ತ್ರಿರಂಗದ ಭಾರತ ನಕ್ಷೆ ಚಿತ್ರವಿರುವ ಕೇಕ್ ಕತ್ತರಿಸುವುದು ಅವಮಾನವಲ್ಲ; ಮದ್ರಾಸ್ ಹೈಕೋರ್ಟ್
ಚೆನ್ನೈ, ಮಾರ್ಚ್ 22: ಅಶೋಕ ಚಕ್ರ ಹಾಗೂ ತ್ರಿರಂಗದ ಭಾರತ ನಕ್ಷೆಯ ಚಿತ್ರವಿದ್ದ ಕೇಕ್ ಕತ್ತರಿಸುವುದು ಅವಮಾನವಲ್ಲ ಎಂದಿರುವ ಮದ್ರಾಸ್ ಹೈಕೋರ್ಟ್, ರಾಷ್ಟ್ರೀಯ ಗೌರವ ಕಾಯ್ದೆ 1971ರ ಅಡಿಯಲ್ಲಿ ಇದನ್ನು ಅವಮಾನ ಎಂದು ಹೇಳುವಂತಿಲ್ಲ ಎಂದಿದೆ.
ನ್ಯಾಯಮೂರ್ತಿ ಎ. ಆನಂದ ವೆಂಕಟೇಶ್ ಅವರು ಈ ತೀರ್ಪು ನೀಡಿದ್ದಾರೆ. ರಾಷ್ಟ್ರೀಯ ಗೌರವ ಕಾಯ್ದೆಯ ಕುರಿತು ಅವಲೋಕನ ನಡೆಸಿ ಈ ತಿರ್ಮಾನ ಕೈಗೊಂಡಿರುವುದಾಗಿ ತಿಳಿಸಿದ್ದಾರೆ. 2013ರಲ್ಲಿ ಹೂಡಲಾಗಿದ್ದ ಕ್ರಿಮಿನಲ್ ಮೊಕದ್ದಮೆಯನ್ನು ರದ್ದುಪಡಿಸಿದ್ದಾರೆ.
ಭಾರತದಂಥ ಪ್ರಜಾಪ್ರಭುತ್ವ ದೇಶದಲ್ಲಿ ರಾಷ್ಟ್ರೀಯತೆ ಎಂಬುದು ಬಹಳ ಮಹತ್ವದ್ದು ಎಂಬುದರಲ್ಲಿ ಸಂದೇಹವಿಲ್ಲ ಎಂದು ರವೀಂದ್ರನಾಥ್ ಠ್ಯಾಗೋರ್ ಅವರ ದೇಶಭಕ್ತಿ ಹಾಗೂ ಮಾನವೀಯತೆ ಕುರಿತ ಹೇಳಿಕೆಯನ್ನೂ ಉಲ್ಲೇಖಿಸಿದ್ದಾರೆ.

2013ರಲ್ಲಿ ನಡೆದ ಘಟನೆ ಇದಾಗಿದ್ದು, ಕ್ರಿಸ್ಮಸ್ ಸಂದರ್ಭ ತ್ರಿವರ್ಣದ ಭಾರತ ನಕ್ಷೆಯ ಚಿತ್ರವಿರುವ 6x5 ಅಡಿ ಕೇಕ್ ಕತ್ತರಿಸಿ ಸುಮಾರು 2500 ಮಂದಿಗೆ ಹಂಚಲಾಗಿತ್ತು. ಈ ಕಾರ್ಯಕ್ರಮದಲ್ಲಿ ಕೊಯಮತ್ತೂರು ಡಿಸಿ, ಡಿಸಿಪಿ ಎಲ್ಲರೂ ಭಾಗವಹಿಸಿದ್ದರು. ಡಾ. ಸೆಂತಿಲ್ ಕುಮಾರ್ ಎಂಬುವರು ಈ ಕೇಕ್ ವಿನ್ಯಾಸದ ಬಗ್ಗೆ ತಕರಾರು ತೆಗೆದಿದ್ದು, ತ್ರಿವರ್ಣ ಧ್ವಜದ ಚಿತ್ರ ಹೊಂದಿರುವ ಕೇಕ್ ಕತ್ತರಿಸಿದ್ದು ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದಂತೆ ಎಂದು ದೂರು ಸಲ್ಲಿಸಿದ್ದರು.
ಈ ಕುರಿತು ಸುದೀರ್ಘ ಅವಲೋಕನವೂ ನಡೆದಿದ್ದು, ಸೋಮವಾರ, ಈ ಸಂಗತಿಯನ್ನು ಅವಮಾನ ಎಂದು ಪರಿಗಣಿಸುವಂತಾದರೆ, ರಾಷ್ಟ್ರ ಧ್ವಜ ಹಿಡಿಯಲು ಮುಂದೊಂದು ದಿನ ಜನರು ಭಯ ಪಡಬೇಕಾಗುತ್ತದೆ ಎಂದು ನ್ಯಾಯಪೀಠ ತಿಳಿಸಿದೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ಬೇಸಿಗೆಯ ಸುಡು ಬಿಸಿಲಿನಿಂದ ಪಾರಾಗಲು ಭೇಟಿ ನೀಡಬಹುದಾದ ಭಾರತದ 10 ಪ್ರೇಕ್ಷಣೀಯ ಸ್ಥಳಗಳು












Click it and Unblock the Notifications