ಪುದುಚೆರಿಯಲ್ಲಿ ಅಪ್ಪಳಿಸಿದ ನಿವಾರ್: ಚಂಡಮಾರುತ ಕೊಂಚ ದುರ್ಬಲ
ಚೆನ್ನೈ, ನವೆಂಬರ್ 26: ದಕ್ಷಿಣ ಭಾರತದಲ್ಲಿ ಬಹುತೇಕ ಕಡೆ ನಡುಕ ಹುಟ್ಟಿಸಿರುವ 'ನಿವಾರ್' ಚಂಡಮಾರುತ ಪುದುಚೆರಿಗೆ ಅಪ್ಪಳಿಸಿದೆ. ಬುಧವಾರ ರಾತ್ರಿ 11.30ರ ಸುಮಾರಿಗೆ ಪುದುಚೆರಿ ಸಮೀಪದ ಕರಾವಳಿಯನ್ನು ಹಾದುಹೋದ ಚಂಡಮಾರುತ ಗುರುವಾರ ನಸುಕಿನ 2.30ರ ಸುಮಾರಿಗೆ ಧರೆಗೆ ಅಪ್ಪಳಿಸಿದೆ. ಆದರೆ ಅತಿ ತೀವ್ರ ಚಂಡಮಾರುತದ ಬಿರುಗಾಳಿಯು ದುರ್ಬಲಗೊಂಡಿದ್ದು, ತೀವ್ರ ಚಂಡಮಾರುತದ ಬಿರುಗಾಳಿಯಾಗಿ ಬದಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಪುದುಚೆರಿಯ 30 ಕಿಮೀ ಉತ್ತರಕ್ಕೆ ಹಾಗೂ ಚೆನ್ನೈನಿಂದ 115 ಕಿಮೀ ದಕ್ಷಿಣದಲ್ಲಿ ಮರಕ್ಕಣಂ ಕೇಂದ್ರದಲ್ಲಿ ಚಂಡಮಾರುತ ಅಪ್ಪಳಿಸಿದೆ.
ಇದರಿಂದ ಚಂಡಮಾರುತದ ರಭಸಕ್ಕೆ ಉಂಟಾಗುವ ಹಾನಿಯ ಪ್ರಮಾಣ ಕೊಂಚ ತಗ್ಗುವ ನಿರೀಕ್ಷೆಯಿದೆ. ಪುದುಚೆರಿಯ ಈಶಾನ್ಯ ವಲಯದಲ್ಲಿ ಬೀಸುತ್ತಿರುವ ಗಾಳಿ ಮೂರು ಗಂಟೆಗಳಲ್ಲಿ ಕ್ರಮೇಣ 65-75 ಕಿಮೀ ವೇಗಕ್ಕೆ ತಗ್ಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಪ್ರಸ್ತುತ ಪುದುಚೆರಿಯ ಈಶಾನ್ಯ ಭಾಗದಲ್ಲಿ ಗಾಳಿಯು ಗಂಟೆಗೆ 100-110 ಕಿಮೀ ವೇಗದಲ್ಲಿ ಬೀಸುತ್ತಿದ್ದು, ಈಗಲೂ ಅಪಾಯ ಕಡಿಮೆಯಾಗಿಲ್ಲ. ಇದುವರೆಗೂ ಯಾವುದೇ ಸೋವು ನೋವಿನ ವರದಿಯಾಗಿಲ್ಲ. ಚಂಡಮಾರುತದ ಪರಿಣಾಮವಾಗಿ ಎರಡು ದಿನದಿಂದ ಭಾರಿ ಮಳೆಯಾಗುತ್ತಿತ್ತು. ಚಂಡಮಾರುತ ಅಪ್ಪಳಿಸುವ ವೇಳೆಗೆ ಅದರ ಪರಿಣಾಮ ಮತ್ತಷ್ಟು ಹೆಚ್ಚುವ ಭೀತಿ ಎದುರಾಗಿತ್ತು. ಆದರೆ ಇದುವರೆಗೂ ಅಂತಹ ಭೀಕರ ಸ್ಥಿತಿ ನಿರ್ಮಾಣವಾಗಿಲ್ಲ. ಮುಂದಿನ ಆರುಗಂಟೆಗಳ ಬಳಿಕ ಮಳೆ ಮತ್ತು ಗಾಳಿ ತೀವ್ರತೆ ಕಡಿಮೆಯಾಗಲಿದೆ ಎನ್ನಲಾಗಿದೆ.
#WATCH Tamil Nadu: Mahabalipuram braves strong winds, landfall process of #CycloneNivar continues.
— ANI (@ANI) November 25, 2020
Centre of Nivar moved NW with a speed of 16 kmph during past 6 hrs, lying 45 km E-NE of Cuddalore & 30 km east of Puducherry. It'll cross coast near Puducherry within next 2 hours. pic.twitter.com/pDqambd8Fs
ಕೆಲವು ಭಾಗಗಳಲ್ಲಿ ಗೋಡೆ ಕುಸಿತದ ಪ್ರಕರಣಗಳು ವರದಿಯಾಗಿವೆ. ನಿವಾರ್ ವಾಯವ್ಯ ದಿಕ್ಕಿನಡೆಗೆ ಚಲಿಸಲಿದೆ. ಚಂಡಮಾರುತದ ಕೇಂದ್ರ ಭಾಗವು ಭೂಮಿಗೆ ಅಪ್ಪಳಿಸುವಾಗ ದುರ್ಬಲವಾಗಿದ್ದರೂ ಅದರ ಕೆಲವು ಭಾಗ ಇನ್ನೂ ಸಮುದ್ರ ಮೇಲ್ಭಾಗದಲ್ಲಿದೆ. ಅಲ್ಲಿನ ಗಾಳಿಯು ವೇಗವಾಗಿಯೇ ಇದೆ. ಹೀಗಾಗಿ ಅಪಾಯ ತಪ್ಪಿದ್ದಲ್ಲ ಎಂದು ಎಚ್ಚರಿಕೆ ನೀಡಲಾಗಿದೆ.
-
ಮದ್ಯಪಾನದ ಅಭ್ಯಾಸವನ್ನು ನಿಯಂತ್ರಿಸಲು ಬಯಸುತ್ತೀರಾ? ತಜ್ಞರ ಸರಳ ಸಲಹೆಗಳು ಇಲ್ಲಿವೆ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
ವಾಂಖೆಡೆಯಲ್ಲಿ ಆರ್ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Duet Songs: ಆಶಾ ಭೋಸ್ಲೆ-ಲತಾ ಮಂಗೇಶ್ಕರ್ ಸಹೋದರಿಯರ ಕಂಠಸಿರಿಯಲ್ಲಿ ಅರಳಿದ ಮಾಧುರ್ಯ: ಒಟ್ಟಿಗೆ ಹಾಡಿದ ಹಿಟ್ ಹಾಡುಗಳಿವು -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
ಎಪಿಎಂಸಿಯಲ್ಲಿ ಮೂಟೆಗಳು ಮೈಮೇಲೆ ಬಿದ್ದರೂ ಪವಾಡಸದೃಶ್ಯದಂತೆ ಬದುಕಿದ ಮಹಿಳೆ Video Viral -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ











Click it and Unblock the Notifications