ಅಶ್ಲೀಲ ಗೀತೆ ವಿವಾದ: ನಟ ಸಿಂಬು ವಿರುದ್ಧ ಪ್ರಕರಣ ದಾಖಲು
ಕೊಯಮತ್ತೂರು, ಡಿ.13: ತಮಿಳು ಚಿತ್ರರಂಗದ ಜನಪ್ರಿಯ ನಟ ಸಿಂಬು ಅಲಿಯಾಸ್ ಸಿಳಬರಸನ್ ಹಾಗೂ ಸಂಗೀತಗಾರ ಅನಿರುಧ್ ವಿರುದ್ಧ ಇಲ್ಲಿನ ರೇಸ್ ಕೋರ್ಸ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಶ್ಲೀಲ ಗೀತೆಯನ್ನು ಹಾಡುವ ಮೂಲಕ ಮಹಿಳೆಯರ ಗೌರವಕ್ಕೆ ಧಕ್ಕೆ ತಂದಿರುವ ಆರೋಪವನ್ನು ಇಬ್ಬರ ಮೇಲೆ ಹೊರೆಸಲಾಗಿದೆ.
ಆಲ್ ಇಂಡಿಯಾ ಡೆಮಾಕ್ರಾಟಿಕ್ ಮಹಿಳೆಯರ ಸಮಿತಿ(ಎಐಡಿಡಬ್ಲ್ಯೂಎ) ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಾಗಿದೆ. ಅನಿರುಧ್ ಸಂಗೀತ ಸಂಯೋಜನೆಯ ಸಿಂಬು ಗಾಯನದ 'ಬೀಪ್ ಹಾಡು' ಸಾಮಾಜಿಕ ಜಾಲ ತಾಣಗಳಲ್ಲಿ ಭಾರಿ ಸದ್ದು ಮಾಡುತ್ತಿದೆ. [ಹಸಿಬಿಸಿ ಚುಂಬನ ದೃಶ್ಯದಲ್ಲಿ ಸಿಕ್ಕಿಬಿದ್ದ ಅನಿರುದ್ಧ್]

ಅನಿರುಧ್ ಕಂಪೋಸ್ ಮಾಡಿರುವ 'ಕೊಲವೆರಿ ಡಿ' ಹಾಡು ಈ ಹಿಂದೆ ಭರ್ಜರಿ ದಾಖಲೆ ನಿರ್ಮಿಸಿದ್ದನ್ನು ಇಲ್ಲಿ ಸ್ಮರಿಸಬಹುದು.
ಇಷ್ಟಕ್ಕೂ ಹಾಡಿನಲ್ಲಿ ಕೆಲ ಅಶ್ಲೀಲ ಪದಗಳಿದ್ದು, ಅದನ್ನು ಮ್ಯೂಟ್(ಬೀಪ್ ಸೌಂಡ್) ಮಾಡಲಾಗಿದೆ. ಅದು ಬಿಟ್ಟರೆ, ಇಡೀ ಹಾಡಿನಲ್ಲಿ ಲವ್ ಮಾಡ್ಬೇಡ ಎಂದು ಹುಡುಗರಿಗೆ ಹಿತವಚನ ನೀಡುವಂತಿದೆ. ಲವ್ ಬ್ರೇಕ್ ಅಪ್ ಆದರೆ, ಹುಡುಗರಿಯರನ್ನು ಬೈಯಬೇಡ ಎಂದು ಹೇಳಲಾಗಿದೆ. ಅದರೆ, ಮಹಿಳೆಯರ ವಿರುದ್ಧ ಅನಾಚಾರ, ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿರುವ ಈ ದಿನಗಳಲ್ಲಿ ಇಂಥ ಹಾಡು ಅನರ್ಥಕಾರಿ ಎಂದು ಮಹಿಳಾ ಸಂಘಟನೆ ವಾದಿಸಿದೆ. [ಸಿಂಬು ನಯನತಾರಾ ಕಣ್ಣು ಕಣ್ಣು ಕಲೆತಾಗ]
ಮಹಿಳಾ ಪ್ರಾತಿನಿಧ್ಯ ಕಾಯ್ದೆ ಸೆಕ್ಷನ್ 4 ಹಾಗೂ 6ರ ಅನ್ವಯ ಹಾಗೂ ಐಪಿಸಿ ಸೆಕ್ಷನ್ 509 ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆ 67 ರ ಅನ್ವಯ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. (ಒನ್ ಇಂಡಿಯಾ ಸುದ್ದಿ)
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ












Click it and Unblock the Notifications