'ನಿವಾರ್' ಹೋದರೂ ಇಲ್ಲ ನೆಮ್ಮದಿ: ಬರಲಿದೆ ಮತ್ತೊಂದು ಚಂಡಮಾರುತ 'ಬುರೆವಿ'
ಚೆನ್ನೈ, ನವೆಂಬರ್ 28: ಭಾರಿ ಆತಂಕ ಸೃಷ್ಟಿಸಿದ್ದ 'ನಿವಾರ್' ಚಂಡಮಾರುತ ತಮಿಳುನಾಡು ಮತ್ತು ಪುದುಚೆರಿಗಳಲ್ಲಿ ಅಪ್ಪಳಿಸುವ ವೇಳೆ ದುರ್ಬಲಗೊಂಡಿದ್ದರಿಂದ ನಿರೀಕ್ಷಿಸಿದಷ್ಟು ಅಪಾಯ ಸೃಷ್ಟಿಸದೆ ನಿರ್ಗಮಿಸಿದೆ. ಆದರೆ ಅನೇಕ ಮರಗಳು ಧರೆಗುರುಳಿವೆ. ಗೋಡೆ ಕುಸಿತ, ಭೂಕುಸಿತ, ಮನೆಗಳಿಗೆ ನೀರು ನುಗ್ಗಿರುವುದು ಮುಂತಾದ ಹಾನಿಗಳಿಂದ ಚೇತರಿಸಿಕೊಳ್ಳಲು ಕರಾವಳಿಯ ಭಾಗಗಳಿಗೆ ಹಲವು ಸಮಯ ಬೇಕಾಗಬಹುದು. ಆದರೆ 'ನಿವಾರ್' ಹೊಡೆತದಿಂದ ಸುಧಾರಿಸಿಕೊಂಡು ನಿಟ್ಟುಸಿರು ಬಿಡುವ ಮೊದಲೇ ಮತ್ತೊಂದು ಆಪತ್ತು ಎದುರಾಗಿದೆ.
ಪುದುಚೆರಿ ಮತ್ತು ತಮಿಳುನಾಡಿನ ಕರಾವಳಿಗಳಲ್ಲಿ ನಿವಾರ್ ಅಪ್ಪಳಿಸಿದ ಮರುದಿನವೇ ಬಂಗಾಳ ಕೊಲ್ಲಿಯಲ್ಲಿ ಮತ್ತೊಂದು ಚಂಡಮಾರುತ ಸ್ವರೂಪದ ಬಿರುಗಾಳಿ ಸೃಷ್ಟಿಯಾಗಿದೆ. ಅದು ದೊಡ್ಡ ಮಟ್ಟಕ್ಕೆ ಬೆಳೆದರೆ ಪುನಃ ತಮಿಳುನಾಡು ಮತ್ತು ಪುದುಚೆರಿಗಳತ್ತ ಚಲಿಸಿ ಡಿಸೆಂಬರ್ 2ರ ವೇಳೆಗೆ ಅಪ್ಪಳಿಸುವ ಸಾಧ್ಯತೆ ಇದೆ.
ಬಂಗಾಳ ಕೊಲ್ಲಿಯ ಆಗ್ನೇಯ ಭಾಗದಲ್ಲಿ ವಾಯುಭಾರ ಕುಸಿತದಿಂದ ಒತ್ತಡವುಂಟಾಗಿ ಚಂಡಮಾರುತ ಸೃಷ್ಟಿಯಾಗಲಿದ್ದು, ಅದು ಕ್ರಮೇಣ ತೀವ್ರವಾಗುವ ಸಾಧ್ಯತೆ ಇದೆ ಎಂದು ತಮಿಳುನಾಡು ವಿಪತ್ತು ನಿರ್ವಹಣಾ ಪ್ರಾಧಿಕಾರ ಹೇಳಿದೆ. ಈ ಚಂಡಮಾರುತಕ್ಕೆ 'ಬುರೆವಿ' ಎಂದು ಹೆಸರಿಡಲಾಗಿದೆ. ಮುಂದೆ ಓದಿ.

ಡಿ.2ರ ವೇಳೆ ಚಂಡಮಾರುತದ ಪ್ರಭಾವ
'ಆಗ್ನೇಯ ಬಂಗಾಳಕೊಲ್ಲಿಯ ಮೇಲೆ ವಾಯುಭಾರ ಕುಸಿತ ಉಂಟಾಗುವ ಸಂಭವ ಹೆಚ್ಚಿದೆ. ಮುಂದಿನ 24 ಗಂಟೆಗಳಲ್ಲಿ ಭಾನುವಾರದ ವೇಳೆಗೆ ಅದು ಒತ್ತಡಕ್ಕೆ ತಿರುಗಿ ತೀವ್ರಗೊಳ್ಳುವ ಸಾಧ್ಯತೆ ಇದೆ. ಬಳಿಕ ಡಿಸೆಂಬರ್ 2ರ ವೇಳೆ ತಮಿಳುನಾಡು ಮತ್ತು ಪುದುಚೆರಿ ಕರಾವಳಿಗಳಿಗೆ ತಲುಪುವ ನಿರೀಕ್ಷೆಯಿದೆ' ಎಂದು ಪ್ರಾಧಿಕಾರ ತಿಳಿಸಿದೆ.

ಡಿ. 10ರಂದು ಮತ್ತೊಂದು ಅಬ್ಬರ
ಇದಲ್ಲದೆ ಡಿಸೆಂಬರ್ 10ರ ವೇಳೆಗೆ ದಕ್ಷಿಣ ಬಂಗಾಳ ಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತದಿಂದ ಚಂಡಮಾರುತದ ಪ್ರಭಾವ ಉಂಟಾಗಬಹುದು. ಇದು ಡಿ. 11ರಂದು ಪುನಃ ತಮಿಳುನಾಡು ಮತ್ತು ಪುದುಚೆರಿ ಕರಾವಳಿಗಳಿಗೆ ಅಪ್ಪಳಿಸುವ ಅಪಾಯವಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ವ್ಯಾಪಕ ಮಳೆ ಸಾಧ್ಯತೆ
ಆದರೆ ಹೊಸ ಚಂಡಮಾರುತದ ಪ್ರಭಾವ ಎಷ್ಟರಮಟ್ಟಿಗೆ ಇರಲಿದೆ ಎಂದು ಇನ್ನೂ ತಿಳಿದುಬಂದಿಲ್ಲ. ಆಗ್ನೇಯ ಬಂಗಾಳಕೊಲ್ಲಿಯಲ್ಲಿ ಉಂಟಾಗುತ್ತಿರುವ ಚಂಡಮಾರುತದ ಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ಅದರ ತೀವ್ರತೆ ಬಗ್ಗೆ ಇಷ್ಟು ಬೇಗ ನಿರ್ಧರಿಸುವುದು ಕಷ್ಟಕರ. ಚಂಡಮಾರುತ ದುರ್ಬಲವಾಗಿದ್ದರೂ ಡಿ. 1 ಮತ್ತು 2ರಂದು ಮುಖಜಭೂಮಿ ಪ್ರದೇಶಗಳಲ್ಲಿ ವ್ಯಾಪಕ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಹೇಳಿದೆ.

ವಾಡಿಕೆಗಿಂತ ಅಧಿಕ ಮಳೆ
ನಿವಾರ್ ಚಂಡಮಾರುತ ನಿರೀಕ್ಷಿಸಿದಷ್ಟು ಅಪಾಯಕಾರಿಯಾಗದೆ ಇದ್ದರೂ ಅಕ್ಟೋಬರ್ 1ರಿಂದ ಇದುವರೆಗಿನ ಅವಧಿಯಲ್ಲಿ ವಾಡಿಕೆಗಿಂತ 36%ರಷ್ಟು ಅಧಿಕ ಮಳೆ ಸುರಿಸಿದೆ. ಸಾಮಾನ್ಯವಾಗಿ ಈ ಅವಧಿಯಲ್ಲಿ ಚೆನ್ನೈನಲ್ಲಿ 590.1 ವಾಡಿಕೆ ಮಳೆಯಾಗುತ್ತದೆ. ಆದರೆ ಈ ಬಾರಿ 801.3 ಮಿಮೀ ಮಳೆ ಸುರಿದಿದೆ.
-
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್












Click it and Unblock the Notifications