ಮದ್ಯದಂಗಡಿ ಬಂದ್; ವಿದ್ಯಾರ್ಥಿಗಳ ಬೇಡಿಕೆ ಈಡೇರಿಸಿದ ತಮಿಳುನಾಡು ಸಿಎಂ
ಚೆನ್ನೈ ಅಕ್ಟೋಬರ್ 24: ರಾಜ್ಯದ ಎಲ್ಲಾ ಮದ್ಯದಂಗಡಿಗಳನ್ನು ಮುಚ್ಚುವಂತೆ ಇಬ್ಬರು ಶಾಲಾ ವಿದ್ಯಾರ್ಥಿಗಳು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರಿಗೆ ಮನವಿ ಮಾಡಿದ್ದರು. ಈ ಬಗ್ಗೆ ಇಬ್ಬರು ವಿದ್ಯಾರ್ಥಿಗಳು ಜಿಲ್ಲಾಧಿಕಾರಿಗಳಿಗೆ ಬರೆದ ಪತ್ರದ ಪರಿಣಾಮವಾಗಿ ತಮಿಳುನಾಡಿನ ಅರಿಯಲೂರು ಜಿಲ್ಲೆಯ ಅವರ ಶಾಲೆಯ ಬಳಿ ಇರುವ ಮದ್ಯದ ಅಂಗಡಿಯನ್ನು ಮುಚ್ಚಲಾಗಿದೆ.
ತಮಿಳುನಾಡು ಮುಖ್ಯಮಂತ್ರಿಗೆ ಪತ್ರ ಬರೆದ ವಿದ್ಯಾರ್ಥಿಗಳು ಒಡಹುಟ್ಟಿದವರು. ಇ ಎಂ ಇಲಂಥೆಂಡ್ರಲ್ ಮತ್ತು ಅರಿವರಸನ್ ಹೆಸರಿನ ಇವರು 6 ನೇ ತರಗತಿ ಮತ್ತು 4 ನೇ ತರಗತಿಯಲ್ಲಿ ಓದುತ್ತಿದ್ದಾರೆ. ನವೆಂಬರ್ನಲ್ಲಿ ಪ್ರಾಥಮಿಕ ವಿಭಾಗಕ್ಕೆ ಭೌತಿಕ ತರಗತಿಗಳನ್ನು ಮತ್ತೆ ತೆರೆಯುವ ಮೊದಲು ಕಲೆಕ್ಟರ್ನಿಂದ ಅಂಗಡಿಯನ್ನು ಬಂದ್ ಮಾಡುವಂತೆ ಅವರು ಮನವಿ ಮಾಡಿದ್ದರು.
ಸ್ಥಳೀಯ ಮಾದ್ಯಮದೊಂದಿಗೆ ಮಾತನಾಡಿದ ಇಲಂಥೆಂಡ್ರಲ್ ಅವರು "ಶಾಲೆ ಬಳಿಯಿರುವ ಮದ್ಯದ ಅಂಗಡಿಯಲ್ಲಿ ಜನ ಸೇರುತ್ತಾರೆ. ಎಲ್ಲರೂ ಅಲ್ಲಿ ಕುಳಿತು ಕುಡಿಯುತ್ತಾರೆ. ಜೊತೆಗೆ ಅಲ್ಲಿ ಕುಳಿತು ಅಸಭ್ಯ ಭಾಷೆಯನ್ನು ಬಳಸುತ್ತಾರೆ. ನಮಗೆ ತುಂಬಾ ಭಯವಾಗುತ್ತದೆ" ಎಂದು ಹೇಳಿದ್ದಾರೆ.

ದೂರಿನಲ್ಲೇನಿದೆ?
ಈ ಹಿಂದೆ ಶಿಕ್ಷಣ ಸಂಸ್ಥೆಗಳ ಸಮೀಪ ಇರುವ 300 ಅಂಗಡಿಗಳನ್ನು ಮುಚ್ಚಲಾಗಿದ್ದರೂ ಸೆಲಯೂರಿನ ಜಾನ್ ಮಾರ್ಕ್ ಮೆಟ್ರಿಕ್ಯುಲೇಷನ್ ಶಾಲೆ, ನನ್ಮಂಗಲಂನ ಜಿಯಾನ್ ಶಾಲೆ, ಚೂಲೈಮೇಡು ಕೇಂದ್ರೀಯ ವಿದ್ಯಾಲಯ ಸೇರಿದಂತೆ ಇತರ ಅನೇಕ ಶಾಲೆಗಳ ವಿದ್ಯಾರ್ಥಿಗಳು ಸಮಾಜ ವಿರೋಧಿ ಅಂಶಗಳು ತಮಗೆ ದೊಡ್ಡ ತೊಂದರೆಯಾಗಿದೆ ಎಂದು ದೂರುತ್ತಾರೆ. ಕುಡುಕರು ಸಾಮಾನ್ಯವಾಗಿ ಶಾಲೆಯ ಕಾಂಪೌಂಡ್ಗಳ ಸುತ್ತಲೂ ಮಲಗುತ್ತಾರೆ ಮತ್ತು ಅವರು ನಮ್ಮ ಆವರಣದ ಬಳಿ ಮದ್ಯದ ಬಾಟಲಿಗಳನ್ನು ಸಹ ಎಸೆಯುತ್ತಾರೆ. ಇದು ನಮ್ಮ ಸುರಕ್ಷತೆ ಮತ್ತು ಭದ್ರತೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ.

ಈ ಹಿಂದೆ ದೂರು
ಮದ್ರಾಸ್ ಹೈಕೋರ್ಟ್ 2015 ರಲ್ಲಿ ಶಾಲೆಯ 100 ಮೀಟರ್ ಒಳಗೆ ಯಾವುದೇ ಮದ್ಯ ಇರಬಾರದು ಎಂದು ತೀರ್ಪು ನೀಡಿತ್ತು. ಆದರೆ ಕೆಲವು ಕಡೆ ಈ ಆದೇಶವನ್ನು ಉಲ್ಲಂಘಿಸಲಾಗಿದೆ. ಆದರೆ ಮಕ್ಕಳು ದೂರು ನೀಡಿದ ಮದ್ಯದಂಗಡಿ 100 ಮೀಟರ್ ದೂರದಲ್ಲಿ ಇದ್ದರೂ, ಮಕ್ಕಳ ಮನವಿಯ ನಂತರ ಅದನ್ನು ಸ್ಥಳಾಂತರಿಸಲು ಜಿಲ್ಲಾಧಿಕಾರಿ ನಿರ್ಧರಿಸಿದರು. ಪುಟ್ಟ ಮಕ್ಕಳ ಈ ಮನವಿಯು ಮುಖ್ಯ ಕಾರ್ಯದರ್ಶಿಯವರ ಮಧ್ಯಸ್ಥಿಕೆಗೆ ಕಾರಣವಾಗಿದೆ. ಜೊತೆಗೆ ಅವರು ಪ್ರದೇಶದಿಂದ ಮದ್ಯದ ಅಂಗಡಿಯನ್ನು ಸ್ಥಳಾಂತರಿಸುವಂತೆ ಸೂಚಿಸಿದರು.
ಮಾತ್ರವಲ್ಲದೇ ಶಾಲೆಯ ಆಸುಪಾಸಿನಲ್ಲಿರುವ ಮದ್ಯದ ಅಂಗಡಿಗಳಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ. 9ನೇ ತರಗತಿಯ ವಿದ್ಯಾರ್ಥಿಗಳ ಬ್ಯಾಗ್ಗಳಲ್ಲಿ ಮದ್ಯದ ಬಾಟಲಿಗಳು ಪತ್ತೆಯಾಗಿರುವ ಘಟನೆಗಳು ಸಾಕಷ್ಟು ನಡೆದಿವೆ. ಇಂತಹ ಘಟನೆಗಳು ಇದರ ವಿರುದ್ಧ ಕಠಿಣ ಕ್ರಮಗಳ ಅಗತ್ಯವನ್ನು ಎತ್ತಿ ತೋರಿಸಿವೆ' ಎಂದು ತಾಂಬರಂನಲ್ಲಿರುವ ಸಿಎಸ್ಐ ಕಾರ್ಲೆ ಹೈಯರ್ ಸೆಕೆಂಡರಿ ಶಾಲೆಯ ಪ್ರಾಂಶುಪಾಲ ವಿ.ರಾಜು ಹೇಳಿದ್ದಾರೆ.

ಮಕ್ಕಳ ಪ್ರಯತ್ನಕ್ಕೆ ಪ್ರಶಂಸೆ
"ಮದ್ಯದಂಗಡಿ ಶಾಲೆಯಿಂದ 100 ಮೀಟರ್ ದೂರದಲ್ಲಿದ್ದರೂ, ಮಕ್ಕಳು ಶಾಲೆಯನ್ನು ಪ್ರತಿನಿಧಿಸಿದ್ದರಿಂದ ಅಂಗಡಿಯನ್ನು ಮುಚ್ಚಲು ಮತ್ತು ಅದನ್ನು ಪರ್ಯಾಯ ಸ್ಥಳಕ್ಕೆ ಸ್ಥಳಾಂತರಿಸುವ ಆದೇಶವನ್ನು ನಾವು ಅಂಗೀಕರಿಸಿದ್ದೇವೆ" ಎಂದು ಅರಿಯಲೂರು ಕಲೆಕ್ಟರ್ ಪಿ ರಮಣ ಸರಸ್ವತಿ ಸ್ಥಳೀಯ ಸುದ್ದಿಗಾರರಿಗೆ ತಿಳಿಸಿದರು. ಮಕ್ಕಳ ಪ್ರಯತ್ನಕ್ಕೆ ತಮಿಳುನಾಡಿನಾದ್ಯಂತ ಪ್ರಶಂಸೆ ವ್ಯಕ್ತವಾಗಿದೆ.

ಚೆನ್ನೈನ ಸಾಮಾಜಿಕ ಕಾರ್ಯಕರ್ತೆ ಪ್ರಣಿತಾ ತಿಮೋತಿ
ಚೆನ್ನೈನ ಸಾಮಾಜಿಕ ಕಾರ್ಯಕರ್ತೆ ಪ್ರಣಿತಾ ತಿಮೋತಿ, "ನಮ್ಮ ನಾಯಕರು, ನಮ್ಮ ಸಮುದಾಯದಲ್ಲಿ ಬದಲಾವಣೆಯನ್ನು ತರಲು ಜವಾಬ್ದಾರಿ ಮತ್ತು ಧೈರ್ಯವನ್ನು ತೆಗೆದುಕೊಳ್ಳುವುದನ್ನು ಮಕ್ಕಳು ನಮಗೆ ನೆನಪಿಸುತ್ತಾರೆ" ಎಂದು ಹೇಳಿದರು.
ಮಕ್ಕಳ ಪರ ಸಕ್ರಿಯ ಕಾರ್ಯ ಮತ್ತು ಸರ್ಕಾರದ ಪ್ರತಿಕ್ರಿಯೆಯು ಅನೇಕ ಶಾಲಾ ವಿದ್ಯಾರ್ಥಿಗಳಿಗೆ ಹೊಸ ಮಟ್ಟದ ಆತ್ಮವಿಶ್ವಾಸವನ್ನು ನೀಡಿದೆ. ಇದು ಶಾಲೆಗಳ ಸಮೀಪದ ವಾತಾವರಣವನ್ನು ಹಾಳುಗೆಡವುವಂತಹ ಹಲವು ಮದ್ಯದ ಅಂಗಡಿಗಳನ್ನು ಮುಚ್ಚಲು ಕಾರಣವಾಗಿದೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications