ತಮಿಳುನಾಡಿನ ತಿರುಪ್ಪೂರ್‌ನ 25 ವಿದ್ಯಾರ್ಥಿಗಳಿಗೆ ಕೊರೊನಾ: ಶಾಲೆ ಬಂದ್

ಚೆನ್ನೈ ಡಿಸೆಂಬರ್ 2: ತಮಿಳುನಾಡಿನ ತಿರುಪ್ಪೂರ್ ಜಿಲ್ಲೆಯ ಖಾಸಗಿ ಶಾಲೆಯ 25ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗುಲಿರುವುದು ಗುರುವಾರ ದೃಢಪಟ್ಟಿದೆ. ವರದಿಗಳ ಪ್ರಕಾರ, ಓಮಿಕ್ರಾನ್ ರೂಪಾಂತರದ ಉಪಸ್ಥಿತಿಯನ್ನು ಪತ್ತೆಹಚ್ಚಲು ಜಿನೋಮಿಕ್ ಸೀಕ್ವೆನ್ಸಿಂಗ್ ಪರೀಕ್ಷೆಗಾಗಿ ಮಾದರಿಗಳನ್ನು ಕಳುಹಿಸಲಾಗಿದೆ. ಇದಲ್ಲದೆ, ಸಿಬ್ಬಂದಿ ಮತ್ತು ವಿದ್ಯಾರ್ಥಿಗಳ ಕುಟುಂಬ ಸದಸ್ಯರು ಸೇರಿದಂತೆ 300 ಜನರ ಮಾದರಿಗಳನ್ನು ಪರೀಕ್ಷಿಸಲಾಗುತ್ತಿದೆ. ಇಬ್ಬರು ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಉಳಿದವರು ಮನೆಯಲ್ಲಿ ಪ್ರತ್ಯೇಕವಾಗಿದ್ದಾರೆ.

ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿರುವ ರಾಜ್ಯ ಆರೋಗ್ಯ ಇಲಾಖೆ, ಸೋಂಕುನಿವಾರಕ ಕಾರ್ಯಕ್ಕಾಗಿ ಶಾಲೆಯನ್ನು ಈ ವಾರ ಮುಚ್ಚಲಾಗುವುದು ಎಂದು ತಿಳಿಸಿದೆ. ಇದಲ್ಲದೆ, ಕೋವಿಡ್-19 ಮಾನದಂಡದ ಕಾರ್ಯವಿಧಾನಗಳ ಅನುಸರಣೆಗೆ ಸಂಬಂಧಿಸಿದಂತೆ ಸರ್ಕಾರಿ ಮತ್ತು ಖಾಸಗಿ ಶಾಲೆಗಳ ವಾರ್ ರೂಂ ಮೇಲ್ವಿಚಾರಣೆಯನ್ನು ತಿರುಪ್ಪೂರ್ ಜಿಲ್ಲೆಯಾದ್ಯಂತ ತೀವ್ರಗೊಳಿಸಲಾಗಿದೆ. ಜಿಲ್ಲೆಯ ಜಿಲ್ಲಾ ಶಿಕ್ಷಣಾಧಿಕಾರಿ ಟಿ ಶಿವಕುಮಾರ್ ಅವರು ಮಾತನಾಡಿ, "ಶಾಲಾ ಶಿಕ್ಷಣ ಇಲಾಖೆಯು ಲಸಿಕೆ ಮತ್ತು ಇತರ ಸುರಕ್ಷತಾ ಪ್ರೋಟೋಕಾಲ್‌ಗಳ ಕುರಿತು ಪೋಷಕರಿಗೆ ಜಾಗೃತಿ ಕಾರ್ಯಕ್ರಮಗಳನ್ನು ನಡೆಸುತ್ತಿದೆ. ನಮ್ಮ ತಪಾಸಣೆಯ ಸಮಯದಲ್ಲಿ, ನಾವು ಶಾಲೆಗಳಲ್ಲಿ ಬೋಧಕ ಮತ್ತು ಬೋಧಕೇತರ ಅಧ್ಯಾಪಕರ ಲಸಿಕೆ ಪ್ರಮಾಣಪತ್ರಗಳನ್ನು ಸಹ ಪರಿಶೀಲಿಸುತ್ತಿದ್ದೇವೆ" ಎಂದು ಅವರು ಹೇಳಿದರು.

ಸೋಂಕಿತ ವಿದ್ಯಾರ್ಥಿಗಳಲ್ಲಿ 12 ಹುಡುಗರು ಮತ್ತು 12 ಹುಡುಗಿಯರು 10 ಮತ್ತು 12 ತರಗತಿಗಳಲ್ಲಿ ಮತ್ತು ಒಬ್ಬಳು 9ನೇ ತರಗತಿಯಲ್ಲಿ ಓದುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆರಂಭದಲ್ಲಿ ಆಸ್ಪತ್ರೆಗೆ ದಾಖಲಾದ ಇಬ್ಬರು ವಿದ್ಯಾರ್ಥಿಗಳನ್ನು ಹೊರತುಪಡಿಸಿ ಉಳಿದ ವಿದ್ಯಾರ್ಥಿಗಳು ಲಕ್ಷಣರಹಿತರಾಗಿದ್ದು ಅವರನ್ನು ಹೋಮ್ ಐಸೋಲೇಶನ್‌ಗೆ ಕಳುಹಿಸಲಾಗಿದೆ.

Coronavirus infects 25 students in Tiruppur: School closed

ಕೆಲ ದಿನಗಳ ಹಿಂದೆ ಒಡಿಶಾದ ಮಯೂರ್‌ಭಂಜ್ ಜಿಲ್ಲೆಯ ಸರ್ಕಾರಿ ಬಾಲಕಿಯರ ಶಾಲೆಯ 25 ವಿದ್ಯಾರ್ಥಿಗಳಿಗೆ ಸೋಂಕು ತಗುಲಿರುವುದು ದೃಢಪಟ್ಟಿತ್ತು. ವಿದ್ಯಾರ್ಥಿಗಳ ಸ್ಥಿತಿ ಸ್ಥಿರವಾಗಿದೆ ಎಂದು ಮುಖ್ಯ ಜಿಲ್ಲಾ ವೈದ್ಯಾಧಿಕಾರಿ ಡಾ.ರೂಪವನೂ ಮಿಶ್ರಾ ಅವರು ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ. ಸೋಂಕಿತ ವಿದ್ಯಾರ್ಥಿಗಳನ್ನು ಬುಡಕಟ್ಟು ವಿದ್ಯಾರ್ಥಿಗಳ ವಸತಿ ಶಾಲೆಯಲ್ಲಿ ಪ್ರತ್ಯೇಕವಾಗಿ ಇರಿಸಲಾಗಿದೆ. ಶಾಲೆಯಲ್ಲಿ ಸುಮಾರು 256 ವಿದ್ಯಾರ್ಥಿಗಳು ಮತ್ತು 20 ಸಿಬ್ಬಂದಿ ಇದ್ದು, ಜಿಲ್ಲಾಸ್ಪತ್ರೆಯ ವೈದ್ಯಕೀಯ ತಂಡ ಮತ್ತು ಸಬ್ ಕಲೆಕ್ಟರ್ ಡಾ.ರಜನಿಕಾಂತ್ ಬಿಶ್ವಾಲ್ ಶಾಲೆಯಲ್ಲಿದ್ದು, ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದಾರೆ. "ಕೆಲವು ವಿದ್ಯಾರ್ಥಿಗಳು ಎರಡು ದಿನಗಳಿಂದ ಶೀತ, ಕೆಮ್ಮು ಮತ್ತು ಜ್ವರದಿಂದ ಬಳಲುತ್ತಿದ್ದಾರೆ. ಆದ್ದರಿಂದ ನಾವು ಕ್ಷಿಪ್ರ ಕೋವಿಡ್ -19 ಪರೀಕ್ಷೆಯನ್ನು ಮಾಡಿದ್ದೇವೆ. 22 ಸೋಂಕಿತರನ್ನು ಪತ್ತೆಹಚ್ಚಿದ್ದೇವೆ" ಎಂದು ಡಾ ಮಿಶ್ರಾ ತಿಳಿಸಿದರು.

"ನಾವು ಇನ್ನೂ ಕೆಲ ವಿದ್ಯಾರ್ಥಿಗಳಲ್ಲೂ ಕೊರೊನಾ ಸೋಂಕು ಇರುವುದನ್ನು ಕಂಡುಕೊಂಡಿದ್ದೇವೆ. ಕೆಲವು ವಿದ್ಯಾರ್ಥಿಗಳು ಹಿಂದಿನ ದಿನ (ವಸತಿ) ಶಾಲೆಗೆ ಬಂದಿದ್ದರು. ಅವರು ಸೋಂಕನ್ನು ತಂದಿರಬಹುದು ಎಂದು ನಾವು ಭಾವಿಸುತ್ತೇವೆ. ಆಂಬ್ಯುಲೆನ್ಸ್‌ನೊಂದಿಗೆ ನಮ್ಮ ವೈದ್ಯಕೀಯ ತಂಡವು ಅಲ್ಲಿದೆ ಮತ್ತು ಡಾ ಅನಿತಾ ಸಿಂಗ್ ನಿಯಮಿತವಾಗಿ ವಿದ್ಯಾರ್ಥಿಗಳನ್ನು ಪರೀಕ್ಷಿಸುತ್ತಿದ್ದಾರೆ. ಪರಿಸ್ಥಿತಿ ನಿಯಂತ್ರಣದಲ್ಲಿದೆ" ಎಂದು ಡಾ ಮಿಶ್ರಾ ತಿಳಿಸಿದ್ದಾರೆ.

ಇನ್ನೂ ಕಳೆದ ವಾರ ಕರ್ನಾಟಕದ ಧಾರವಾಡ ಜಿಲ್ಲೆಯಲ್ಲಿ ಕೊರೊನಾ ಸ್ಪೋಟಗೊಂಡಿದ್ದು ಧಾರವಾಡ ಎಸ್‌ಡಿಎಂ ಕಾಲೇಜಿನಲ್ಲಿ 306 ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಹೀಗಾಗಿ ಕಳೆದ ಶನಿವಾರ 1500ಕ್ಕೂ ಹೆಚ್ಚು ಕೋವಿಡ್ ಪರೀಕ್ಷೆಗಳು ಪೂರ್ಣಗೊಂಡಿದ್ದು. ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಎಸ್‌ಡಿಎಂ ಕಾಲೇಜಿನ ಕೋವಿಡ್ ಪರಿಸ್ಥಿತಿಯನ್ನು ನಿಭಾಯಿಸಲು ಸನ್ನದ್ಧರಾಗಿದ್ದು, ಸೋಂಕಿತ ರೋಗಿಗಳಿಗೆ ಯಾವುದೇ ತೀವ್ರ ಆರೋಗ್ಯ ಸಮಸ್ಯೆಗಳು ಕಂಡುಬರದಂತೆ ನೋಡಿಕೊಳ್ಳಲು ಎಂಟು ಆಂಬ್ಯುಲೆನ್ಸ್‌ಗಳನ್ನು ಮತ್ತು ಅಗತ್ಯವಿರುವ ಸಿಬ್ಬಂದಿ ಮತ್ತು ವೈದ್ಯರನ್ನು ನಿಯೋಜಿಸಿದ್ದಾರೆ. ಕೋವಿಡ್ ಪರಿಸ್ಥಿತಿಯನ್ನು ನಿಭಾಯಿಸಲು ಸಾಕಷ್ಟು ಸಂಪನ್ಮೂಲಗಳಿದ್ದು, ಆಸ್ಪತ್ರೆ ಮತ್ತು ಕಾಲೇಜು ಆವರಣದ ಹೊರಗೆ ಕೊರೊನಾ ಹರಡುವುದನ್ನು ತಡೆಯಲು ಜಿಲ್ಲಾಧಿಕಾರಿ ಎಲ್ಲಾ ಕ್ರಮಗಳನ್ನು ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+