ಐಐಟಿ ಮದ್ರಾಸ್ನಲ್ಲಿ 183ಕ್ಕೆ ಏರಿದ ಸೋಂಕಿತರ ಸಂಖ್ಯೆ
ಚೆನ್ನೈ, ಡಿಸೆಂಬರ್ 15: ಐಐಟಿ ಮದ್ರಾಸ್ ನಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗಿದ್ದು, ಮಂಗಳವಾರ 79 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ಒಟ್ಟು ಪ್ರಕರಣಗಳ ಸಂಖ್ಯೆ 183ಕ್ಕೆ ಏರಿಕೆಯಾಗಿದೆ.
ಡಿ.14ರವರೆಗೆ ಇಲ್ಲಿನ 104 ಮಂದಿಯಲ್ಲಿ ಕೊರೊನಾ ಸೋಂಕು ಕಂಡುಬಂದಿತ್ತು. ಅದರಲ್ಲಿ 87 ಮಂದಿ ವಿದ್ಯಾರ್ಥಿಗಳಾಗಿದ್ದು, 16 ಮಂದಿ ಸಿಬ್ಬಂದಿಯಿದ್ದರು. ಇದರಲ್ಲಿ ಕೆಲವರಿಗೆ ಕಿಂಗ್ಸ್ ಇನ್ ಸ್ಟಿಟ್ಯೂಟ್ ಆಫ್ ಪ್ರಿವೆಂಟಿವ್ ಮೆಡಿಸಿನ್ ಅಂಡ್ ರಿಸರ್ಚ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಕಾರ್ಯದರ್ಶಿ ರಾಧಾಕೃಷ್ಣನ್ ತಿಳಿಸಿದ್ದಾರೆ.
ತಾತ್ಕಾಲಿಕವಾಗಿ ಕ್ಯಾಂಪಸ್ ಸೀಲ್ ಡೌನ್ ಆಗಿದೆ. ಐಐಟಿ ಮದ್ರಾಸ್ ಕ್ಯಾಂಪಸ್ ನಲ್ಲಿ ಒಟ್ಟು 774 ವಿದ್ಯಾರ್ಥಿಗಳಿದ್ದು, ಇದುವರೆಗೂ ಕ್ಯಾಂಪಸ್ ನ 953 ಮಂದಿಯನ್ನು ಪರೀಕ್ಷಿಸಲಾಗಿದೆ. ಸದ್ಯಕ್ಕೆ ಪರೀಕ್ಷಾ ಪ್ರಕ್ರಿಯೆ ನಿಲ್ಲಿಸಲಾಗಿದೆ. ಹತ್ತು ದಿನಗಳ ನಂತರ ಮತ್ತೊಂದು ಸುತ್ತಿನ ಪರೀಕ್ಷೆ ನಡೆಸಲಾಗುವುದು. ಎಲ್ಲರನ್ನೂ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ. ಇದು ಪ್ರಕರಣಗಳ ಸಂಖ್ಯೆಯನ್ನು ಏರಿಸಬಹುದು, ಆದರೆ ಕೊರೊನಾ ಹರಡುವುದನ್ನು ತಡೆಯಲು ನೆರವಾಗುತ್ತದೆ ಎಂದು ರಾಧಾಕೃಷ್ಣನ್ ತಿಳಿಸಿದ್ದಾರೆ.

ಡಿಸೆಂಬರ್ 1ರಂದು ಇಲ್ಲಿ ಮೊದಲ ಪ್ರಕರಣ ಪತ್ತೆಯಾಗಿತ್ತು. ಡಿ.11ರಲ್ಲಿ 11 ಪ್ರಕರಣ ದಾಖಲಾಗಿದ್ದು, ಮೂರು ದಿನಗಳ ಅಂತರದಲ್ಲಿ ಪ್ರಕರಣಗಳ ಸಂಖ್ಯೆ ಏಕಾಏಕಿ ಏರಿಕೆಯಾಗಿದೆ. ತಮಿಳುನಾಡು ಸರ್ಕಾರದ ಆದೇಶದ ಮೇರೆಗೆ ಡಿ.7ರಿಂದ ಐಐಟಿ ಮದ್ರಾಸ್ ನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿತ್ತು.
ಸೋಮವಾರ, ಡಿ.14ರಂದು ತಮಿಳುನಾಡಿನಲ್ಲಿ ಕೊರೊನಾ ಪಾಸಿಟಿವ್ ಪ್ರಕರಣ ಎಂಟು ಲಕ್ಷ ದಾಟಿದೆ. ಇದುವರೆಗೂ 11,909 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ.
-
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು? -
92,00,00,000 ರೂಪಾಯಿ ಬಹುಮಾನ, ಈತನ ಬಗ್ಗೆ ಸುಳಿವು ನೀಡಿದರೆ ನಿಮಗೂ ಸಿಗಲಿದೆ ಹಣ... Mojtaba Khamenei -
Shri Gandhada Gudi Serial: "ಶ್ರೀಗಂಧದಗುಡಿ" ಸೀರಿಯಲ್ಗೆ ಗುಡ್ಬೈ ಹೇಳಿದ ಸಂಜನಾ ಬುರ್ಲಿ, ಕಾರಣ ಇಲ್ಲಿದೆ












Click it and Unblock the Notifications