ನಟಿ ಖುಷ್ಬೂ ಕಾಂಗ್ರೆಸ್ಗೆ ಗುಡ್ಬೈ: ಬಿಜೆಪಿಗೆ ಸೇರ್ಪಡೆ ಸಾಧ್ಯತೆ
ಚೆನ್ನೈ, ಅಕ್ಟೋಬರ್ 12: ಹಿರಿಯ ನಟಿ ಹಾಗೂ ಕಾಂಗ್ರೆಸ್ ನಾಯಕಿ ಖುಷ್ಬೂ ಸುಂದರ್ ಅವರು ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ ಎನ್ನಲಾಗಿದ್ದು, ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿದೆ.
2014ರ ಸೆಪ್ಟೆಂಬರ್ ನಲ್ಲಿ ಡಿಎಂಕೆ ಪಕ್ಷ ತೊರೆದಿದ್ದ ಖುಷ್ಬೂ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದರು. ಆದರೆ ಕಒಂದೆರೆಡು ತಿಂಗಳಿಂದ ಖುಷ್ಬೂ ಅವರು ಬಿಜೆಪಿಗೆ ಸೇರ್ಪಡೆಯಾಗುವ ಕುರಿತು ಊಹಾಪೋಹ ಎದ್ದಿದ್ದವು. ಕಳೆದವಾರ ಖುಷ್ಬೂ ಅವರು ಬಿಜೆಪಿ ಸೇರ್ಪಡೆ ವಿಚಾರವನ್ನು ತಳ್ಳಿ ಹಾಕಿದ್ದರು.
ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ವಕ್ತಾರೆಯಾಗಿದ್ದ ಖುಷ್ಬೂ ಅವರು ಭಾನುವಾರ ರಾತ್ರಿ ಕಾಂಗ್ರೆಸ್ ಗೆ ವಿದಾಯ ಹೇಳಿದ್ದು, ನಾಳೆ ಬೆಳಿಗ್ಗೆ ಅವರು ಬಿಜೆಪಿಗೆ ಸೇರಲಿದ್ದಾರೆ.

ಈ ಬಗ್ಗೆ ಬಿಜೆಪಿ ಮೂಲಗಳು ಮಾಹಿತಿ ನೀಡಿದ್ದು, ಇಂದು ದೆಹಲಿಗೆ ತೆರಳಲಿರುವ ಖುಷ್ಬೂ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಇತರೆ ಹಿರಿಯ ನಾಯಕರನ್ನು ಭೇಟಿ ಮಾಡಿ ಅಧಿಕೃತವಾಗಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಲಾಗಿದೆ. ಖುಷ್ಬೂ ಅವರೊಂದಿಗೆ ಐಆರ್ ಎಸ್ ಅಧಿಕಾರಿ, ಖ್ಯಾತ ಯೂಟ್ಯೂಬರ್ ಒಬ್ಬರು ಕೂಡ ನಾಳೆ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎನ್ನಲಾಗಿದೆ.
ದಿಢೀರ್ ಬೆಳವಣಿಗೆಯಲ್ಲಿ ಇದೀಗ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ ಎನ್ನಲಾಗಿದೆ. ಈಗಾಗಲೇ ದೆಹಲಿಗೆ ತೆರಳಲು ವಿಮಾನ ನಿಲ್ದಾಣಕ್ಕೆ ತೆರಳಿಲಿರುವ ಖುಷ್ಬೂ ಅವರು ನಿಲ್ದಾಣದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ.
-
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು












Click it and Unblock the Notifications