ತಮಿಳುನಾಡಿನಲ್ಲಿ ವೈದ್ಯರ ನಿವೃತ್ತಿ ಅವಧಿ ಎರಡು ತಿಂಗಳು ವಿಸ್ತರಣೆ
ಚೆನ್ನೈ, ಮಾರ್ಚ್.31: ಕೊರೊನಾ ವೈರಸ್ ಸೋಂಕಿತರಿಗೆ ಚಿಕಿತ್ಸೆ ನೀಡಲು ವೈದ್ಯರು ಮತ್ತು ಸಿಬ್ಬಂದಿ ಅವಶ್ಯಕವಾಗಿರುವ ಹಿನ್ನೆಲೆ ತಮಿಳುನಾಡಿನಲ್ಲಿ ವೈದ್ಯರ ನಿವೃತ್ತಿ ಅವಧಿಯನ್ನು ಎರಡು ತಿಂಗಳ ಅವಧಿಗೆ ವಿಸ್ತರಣೆ ಮಾಡಲಾಗಿದೆ.
ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ಈ ಕುರಿತು ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕನ್ನು ನಿಯಂತ್ರಿಸುವ ಮತ್ತು ಸೋಂಕಿತರಿಗೆ ಚಿಕಿತ್ಸೆ ನೀಡುವ ದೃಷ್ಟಿಯಿಂದ ಅಗತ್ಯವಾಗಿ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿ ಅಗತ್ಯವಿದೆ ಎಂದು ತಿಳಿಸಿದ್ದಾರೆ.
ಮಾರ್ಚ್.31ರ ಅವಧಿಗೆ ಸೇವಾ ಅವಧಿ ಪೂರ್ಣಗೊಳಿಸಿದ ವೈದ್ಯರನ್ನು ಮುಂದಿನ ಎರಡು ತಿಂಗಳು ಕಾಲ ಗುತ್ತಿಗೆ ಆಧಾರದ ಮೇಲೆ ಸೇವೆಗೆ ನೇಮಕ ಮಾಡಿಕೊಳ್ಳಲಾಗುತ್ತದೆ. ಇದರಿಂದ ವೈದ್ಯರ ಕೊರತೆ ನೀಗಿಸಲು ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.

ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಿದರೆ ಡಬಲ್ ಸ್ಯಾಲರಿ:
ಈ ಹಿಂದೆ ತಮಿಳುನಾಡು ಸರ್ಕಾರವು ಕೊರೊನಾ ವೈರಸ್ ಸೋಂಕಿತರಿಗೆ ಚಿಕಿತ್ಸೆ ನೀಡುವ ವೈದ್ಯರು ಮತ್ತು ಸಿಬ್ಬಂದಿಗೆ ಒಂದು ತಿಂಗಳ ಹೆಚ್ಚುವರಿ ಸಂಬಳವನ್ನು ನೀಡಲಾಗುತ್ತದೆ ಎಂದು ಘೋಷಣೆ ಮಾಡಿತ್ತು. ಇದರ ಬೆನ್ನಲ್ಲೇ ವೈದ್ಯರ ಸೇವಾವಧಿಯನ್ನು ವಿಸ್ತರಣೆ ಮಾಡಲಾಗಿದೆ. ಇದುವರೆಗೂ ರಾಜ್ಯದಲ್ಲಿ 74 ಮಂದಿಗೆ ಕೊರೊನಾ ವೈರಸ್ ಸೋಂಕು ಪಾಸಿಟಿವ್ ಬಂದಿರುವ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಸ್ಪಷ್ಟಪಡಿಸಿದೆ.
-
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
Prem: ಆಗ ಅಪ್ಪಾಜಿ-ಅಂಬರೀಷಣ್ಣ ಇದ್ರು, ಈಗ ಯಾರಿದ್ದಾರೆ; ಕೆಡಿ ವಿವಾದ ಆದಾಗಲೂ ಯಾರೂ ಸಪೋರ್ಟ್ಗೆ ಬರಲಿಲ್ಲ: ಪ್ರೇಮ್ ಬೇಸರ












Click it and Unblock the Notifications