ಪ್ರವಾಹ ಭೀತಿ: ಫ್ಲೈ ಓವರ್ ಮೇಲೆ ವಾಹನ ಪಾರ್ಕ್ ಮಾಡಿದ ಜನ
ಚೆನ್ನೈ, ನವೆಂಬರ್ 26: ತಮಿಳು ನಾಡು ಮತ್ತು ಪುದುಚೆರಿಯ ನಡುವೆ ನಿವಾರ್ ಚಂಡಮಾರುತ ಅಪ್ಪಳಿಸಿದ್ದು ಭಾರಿ ಮಳೆ ಸುರಿಸುತ್ತಿದೆ. ಜತೆಗೆ ವೇಗವಾಗಿ ಬೀಸುತ್ತಿರುವ ಗಾಳಿ ಜನ ಜೀವನವನ್ನು ಅಲ್ಲೋಲಕಲ್ಲೋಲ ಮಾಡಿದೆ. ಸಾವಿರಾರು ಜನರನ್ನು ಸುರಕ್ಷಿತ ಸ್ಥಳಗಳಲ್ಲಿನ ಪರಿಹಾರ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ. 2015ರಲ್ಲಿ ಉಂಟಾಗಿದ್ದ ಪ್ರಳಯಾಂತಕ ಪ್ರವಾಹದ ಅನುಭವ ಹೊಂದಿರುವ ಜನರು ತಮ್ಮ ವಾಹನಗಳು ನೀರಿನಲ್ಲಿ ಮುಳುಗಿ ಕೆಡದಂತೆ ಮತ್ತು ಕೊಚ್ಚಿಕೊಂಡು ಹೋಗದಂತೆ ತಡೆಯಲು ಈ ಬಾರಿ ಮುನ್ನೆಚ್ಚರಿಕೆ ವಹಿಸಿದ್ದಾರೆ.
ಚಂಡಮಾರುತದ ಹಿನ್ನೆಲೆಯಲ್ಲಿ ಮತ್ತೊಂದು ಭಾರಿ ಪ್ರವಾಹ ಸ್ಥಿತಿಯ ಭೀತಿ ನಿರ್ಮಾಣವಾಗಿದ್ದು, ಜನರು ತಮ್ಮ ವಾಹನಗಳನ್ನು ಸುರಕ್ಷಿತ ಜಾಗವೆಂದು ಫ್ಲೈ ಓವರ್ಗಳ ಮೇಲೆ ನಿಲ್ಲಿಸಿದ್ದಾರೆ. 2015ರಲ್ಲಿ ಚೆನ್ನೈ ಮತ್ತು ಸುತ್ತಮುತ್ತಲ ಜಿಲ್ಲೆಗಳಲ್ಲಿ ಉಂಟಾಗಿದ್ದ ಪ್ರವಾಹದಲ್ಲಿ ನೂರಾರು ಮಂದಿ ತಮ್ಮ ವಾಹನಗಳನ್ನು ಕಳೆದುಕೊಂಡಿದ್ದರು. ನಾಲ್ಕು ಚಕ್ರದ ವಾಹನಗಳು ನೀರಿನಲ್ಲಿ ತೇಲಿಹೋಗಿದ್ದವು.
ಹೀಗಾಗಿ ನಗರದ ದಕ್ಷಿಣ ಭಾಗದ ಮಡಿಪಕ್ಕಮ್ನಲ್ಲಿ ಅನೇಕ ನಿವಾಸಿಗಳು ವೆಲಚೆರಿ ಸಮೀಪದ ರೈಲು ನಿಲ್ದಾಣದ ಬಳಿಯ ಮೇಲ್ಸೇತುವೆ ಮೇಲೆ ತಮ್ಮ ವಾಹನಗಳನ್ನು ನಿಲ್ಲಿಸಿದ್ದಾರೆ. ಇಡೀ ಮೇಲ್ಸೇತುವೆ ವಾಹನಗಳಿಂದ ತುಂಬಿ ಹೋಗಿವೆ.

ನಗರದ ಎಲ್ಲ 22 ಸಬ್ವೇಗಳಲ್ಲಿ ನೀರು ನಿಲ್ಲದಂತೆ ಚರಂಡಿ ವ್ಯವಸ್ಥೆಯನ್ನು ಸರಿಪಡಿಸಲಾಗಿದೆ ಮತ್ತು ಕೆಳಮಟ್ಟದ ಪ್ರದೇಶಗಳಲ್ಲಿನ ಸುಮಾರು 52 ಸ್ಥಳಗಳಲ್ಲಿ ನೀರು ಹೊರಹಾಕಲು ಅಧಿಕ ಸಾಮರ್ಥ್ಯ ಮೋಟಾರ್ಗಳನ್ನು ಬಳಸಲಾಗುತ್ತಿದೆ ಎಂದು ಚೆನ್ನೈ ಪಾಲಿಕೆ ತಿಳಿಸಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications