟಕಗಳನ್ನು ಹೊಂದಿರುವ ಬ್ಯಾಗ್ಗಳನ್ನು ತೆಗೆದುಕೊಂಡೇ ಅವರು ಬೆಂಗೂಳೂರು ರೈಲ್ವೆ ನಿಲ್ದಾಣದ ಶೌಚಾಲಯಕ್ಕೆ ಹೋಗಿದ್ದರು. [ಚೆನ್ನೈನಲ್ಲಿ ಬಾಂಬ್ ಸ್ಫೋಟ]
ಬಾಂಬ್ ಜೋಡಿಸಿ, ಟೈಮರ್ ಸೆಟ್ ಮಾಡಿ ಮುಂಜಾನೆ 3.30ರ ಸುಮಾರಿಗೆ ರೈಲಿನಲ್ಲಿ ಬಾಂಬ್ ಇಟ್ಟಿದ್ದರು. ಬಾಂಬ್ ಇಟ್ಟ ಬಳಿಕ ಮುಂದಿನ ನಿಲ್ದಾಣದಲ್ಲಿ ಇಳಿದ ಆರೋಪಿಗಳು ಅಲ್ಲಿಂದ, ಧಾರವಾಡದ ಮನೆಗೆ ತೆರಳಿದ್ದರು.
ಅರವಿಂದ್ ಮತ್ತು ಆನಂದ್ ಜೋಶಿ ಎಂಬ ಹೆಸರಿನಲ್ಲಿ ಮನೆಗಳನ್ನು ಪಡೆದಿದ್ದ ಆರೋಪಿಗಳು ಉತ್ತರ ಪ್ರದೇಶದಿಂದ ತಾವು ಬಂದಿದ್ದೇವೆ ಎಂದು ಮನೆಯ ಮಾಲೀಕರಿಗೆ ಹೇಳಿದ್ದರು. ಮೇ 1ರಂದು ನಡೆದ ಬಾಂಬ್ ಸ್ಫೋಟದಲ್ಲಿ ಒಬ್ಬರು ಸಾವನ್ನಪ್ಪಿ, 5ಕ್ಕೂ ಅಧಿಕ ಜನರು ಗಾಯಗೊಂಡಿದ್ದರು.
ಅಸ್ಸಾಂನಲ್ಲಿ ಮುಸ್ಲಿಂ ಯುವಕರ ಮೇಲೆ ನಡೆಯುತ್ತಿದ್ದ ದೌರ್ಜನ್ಯವನ್ನು ಖಂಡಿಸಲು ಈ ಬಾಂಬ್ ಸ್ಫೋಟಿಸಲಾಗಿತ್ತು. ಆದ್ದರಿಂದ, ಕಾಜಿರಂಗ ಎಕ್ಸ್ಪ್ರೆಸ್ ರೈಲಿನಲ್ಲಿ ಬಾಂಬ್ ಇಡಲಾಗಿತ್ತು. ಯೋಜನೆಯ ಮಾಸ್ಟರ್ ಮೈಂಡ್ ಝಾಕೀರ್ ಧಾರವಾಡದಿಂದ ಚೆನ್ನೈಗೆ ತೆರಳಲು ಟಿಕೆಟ್ ಪಡೆದು ಅದೇ ರೈಲಿನಲ್ಲಿ ಪ್ರಯಾಣ ಬೆಳೆಸಿದ್ದ. ಚೆನ್ನೈ ತಲುಪಿದ್ದ ಆತ, ಅಲ್ಲಿಂದ ಬಸ್ಸಿನ ಮೂಲಕ ಧಾರವಾಡಕ್ಕೆ ವಾಪಸ್ ಆಗಿದ್ದ.
ಬೆಂಗಳೂರಿನಲ್ಲಿಯೇ ರೈಲಿನಲ್ಲಿ ಬಾಂಬ್ ಇಟ್ಟಿದ್ದ ಝಾಕೀರ್, ಚೆನ್ನೈನಲ್ಲಿ ಅದು ಸ್ಫೋಟಗೊಳ್ಳುವಂತೆ ಟೈಮ್ ಸೆಟ್ ಮಾಡಿ, ಚೆನ್ನೈನಲ್ಲೇ ಬಾಂಬ್ ಇಡಲಾಗಿತ್ತು ಎಂದು ತನಿಖೆಯ ದಾರಿ ತಪ್ಪಿಸಲು ಪ್ರಯತ್ನಿಸಿದ್ದರು.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications