ಚೆನ್ನೈ ರೈಲು ಸ್ಫೋಟ: ಸುಳಿವಿಗೆ 5 ಲಕ್ಷ ಬಹುಮಾನ

 Chennai twin bomb blasts case - Rs 5 lakh reward announced says Tamil Nadu Director General of Police K Ramanujam,
ಚೆನ್ನೈ, ಮೇ8- ಚೆನ್ನೈ ನಿಲ್ದಾಣದಲ್ಲಿ ಬೆಂಗಳೂರು-ಗುವಹಾಟಿ ಎಕ್ಸ್ ಪ್ರೆಸ್ ರೈಲಿನಲ್ಲಿ ಸಂಭವಿಸಿದ ಸ್ಫೋಟದ ತನಿಖೆಯಲ್ಲಿ ಹೆಚ್ಚಿನ ಪ್ರಗತಿ ಕಂಡುಬಂದಿಲ್ಲ. ಈ ಮಧ್ಯೆ, ಚೆನ್ನೈ ಪೊಲೀಸರು 'ಬಾಂಬ್ ಸ್ಫೋಟಕ್ಕೆ ಸಂಬಂಧಿಸಿದಂತೆ ಆರೋಪಿಗಳ ಬಂಧನಕ್ಕೆ ಸುಳಿವು ಕೊಡುವವರಿಗೆ 5 ಲಕ್ಷ ರೂ. ನಗದು ಬಹುಮಾನ ನೀಡುವುದಾಗಿ ಘೋಷಿಸಿದ್ದಾರೆ.

ಈ ಸಂಬಂಧ ಅಧಿಕೃತ ಪ್ರಕಟಣೆ ನೀಡಿರುವ ತಮಿಳುನಾಡಿನ ಪೊಲೀಸ್ ಮಹಾ ನಿರ್ದೇಶಕ ಕೆ ರಾಮನುಜಂ ಅವರು 'ಮೇ 1 ರಂದು ಚೆನ್ನೈ ಸೆಂಟ್ರಲ್ ರೈಲು ನಿಲ್ದಾಣದಲ್ಲಿ ಬಾಂಬ್‌ ಸ್ಫೋಟಗೊಂಡು ಬೆಂಗಳೂರಿನ ಟಿಸಿಎಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಆಂಧ್ರದ ಯುವತಿ ಮೃತಪಟ್ಟು ಇತರೆ 14 ಮಂದಿ ಗಾಯಗೊಂಡಿದ್ದರು. ಈ ಸಂಬಂಧ ಆರೋಪಿಗಳ ಪತ್ತೆಗೆ ಸುಳಿವು ನೀಡಿದವರಿಗೆ 5 ಲಕ್ಷ ರೂ. ನಗದು ಬಹುಮಾನ ನೀಡಲಾಗುವುದು' ಎಂದು ತಿಳಿಸಿದ್ದಾರೆ.

ಆರೋಪಿಗಳ ಬಗ್ಗೆ ಸುಳಿವು ಕೊಡುವ ವ್ಯಕ್ತಿಗಳ ಹೆಸರನ್ನು ಯಾವುದೇ ಕಾರಣಕ್ಕೂ ಬಹಿರಂಗಪಡಿಸುವುದಿಲ್ಲ ಮತ್ತು ಅಗತ್ಯಬಿದ್ದರೆ ಅವರಿಗೆ ರಕ್ಷಣೆ ಕೊಡಲಾಗುವುದು ಎಂದು ಹೇಳಿಕೆಯಲ್ಲಿ ಅವರು ಸ್ಪಷ್ಟಪಡಿಸಿದ್ದಾರೆ. ಸಾರ್ವಜನಿಕ ಸಂಪರ್ಕ ಸಂಖ್ಯೆಗಳು 77086 54202 ಅಥವಾ 044-2250 2500 ಅಥವಾ 2250 2510 ಅಥವಾ ಇಮೇಲ್ [email protected]

ಪ್ರಯಾಣಿಕರಾಗಲಿ ಅಥವಾ ಸ್ಥಳದಲ್ಲಿದ್ದ ಬೇರೆ ಯಾರಾದರೂ ಮೊಬೈಲ್ ಕ್ಯಾಮೆರಾದಲ್ಲಿ ಅಪರಿಚಿತ ವ್ಯಕ್ತಿಗಳ ಚಲನವಲನವನ್ನು ಸೆರೆ ಹಿಡಿದಿದ್ದರೆ ಅದನ್ನು ಪೊಲೀಸ್ ಇಲಾಖೆಗೆ ಕೊಡಬಹುದು ಅಥವಾ ಮಾಹಿತಿ ಹಂಚಿಕೊಳ್ಳಬಹುದು ಎಂದೂ ಅವರು ಹೇಳಿದರು. (ಉಗ್ರ ಹುಸೇನ್ ಬಂಧನಕ್ಕೆ ಕ್ಷಿಪ್ರ ಪ್ರತೀಕಾರ ನಡೆಯಿತೇ?)

ಈ ಮಧ್ಯೆ, ಆತಂಕಕಾರಿ ಬೆಳವಣಿಗೆಯೊಂದರಲ್ಲಿ ಪಾಕಿಸ್ತಾನದ ಉಗ್ರ ಸಂಘಟನೆ ISI ಕಣ್ಣು ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಮೇಲೆ ಬಿದ್ದಿದೆ ಎಂದು ತಿಳಿದುಬಂದಿದೆ. ಐಎಸ್ಐ ಏಜೆಂಟ್ ಒಬ್ಬ ಎಲೆಕ್ಟ್ರಾನಿಕ್ ಸಿಟಿ ಭಾಗದಲ್ಲಿ ಬಾಡಿಗೆ ಮನೆಯೊಂದನ್ನು ಪಡೆದುಕೊಳ್ಳಲು ಯತ್ನಿಸಿದ ಘಟನೆಯೂ ನಡೆದಿದೆ ಎಂದು ತಮಿಳುನಾಡಿನ ಕ್ಯೂ ಬ್ರಾಂಚ್ ಬಂಧನದಲ್ಲಿರುವ ಜಾಹೀರ್ ಹುಸೇನ್ ಮಾಹಿತಿ ನೀಡಿದ್ದಾನೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+