ಮಧ್ಯರಾತ್ರಿ ಅಪ್ಪಳಿಸಲಿದೆ ನಿವಾರ್ ಚಂಡಮಾರುತ: ಸ್ಥಳಾಂತರ ಕಾರ್ಯ ಮುಂದುವರಿಕೆ
ಚೆನ್ನೈ, ನವೆಂಬರ್ 25: ತಮಿಳುನಾಡು ಮತ್ತು ಪುದುಚೆರಿಯಲ್ಲಿ ತೀವ್ರ ಸ್ವರೂಪದ ಚಂಡಮಾರುತದ ಬಿರುಗಾಳಿಯು ಬೀಸುತ್ತಿದ್ದು, ಮುಂದಿನ 12 ಗಂಟೆಗಳಲ್ಲಿ ಇದು ಮತ್ತಷ್ಟು ಪ್ರಬಲಗೊಳ್ಳಲಿದೆ. ತಮಿಳುನಾಡು ಮತ್ತು ಪುದುಚೆರಿಯ ಕರಾವಳಿಯ ಭೂಭಾಗಗಳಲ್ಲಿ ನಡುವೆ ಬುಧವಾರ ಮಧ್ಯರಾತ್ರಿ ಅಥವಾ ಗುರುವಾರ ಬೆಳಗಿನ ವೇಳೆಗೆ ಚಂಡಮಾರುತ ಹಾದುಹೋಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಧ್ಯರಾತ್ರಿ ಅಥವಾ ನಸುಕಿನ ವೇಳೆಗೆ ಕಾರೈಕಲ್ ಮತ್ತು ಮಾಮಲ್ಲಪುರಂ ಮಧ್ಯೆ ಚಂಡಮಾರುತ ಧರೆಗೆ ಅಪ್ಪಳಿಸಲಿದ್ದು, ಭಾರಿ ಬಿರುಗಾಳಿ ಮಳೆಯನ್ನು ನಿರೀಕ್ಷಿಸಲಾಗಿದೆ. ಚೆನ್ನೈ ನಗರದ ಪ್ರಮುಖ ಕುಡಿಯುವ ನೀರಿನ ಮೂಲಗಳಲ್ಲಿ ಒಂದಾದ ಚೆಂಬಾರಂಬಕ್ಕಮ್ ಜಲಾಶಯದಿಂದ ಬುಧವಾರ ಮಧ್ಯಾಹ್ನ ಸುಮಾರು 1,000 ಕ್ಯೂಸೆಕ್ಸ್ ನೀರನ್ನು ಅಡ್ಯಾರ್ ನದಿಗೆ ಬಿಡುಗಡೆ ಮಾಡಲಾಗಿದೆ.
ನದಿ ತೀರದಲ್ಲಿ ವಾಸಿಸುತ್ತಿರುವ ನೂರಾರು ಜನರನ್ನು ಪರಿಹಾರ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ. ಮಂಗಳವಾರದಿಂದಲೇ ಸುರಿಯುತ್ತಿರುವ ಭಾರಿ ಮಳೆಯಿಂದ ಚೆನ್ನೈ ಹಾಗೂ ನೆರೆಯ ಜಿಲ್ಲೆಗಳಲ್ಲಿನ ಪ್ರಮುಖ ರಸ್ತೆಗಳು ಜಲಾವೃತವಾಗಿವೆ. ಜನರು ಮೊಣಕಾಲಿನವರೆಗೂ ತುಂಬಿದ್ದ ನೀರಿನ ನಡುವೆಯೇ ಸಾಗಿದರು. ಕೆಳಮಟ್ಟದ ಪ್ರದೇಶಗಳಲ್ಲಿರುವ ಅನೇಕ ಕಡೆಗಳಲ್ಲಿ ಮನೆಗಳಿಗೆ ನೀರು ನುಗ್ಗಿದೆ.

ಚೆನ್ನೈ ಸೇರಿದಂತೆ 13 ಜಿಲ್ಲೆಗಳಿಗೆ ಗುರುವಾರ ರಜೆ ಘೋಷಿಸಲಾಗಿದೆ. ಚೆನ್ನೈನಿಂದ 30 ಕಿಮೀ ದೂರದಲ್ಲಿರುವ ಚೆಂಬಾರಂಬಕ್ಕಮ್ ಜಲಾಶಯದಲ್ಲಿ ಪರಿಶೀಲನೆ ನಡೆಸಿದ ಬಳಿಕ ಮುಖ್ಯಮಂತ್ರಿ ಇ. ಪಳನಿಸ್ವಾಮಿ ಈ ಆದೇಶ ಹೊರಡಿಸಿದ್ದಾರೆ. 2015ರಲ್ಲಿ ಚೆಂಬಾರಂಬಕ್ಕಮ್ ಜಲಾಶಯದಿಂದ ಅಡ್ಯಾರ್ ನದಿಗೆ ಏಕಾಏಕಿ ನೀರುಬಿಟ್ಟಿದ್ದು ಚೆನ್ನೈ ಮತ್ತು ನೆರೆಯ ಜಿಲ್ಲೆಗಳಲ್ಲಿ ಪ್ರವಾಹಕ್ಕೆ ಕಾರಣವಾಗಿತ್ತು. ಹೀಗಾಗಿ ಈ ಬಾರಿ ಮುನ್ನೆಚ್ಚರಿಕೆಯಿಂದ ಮೊದಲೇ ನೀರನ್ನು ಬಿಡುಗಡೆ ಮಾಡಲಾಗಿದೆ.
ಎನ್ಡಿಆರ್ಎಫ್ ಪಡೆಗಳು ಈಗಾಗಲೇ 13 ಜಿಲ್ಲೆಗಳಿಂದ 3,948 ಮಕ್ಕಳು ಸೇರಿದಂತೆ 24,166 ಜನರನ್ನು 315 ಪರಿಹಾರ ಕೇಂದ್ರಗಳಿಗೆ ಸ್ಥಳಾಂತರಿಸಿವೆ. ಚೆನ್ನೈ ಮತ್ತು ನೆರೆಯ ಜಿಲ್ಲೆಗಳಲ್ಲಿ ಗಂಟೆಗೆ 80-90 ಕಿಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು, 100 ಕಿಮೀ ವೇಗದಲ್ಲಿ ಸುಳಿರ್ಗಾಳಿ ಸುತ್ತುತ್ತಿದೆ. ಪುದುಚೆರಿ, ಕುಡ್ಡಲೋರ್, ಮೈಲಾದುರೈ, ಕಾರೈಕಲ್, ವಿಳ್ಳುಪುರಂ ಮತ್ತು ಚೆಂಗಲ್ಪೇಟ್ಗಳಲ್ಲಿ ಚಂಡಮಾರುತ ಹಾದುಹೋಗುವಾಗ ಗಂಟೆಗೆ 130-145 ಕಿಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications