'ನಿವಾರ್' ಹೋದರೂ ಇಲ್ಲ ನೆಮ್ಮದಿ: ಬರಲಿದೆ ಮತ್ತೊಂದು ಚಂಡಮಾರುತ 'ಬುರೆವಿ'
ಚೆನ್ನೈ, ನವೆಂಬರ್ 28: ಭಾರಿ ಆತಂಕ ಸೃಷ್ಟಿಸಿದ್ದ 'ನಿವಾರ್' ಚಂಡಮಾರುತ ತಮಿಳುನಾಡು ಮತ್ತು ಪುದುಚೆರಿಗಳಲ್ಲಿ ಅಪ್ಪಳಿಸುವ ವೇಳೆ ದುರ್ಬಲಗೊಂಡಿದ್ದರಿಂದ ನಿರೀಕ್ಷಿಸಿದಷ್ಟು ಅಪಾಯ ಸೃಷ್ಟಿಸದೆ ನಿರ್ಗಮಿಸಿದೆ. ಆದರೆ ಅನೇಕ ಮರಗಳು ಧರೆಗುರುಳಿವೆ. ಗೋಡೆ ಕುಸಿತ, ಭೂಕುಸಿತ, ಮನೆಗಳಿಗೆ ನೀರು ನುಗ್ಗಿರುವುದು ಮುಂತಾದ ಹಾನಿಗಳಿಂದ ಚೇತರಿಸಿಕೊಳ್ಳಲು ಕರಾವಳಿಯ ಭಾಗಗಳಿಗೆ ಹಲವು ಸಮಯ ಬೇಕಾಗಬಹುದು. ಆದರೆ 'ನಿವಾರ್' ಹೊಡೆತದಿಂದ ಸುಧಾರಿಸಿಕೊಂಡು ನಿಟ್ಟುಸಿರು ಬಿಡುವ ಮೊದಲೇ ಮತ್ತೊಂದು ಆಪತ್ತು ಎದುರಾಗಿದೆ.
ಪುದುಚೆರಿ ಮತ್ತು ತಮಿಳುನಾಡಿನ ಕರಾವಳಿಗಳಲ್ಲಿ ನಿವಾರ್ ಅಪ್ಪಳಿಸಿದ ಮರುದಿನವೇ ಬಂಗಾಳ ಕೊಲ್ಲಿಯಲ್ಲಿ ಮತ್ತೊಂದು ಚಂಡಮಾರುತ ಸ್ವರೂಪದ ಬಿರುಗಾಳಿ ಸೃಷ್ಟಿಯಾಗಿದೆ. ಅದು ದೊಡ್ಡ ಮಟ್ಟಕ್ಕೆ ಬೆಳೆದರೆ ಪುನಃ ತಮಿಳುನಾಡು ಮತ್ತು ಪುದುಚೆರಿಗಳತ್ತ ಚಲಿಸಿ ಡಿಸೆಂಬರ್ 2ರ ವೇಳೆಗೆ ಅಪ್ಪಳಿಸುವ ಸಾಧ್ಯತೆ ಇದೆ.
ಬಂಗಾಳ ಕೊಲ್ಲಿಯ ಆಗ್ನೇಯ ಭಾಗದಲ್ಲಿ ವಾಯುಭಾರ ಕುಸಿತದಿಂದ ಒತ್ತಡವುಂಟಾಗಿ ಚಂಡಮಾರುತ ಸೃಷ್ಟಿಯಾಗಲಿದ್ದು, ಅದು ಕ್ರಮೇಣ ತೀವ್ರವಾಗುವ ಸಾಧ್ಯತೆ ಇದೆ ಎಂದು ತಮಿಳುನಾಡು ವಿಪತ್ತು ನಿರ್ವಹಣಾ ಪ್ರಾಧಿಕಾರ ಹೇಳಿದೆ. ಈ ಚಂಡಮಾರುತಕ್ಕೆ 'ಬುರೆವಿ' ಎಂದು ಹೆಸರಿಡಲಾಗಿದೆ. ಮುಂದೆ ಓದಿ.

ಡಿ.2ರ ವೇಳೆ ಚಂಡಮಾರುತದ ಪ್ರಭಾವ
'ಆಗ್ನೇಯ ಬಂಗಾಳಕೊಲ್ಲಿಯ ಮೇಲೆ ವಾಯುಭಾರ ಕುಸಿತ ಉಂಟಾಗುವ ಸಂಭವ ಹೆಚ್ಚಿದೆ. ಮುಂದಿನ 24 ಗಂಟೆಗಳಲ್ಲಿ ಭಾನುವಾರದ ವೇಳೆಗೆ ಅದು ಒತ್ತಡಕ್ಕೆ ತಿರುಗಿ ತೀವ್ರಗೊಳ್ಳುವ ಸಾಧ್ಯತೆ ಇದೆ. ಬಳಿಕ ಡಿಸೆಂಬರ್ 2ರ ವೇಳೆ ತಮಿಳುನಾಡು ಮತ್ತು ಪುದುಚೆರಿ ಕರಾವಳಿಗಳಿಗೆ ತಲುಪುವ ನಿರೀಕ್ಷೆಯಿದೆ' ಎಂದು ಪ್ರಾಧಿಕಾರ ತಿಳಿಸಿದೆ.

ಡಿ. 10ರಂದು ಮತ್ತೊಂದು ಅಬ್ಬರ
ಇದಲ್ಲದೆ ಡಿಸೆಂಬರ್ 10ರ ವೇಳೆಗೆ ದಕ್ಷಿಣ ಬಂಗಾಳ ಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತದಿಂದ ಚಂಡಮಾರುತದ ಪ್ರಭಾವ ಉಂಟಾಗಬಹುದು. ಇದು ಡಿ. 11ರಂದು ಪುನಃ ತಮಿಳುನಾಡು ಮತ್ತು ಪುದುಚೆರಿ ಕರಾವಳಿಗಳಿಗೆ ಅಪ್ಪಳಿಸುವ ಅಪಾಯವಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ವ್ಯಾಪಕ ಮಳೆ ಸಾಧ್ಯತೆ
ಆದರೆ ಹೊಸ ಚಂಡಮಾರುತದ ಪ್ರಭಾವ ಎಷ್ಟರಮಟ್ಟಿಗೆ ಇರಲಿದೆ ಎಂದು ಇನ್ನೂ ತಿಳಿದುಬಂದಿಲ್ಲ. ಆಗ್ನೇಯ ಬಂಗಾಳಕೊಲ್ಲಿಯಲ್ಲಿ ಉಂಟಾಗುತ್ತಿರುವ ಚಂಡಮಾರುತದ ಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ಅದರ ತೀವ್ರತೆ ಬಗ್ಗೆ ಇಷ್ಟು ಬೇಗ ನಿರ್ಧರಿಸುವುದು ಕಷ್ಟಕರ. ಚಂಡಮಾರುತ ದುರ್ಬಲವಾಗಿದ್ದರೂ ಡಿ. 1 ಮತ್ತು 2ರಂದು ಮುಖಜಭೂಮಿ ಪ್ರದೇಶಗಳಲ್ಲಿ ವ್ಯಾಪಕ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಹೇಳಿದೆ.

ವಾಡಿಕೆಗಿಂತ ಅಧಿಕ ಮಳೆ
ನಿವಾರ್ ಚಂಡಮಾರುತ ನಿರೀಕ್ಷಿಸಿದಷ್ಟು ಅಪಾಯಕಾರಿಯಾಗದೆ ಇದ್ದರೂ ಅಕ್ಟೋಬರ್ 1ರಿಂದ ಇದುವರೆಗಿನ ಅವಧಿಯಲ್ಲಿ ವಾಡಿಕೆಗಿಂತ 36%ರಷ್ಟು ಅಧಿಕ ಮಳೆ ಸುರಿಸಿದೆ. ಸಾಮಾನ್ಯವಾಗಿ ಈ ಅವಧಿಯಲ್ಲಿ ಚೆನ್ನೈನಲ್ಲಿ 590.1 ವಾಡಿಕೆ ಮಳೆಯಾಗುತ್ತದೆ. ಆದರೆ ಈ ಬಾರಿ 801.3 ಮಿಮೀ ಮಳೆ ಸುರಿದಿದೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications