ನಟ, ಡಿಎಂಡಿಕೆ ಪಕ್ಷದ ಅಧ್ಯಕ್ಷ ವಿಜಯಕಾಂತ್ ಆಸ್ಪತ್ರೆಗೆ ದಾಖಲು
ಚೆನ್ನೈ, ಅ.7: ತಮಿಳು ಚಿತ್ರರಂಗದ ನಟ, ಡಿಎಂಡಿಕೆ ಪಕ್ಷದ ಅಧ್ಯಕ್ಷ ವಿಜಯಕಾಂತ್ ಅವರು ಮಂಗಳವಾರ ರಾತ್ರಿ ಚೆನ್ನೈನ ಎಂಐಒಟಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ.
ಇದೇ ಆಸ್ಪತ್ರೆಗೆ ಸೆಪ್ಟೆಂಬರ್ 22 ರಂದು ಕೋವಿಡ್ -19 ಸೋಂಕಿಗಾಗಿ ಚಿಕಿತ್ಸೆ ಪಡೆದುಕೊಂಡಿದ್ದ ವಿಜಯಕಾಂತ್ ಸುಮಾರು ಹತ್ತು ದಿನಗಳ ಬಳಿಕ ಆಸ್ಪತ್ರೆಯಿಂದ ಹೊರ ಬಂದಿದ್ದರು.
ವಿಜಯ್ ಕಾಂತ್ ಅವರ ಆರೋಗ್ಯದಲ್ಲಿ ತೀವ್ರ ಏರುಪೇರಾಗಿದೆ ಎಂಬ ಸುದ್ದಿಯನ್ನು ನಂಬಬೇಡಿ, ಅವರು ಆರೋಗ್ಯದಿಂದಿದ್ದಾರೆ. ಮತ್ತೊಮ್ಮೆ ಕೊವಿಡ್ 19 ತಗುಲಿರುವ ಬಗ್ಗೆ ಆಸ್ಪತ್ರೆಯಿಂದ ದೃಢವಾದ ವರದಿ ಬಂದಿಲ್ಲ. ಆರೋಗ್ಯ ಸ್ಥಿತಿಯ ಬಗೆಗಿನ ವದಂತಿಗಳನ್ನು ಹಬ್ಬಿಸಬೇಡಿ ಎಂದು ದೇಶಿಯ ಮುರ್ಪೊಕ್ಕು ದ್ರಾವಿಡ ಕಳಗಂ(ಡಿಎಂಡಿಕೆ) ಪ್ರಕಟಣೆ ಹೊರಡಿಸಿದೆ.

ವೈದ್ಯಕೀಯ ತಪಾಸಣೆಗಾಗಿ ಅವರು ಆಸ್ಪತ್ರೆಗೆ ದಾಖಲಾಗಿದ್ದ ವಿಜಯ್ ಕಾಂತ್ ಅವರನ್ನು ಚಿಕಿತ್ಸೆಗಾಗಿ ದಾಖಲಿಸಿಕೊಳ್ಳಲಾಗಿದೆ. ಶೀಘ್ರವೇ ಅವರನ್ನು ಬಿಡುಗಡೆ ಮಾಡಲಾಗುವುದು ಅಂತ ಎಂಐಒಟಿ ಆಸ್ಪತ್ರೆ ತಕ್ಷಣದ ಮಾಹಿತಿ ನೀಡಿದೆ.
DMDK chief Vijayakanth will be discharged shortly from hospital. As follow up for Covid-19 treatment, he underwent radiological assessment that showed significant improvement. pic.twitter.com/9qNsPSpfr9
— Shilpa Nair (@NairShilpa1308) October 7, 2020
ಸೆಪ್ಟೆಂಬರ್ 22 ರಂದು ಕೋವಿಡ್ -19 ಸೋಂಕಿಗೆ ತುತ್ತಾಗಿದ್ದ ವಿಜಯಕಾಂತ್ ನಂತರ ಅವರ ಪತ್ನಿ ಪ್ರೇಮಲತಾ ವಿಜಯಕಾಂತ್ ಕೂಡ ಕೋವಿಡ್ ಸೋಂಕಿನಿಂದ ಬಳಲಿದ್ದರು. ಇಬ್ಬರೂ ಅಕ್ಟೋಬರ್ 2ರಂದು ಚೇತರಿಕೆ ಹೊಂದಿ ಮನೆಗೆ ತೆರಳಿದ್ದರು. ಇಬ್ಬರಿಗೂ ಪರೀಕ್ಷಾ ವರದಿ ಮತ್ತೊಮ್ಮೆ ನೆಗಟಿವ್ ಬರುವ ತನಕ ಐಸೋಲೇಷನ್ ನಲ್ಲಿರಲು ವೈದ್ಯರು ಸೂಚಿಸಿದ್ದರು.

ವಿಜಯ್ ಕಾಂತ್ ಅವರು ತಮ್ಮ ಪುತ್ರ ಷಣ್ಮುಗ ಪಾಂಡಿಯನ್ ಅವರ ಚೊಚ್ಚಲ ಚಿತ್ರ ಸಂಗಪ್ತಂನಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications