ತಾರಾ ದಂಪತಿ ರಾಧಿಕಾ ಹಾಗೂ ಶರತ್ ಕುಮಾರ್ ವಿರುದ್ಧ ವಾರೆಂಟ್
ಚೆನ್ನೈ, ಜುಲೈ 03: ಕನ್ನಡ ಸೇರಿದಂತೆ ವಿವಿಧ ಭಾಷೆಗಳಲ್ಲಿ ನಟಿಸಿ ಸೈ ಎನಿಸಿಕೊಂಡಿರುವ ತಾರಾ ದಂಪತಿ ರಾಧಿಕಾ ಹಾಗೂ ಶರತ್ ಕುಮಾರ್ ಅವರಿಗೆ ಸಂಕಷ್ಟ ಎದುರಾಗಿದೆ. ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿನ ತ್ವರಿತಗತಿ ನ್ಯಾಯಾಲಯವೊಂದು ದಂಪತಿಗೆ ವಾರೆಂಟ್ ಜಾರಿಗೊಳಿಸಿದೆ.
2014ರಲ್ಲಿ ರಾಧಿಕಾ, ಶರತ್ ಕುಮಾರ್ ಹಾಗೂ ನಿರ್ಮಾಪಕ ಲಿಸ್ಟಿನ್ ಸ್ಟೀಫನ್ಸ್ ಅವರು ಮ್ಯಾಜಿಕ್ ಫ್ರೇಮ್ಸ್ ಸಂಸ್ಥೆಗಾಗಿ ರೆಡಿಯನ್ಸ್ ಮೀಡಿಯಾ ಎಂಬ ಕಂಪನಿಯಿಂದ 1.5 ಕೋಟಿ ರು ಸಾಲ ಪಡೆದಿದ್ದರು. ಹಣ ಪಾವತಿಗಾಗಿ ಎರಡು ಚೆಕ್ ಕಳಿಸಿದ್ದರು. ಎರಡು ಚೆಕ್ ಗಳು ಬೌನ್ಸ್ ಆಗಿವೆ. ಇದೇ ರೀತಿ ಒಟ್ಟು 7 ಚೆಕ್ ಗಳು ಬೌನ್ಸ್ ಆಗಿದ್ದು, ಜೂನ್ 28ರಂದು ನಡೆದ ವಿಚಾರಣೆಗೆ ಮೂವರು ಗೈರಾಗಿದ್ದರು. ಸಿಆರ್ ಪಿಸಿ ಸೆಕ್ಷನ್ 317ಅಡಿಯಲ್ಲಿ ಪಿಟೀಷನ್ ಹಾಕಿ, ಖುದ್ದು ಹಾಜರಾತಿಯಿಂದ ವಿನಾಯತಿ ಕೋರಿದ್ದರು. ಆದರೆ, ಅರ್ಜಿಯನ್ನು ರದ್ದುಗೊಳಿಸಿದ ನ್ಯಾಯಾಧೀಶರು, ಜುಲೈ 12ಕ್ಕೆ ವಿಚಾರಣೆಯನ್ನು ಮುಂದೂಡಲಾಗಿದೆ.
ಐದು ಪ್ರಕರಣಗಳಲ್ಲಿ ಕ್ರಿಮಿನಲ್ ವಿಚಾರಣೆಗಳನ್ನು ತಿರಸ್ಕರಿಸುವಂತೆ ಕೋರಿ ಮದ್ರಾಸ್ ಹೈಕೋರ್ಟಿಗೆ ದಂಪತಿ ಅರ್ಜಿ ಹಾಕಿದ್ದರು. ಜಸ್ಟೀಸ್ ಜಿಕೆ ಇಲ್ಲಂತಿರಾಯನ್ ಅವರು ತ್ವರಿತ ಗತಿ ನ್ಯಾಯಾಲಯಕ್ಕೆ 5 ಪ್ರಕರಣಗಳಲ್ಲಿ ಕ್ರಿಮಿನಲ್ ವಿಚಾರಣೆ ರದ್ದುಗೊಳಿಸಲು ಸೂಚಿಸಿದ್ದರು, ಆದರೆ, ಉಳಿದ ಎರಡು ಕೇಸು ಜಾರಿಯಲ್ಲಿತ್ತು.

2006ರಿಂದ 2015 ತನಕ ಕಲಾವಿದರ ಸಂಘದ ಅಧ್ಯಕ್ಷರಾಗಿದ್ದ ಶರತ್ ಕುಮಾರ್ ಅವರು ಕಲಾವಿದರದ ಸಂಘದ ಭೂಮಿ ಪರಭಾರೆ ಅವ್ಯವಹಾರ ಆರೋಪವನ್ನು ಎದುರಿಸುತ್ತಿದ್ದು, ಮದ್ರಾಸ್ ಹೈಕೋರ್ಟಿನಲ್ಲಿ ಪ್ರಕರಣ ವಿಚಾರಣೆ ಹಂತದಲ್ಲಿದೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications