ಕೊರೊನಾ ಭೀತಿ: ರಾಮೇಶ್ವರಂನಿಂದ ಚೀನಾ ಪ್ರವಾಸಿ ವಾಪಸ್
ರಾಮೇಶ್ವರಂ, ಫೆಬ್ರವರಿ 11: ಚೀನಾದಿಂದ ಬಂದಿದ್ದ 25 ವರ್ಷದ ಪ್ರವಾಸಿಗನನ್ನು ಕೊರೊನಾ ವೈರಸ್ ಭೀತಿಯಿಂದಾಗಿ ಮರಳಿ ಆತನ ದೇಶಕ್ಕೆ ಕಳುಹಿಸಲಾಗಿದೆ.
ಚೀನಾದ ಅನ್ಹುಯಿ ಪ್ರಾಂತ್ಯದ ನಿವಾಸಿ ಸೆಂಘ್ ಶನಿವಾರ ತಮಿಳುನಾಡಿನ ರಾಮೇಶ್ವರಂಗೆ ಬಂದಿದ್ದರು. ಅವರ ಹಾಜರಾತಿ ಸ್ಥಳೀಯರಲ್ಲಿ ತೀವ್ರ ಕಳವಳ ಮೂಡಿಸಿತ್ತು. ಅವರಲ್ಲಿ ಕೊರೊನಾ ವೈರಸ್ ಸೋಂಕಿನ ಯಾವುದೇ ಲಕ್ಷಣಗಳು ಕಂಡುಬಾರದೆ ಇದ್ದರೂ ಅವರಿಂದ ಸೋಂಕು ಹರಡಬಹುದು ಎಂಬ ಭಯ ಮೂಡಿತ್ತು.
ಸೆಂಘ್ ಅವರ ಊರು, ಕೊರೊನಾ ವೈರಸ್ನ ಮೂಲ ಕೇಂದ್ರವಾದ ವುಹಾನ್ ನಗರದಿಂದ 450 ಕಿ.ಮೀ. ಗೂ ಹೆಚ್ಚು ದೂರದಲ್ಲಿದೆ. ಅವರು ಪ್ರವಾಸಿ ವೀಸಾ ಮೂಲಕ ಜ. 24ರಂದು ಭಾರತಕ್ಕೆ ಬಂದಿದ್ದರು. ಶನಿವಾರ ಬೆಳಿಗ್ಗೆ 9 ಗಂಟೆ ಸುಮಾರಿಗೆ ರಾಮೇಶ್ವರಂಗೆ ಬಂದು ಖಾಸಗಿ ಹೋಟೆಲ್ನಲ್ಲಿ ಉಳಿದುಕೊಂಡಿದ್ದರು.

ಸೆಂಘ್ ಅವರದು ಚೀನಾ ಎನ್ನುವುದು ತಿಳಿಯುತ್ತಿದ್ದಂತೆಯೇ ಹೋಟೆಲ್ ಸಿಬ್ಬಂದಿ ಭಯಗೊಂಡು ಪೊಲೀಸರಿಗೆ ಕರೆ ಮಾಡಿದ್ದರು. ಬಳಿಕ ಕಂದಾಯ ಮತ್ತು ಆರೋಗ್ಯ ಅಧಿಕಾರಿಗಳೂ ಆಗಮಿಸಿದರು. ಹೋಟೆಲ್ನಲ್ಲಿಯೇ ಅವರ ಪ್ರಾಥಮಿಕ ಆರೋಗ್ಯ ತಪಾಸಣೆ ಮಾಡಲಾಯಿತು.
'ಅವರಲ್ಲಿ ಕೊರೊನಾ ವೈರಸ್ನ ಯಾವುದೇ ಗುಣಲಕ್ಷಣಗಳು ಕಾಣಿಸಲಿಲ್ಲ. ಅವರು ಆರೋಗ್ಯವಾಗಿಯೇ ಇದ್ದರು. ಆದರೆ ಈ ರೀತಿ ಆತಂಕದ ವಾತಾವರಣದಲ್ಲಿ ಇರಬಾರದು ಎಂಬ ಉದ್ದೇಶದಿಂದ ಅವರಿಗೆ ನಿಯಮಾವಳಿಗಳ ಪ್ರಕಾರ 14 ದಿನ ಪ್ರತ್ಯೇಕವಾಗಿ ಇರುವಂತೆ ಅಥವಾ ದೇಶ ಬಿಟ್ಟು ಹೋಗುವಂತೆ ಕೇಳಿದೆವು. ಅವರು ಹಿಂಜರಿಕೆಯಿಂದಲೇ ಚೀನಾಕ್ಕೆ ಹಿಂದಿರುಗಲು ಒಪ್ಪಿಕೊಂಡರು' ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸೆಂಘ್ ಅವರಿಗಾಗಿ ಮದುರೆಯಿಂದ ಚೆನ್ನೈಗೆ ವಿಮಾನ ಟಿಕೆಟ್ ಒದಗಿಸಲಾಯಿತು. ರಾಮೇಶ್ವರಂನಿಂದ ಪ್ರತ್ಯೇಕ ಟ್ಯಾಕ್ಸಿಯಲ್ಲಿ ಅವರು ತೆರಳಿದರು. ಅವರೊಂದಿಗೆ ವೈದ್ಯಕೀಯ ತಂಡ ಕೂಡ ಟ್ಯಾಕ್ಸಿಯಲ್ಲಿ ತೆರಳಿತು. ನಂತರ ಚೆನ್ನೈನ ವಲಸೆ ಅಧಿಕಾರಿಗಳಿಗೆ ಮಾಹಿತಿ ನೀಡಿ ಅವರನ್ನು ಮದುರೆಯಿಂದ ವಿಮಾನದಲ್ಲಿ ಕಳುಹಿಸಲಾಯಿತು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications