ಬಿಜೆಪಿ ಸೇರಿದ ಕೆ. ಅಣ್ಣಾಮಲೈ ವಿರುದ್ಧ ಪ್ರಕರಣ ದಾಖಲು
ಚೆನ್ನೈ, ಆಗಸ್ಟ್ 28 : ಬಿಜೆಪಿ ಸೇರಿರುವ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ವಿರುದ್ಧ ಪ್ರಕರಣ ದಾಖಲಾಗಿದೆ. ಲಾಕ್ ಡೌನ್ ನಿಯಮಗಳನ್ನು ಉಲ್ಲಂಘನೆ ಮಾಡಿದ್ದಾರೆ ಎಂಬ ಆರೋಪದ ಮೇಲೆ ದೂರು ದಾಖಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Recommended Video
ತಮಿಳುನಾಡಿನ ಕೊಯಮತ್ತೂರಿನಲ್ಲಿ ನಿಯಮಗಳನ್ನು ಉಲ್ಲಂಘನೆ ಮಾಡಿ ಗುರುವಾರ ಕೆ. ಅಣ್ಣಾಮಲೈ ಸಭೆ ನಡೆಸಿದ್ದಾರೆ ಎಂಬುದು ಆರೋಪ. ಕೊಯಮತ್ತೂರು ನಗರ ಠಾಣೆ ಪೊಲೀಸರು ದೂರಿನ ಅನ್ವಯ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
ಬಿಜೆಪಿಗೆ ಸೇರ್ಪಡೆಯಾದ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಜನರಿಗೆ ಬರೆದ ಪತ್ರ
ಬಿಜೆಪಿ ಸೇರಿದ ಬಳಿಕ ವಿಕೆಕೆ ಮೆನನ್ ರಸ್ತೆಯಲ್ಲಿರುವ ಬಿಜೆಪಿ ಕಚೇರಿಗೆ ಗುರುವಾರ ಅಣ್ಣಾಮಲೈ ಭೇಟಿ ನೀಡಿದ್ದರು. ಬಹಳಷ್ಟು ಕಾರ್ಯಕರ್ತರು ಕಚೇರಿಯಲ್ಲಿ ಸೇರಿ ಅವರನ್ನು ಸ್ವಾಗತಿಸಿದ್ದರು.
ಬಿಜೆಪಿಗೆ ನಾನು ಸ್ವಾಭಾವಿಕವಾಗಿ ಸೂಕ್ತ: 'ಸಿಂಗಂ' ಅಣ್ಣಾಮಲೈ
ಕೋವಿಡ್ 19 ಹರಡದಂತೆ ಇರುವ ಲಾಕ್ ಡೌನ್ ನಿಯಮಗಳನ್ನು ಉಲ್ಲಂಘಿಸಿ ಕಚೇರಿಯಲ್ಲಿ ಬಹಳಷ್ಟು ಜನರು ಸೇರಿದ್ದರು. ಪಟಾಕಿ ಸಿಡಿಸಿ ಸಂಭ್ರಮಿಸಿದ್ದರು. ಅಣ್ಣಾಮಲೈ ವಾಹನದಿಂದಲೇ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ್ದರು.
ಬಿಜೆಪಿ ಸೇರ್ಪಡೆಗೊಂಡ ಮಾಜಿ ಐಪಿಎಸ್ ಅಧಿಕಾರಿ ಕೆ ಅಣ್ಣಾಮಲೈ
ಪೊಲೀಸ್ ಸಬ್ ಇನ್ಸ್ಪೆಕ್ಟರ್ ಸುಗನ್ಯಾ ಅವರು ಈ ಕುರಿತು ದೂರು ನೀಡಿದ್ದರು. ಕೆ. ಅಣ್ಣಾಮಲೈ, ಬಿಜೆಪಿ ಜಿಲ್ಲಾಧ್ಯಕ್ಷ ಆರ್. ನಂದಕುಮಾರ್, ಬಿಜೆಪಿ ನಾಯಕರಾದ ಜಿಕೆಎಸ್ ಸೆಲ್ವಕುಮಾರ್ ಮುಂತಾದವರ ವಿರುದ್ಧ ಪ್ರಕರಣ ದಾಖಲಾಗಿದೆ.
ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ದೆಹಲಿಯಲ್ಲಿ ಬುಧವಾರ ಬಿಜೆಪಿ ಸೇರಿದ್ದರು. ಬಳಿಕ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಭೇಟಿಯಾಗಿದ್ದರು. ಗುರುವಾರ ಅವರು ತಮಿಳುನಾಡಿಗೆ ವಾಪಸ್ ಆಗಿದ್ದಾರೆ.