ಮುದುಮಲೈ ಅಭಯಾರಣ್ಯದ ಶಿಬಿರದಲ್ಲಿದ್ದ ಆನೆಗಳಿಗೆ ಕೊರೊನಾ ಪರೀಕ್ಷೆ
ಚೆನ್ನೈ ಜೂನ್ 8: ಕೊರೊನಾವೈರಸ್ ಮನುಷ್ಯರಲ್ಲಿ ಮಾತ್ರವಲ್ಲ ಮೃಗಾಲಯಗಳಲ್ಲಿರುವ ಸಿಂಹಗಳಲ್ಲಿಯೂ ಪತ್ತೆಯಾಗಿರುವುದು ಹೊಸ ಸವಾಲಾಗಿದೆ. ಇತ್ತೀಚೆಗೆ ಭಾರತದ ಎರಡು ಅಭಯಾರಣ್ಯಗಳಲ್ಲಿ ಸಿಂಹಗಳು ಕೊರೊನಾವೈರಸ್ಗೆ ತುತ್ತಾಗಿರುವುದು ಪರೀಕ್ಷೆಯಲ್ಲಿ ದೃಢಪಟ್ಟಿತ್ತು. ಹೀಗಾಗಿ ಮುದುಮಲೈ ಅಭಯಾರಣ್ಯದಲ್ಲಿ ಕ್ಯಾಂಪ್ನಲ್ಲಿರುವ ಆನೆಗಳಿಗೆ ಈಗ ಕೊರೊನಾ ಪರೀಕ್ಷೆ ನಡೆಸಲು ಮಾದರಿಗಳನ್ನು ಸಂಗ್ರಹಿಸಲಾಗಿದೆ.
ತಮಿಳುನಾಡು ಅರಣ್ಯ ಸಚಿವ ಕೆ ರಾಮಚಂದ್ರನ್ ಎಲ್ಲಾ ಆನೆಗಳ ಮಾದರಿಯನ್ನು ಪರೀಕ್ಷೆ ನಡೆಸಲು ಸೂಚಿಸಿದ್ದಾರೆ ಎಂದು ಅರಣ್ಯ ಇಲಾಖೆ ಮೂಲಗಳು ತಿಳಿಸಿವೆ. ಆನೆಗಳ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಉತ್ತರ ಪ್ರದೇಶದ ಇಜತ್ನಗರದಲ್ಲಿರುವ ಭಾರತೀಯ ಪಶು ವೈದ್ಯಕೀಯ ಸಂಶೋಧನಾ ಸಂಸ್ಥೆಗೆ ಕಳುಹಿಸಲಾಗುತ್ತದೆ.
ಈ ಹಿನ್ನೆಲೆಯಲ್ಲಿ ಮುದುಮಲೈ ಕ್ಯಾಂಪ್ನಲ್ಲಿರುವ ಎಲ್ಲಾ 28 ಆನೆಗಳ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಅವುಗಳನ್ನು ಒಂದು ಬದಿಯಲ್ಲಿ ಮಲಗಿಸಿ ಸೊಂಡಿಲು ಹಾಗೂ ಬಾಯಿಯಿಂದ ದ್ರವಗಳನ್ನು ತೆಗೆದು ಮಾದರಿ ಸಂಗ್ರಹಿಸಲಾಗಿದೆ ಎಂದು ಅರಣ್ಯ ಇಲಾಖೆಯ ಮೂಲಗಳು ಮಾಹಿತಿ ನೀಡಿದೆ.

ಕಳೆದ ಗುರುವಾರ ತಮಿಳುನಾಡಿನ ವಂದಲೂರು ಪ್ರಾಣಿಸಂಗ್ರಹಾಲಯದಲ್ಲಿ ಕೊರೊನಾವೈರಸ್ನಿಂದಾಗಿ ಸಿಂಹವೊಂದು ಮೃತಪಟ್ಟಿತ್ತು. ಅಲ್ಲದೆ ಪ್ರಾಣಿಸಂಗ್ರಹಾಲಯದಲ್ಲಿದ್ದ 11 ಆನೆಗಳ ಪೈಕಿ 9 ಸಿಂಹಗಳಿಗೆ ಕೊರೊನಾವೈರಸ್ ಇರುವುದು ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ ತಮಿಳುನಾಡಿನಲ್ಲಿ ಆನೆಗಳಿಗೆ ಕೊರೊನಾ ಪರೀಕ್ಷೆಯನ್ನು ನಡೆಸಲು ಆದೇಶವನ್ನು ನೀಡಲಾಗಿದೆ.
ತಮಿಳುನಾಡು ಮಾತ್ರವಲ್ಲದೆ ಹೈದರಾಬಾದ್ನ ನೆಹರೂ ಮೃಗಾಲಯದಲ್ಲಿಯೂ ಸಿಂಹಗಳು ಕೊರೊನಾವೈರಸ್ಗೆ ತುತ್ತಾಗಿರುವುದು ಪರೀಕ್ಷೆಯಲ್ಲಿ ದೃಢಪಟ್ಟಿತ್ತು. ಈ ಮೂಲಕ ಭಾರತದಲ್ಲಿ ಮೊದಲ ಬಾರಿಗೆ ಪ್ರಾಣಿಗಳಲ್ಲಿ ಕೊರೊನಾವೈರಸ್ ಪತ್ತೆಯಾಗಿತ್ತು. ಈಗ ಮುನ್ನೆಚ್ಚರಿಕಾ ಕ್ರಮವಾಗಿ ತಮಿಳುನಾಡಿನಲ್ಲಿ ಆನೆಗಳ ಕೊರೊನಾ ಪರೀಕ್ಷೆ ನಡೆಸಲು ಕ್ರಮಕೈಗೊಳ್ಳಲಾಗಿದೆ.
-
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್ -
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ?












Click it and Unblock the Notifications