ನಿವಾರ್ ಚಂಡಮಾರುತ; ಬೆಂಗಳೂರು-ಚೆನ್ನೈ ರೈಲು ಮಾರ್ಗ ಬದಲು
ಚೆನ್ನೈ, ನವೆಂಬರ್ 25 : ನಿವಾರ್ ಚಂಡಮಾರುತದ ಕಾರಣದಿಂದಾಗಿ ಚೆನ್ನೈ ಸೇರಿದಂತೆ ತಮಿಳುನಾಡಿನ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಭಾರತೀಯ ರೈಲ್ವೆ ಹಲವು ರೈಲುಗಳ ಮಾರ್ಗವನ್ನು ಬದಲಾವಣೆ ಮಾಡಿದೆ.
ನೈಋತ್ಯ ರೈಲ್ವೆ ಚೆನ್ನೈ ಮೂಲಕ ಬೆಂಗಳೂರಿಗೆ ಆಗಮಿಸುವ ಹಲವು ರೈಲುಗಳ ಮಾರ್ಗವನ್ನು ಬದಲಾವಣೆ ಮಾಡಿ ಆದೇಶ ಹೊರಡಿಸಿದೆ. ಚೆನ್ನೈ ಸೇರಿದಂತೆ ತಮಿಳುನಾಡಿನ ವಿವಿಧ ಜಿಲ್ಲೆಗಳಿಗೆ ಆಗಮಿಸಬೇಕಿದ್ದ ರೈಲುಗಳ ಮಾರ್ಗ ಬದಲಾವಣೆಯಾಗಿದೆ.
ದಾನ್ಪುರ್ನಿಂದ ಹೊರಡುವ 02296 ರೈಲು ನವೆಂಬರ್ 26ರಂದು ಚೆನ್ನೈಗೆ ಆಗಮಿಸುವುದಿಲ್ಲ. ರೇಣುಗುಂಟ, ಜೋರಾರಪಟ್ಟಿ ಮಾರ್ಗವಾಗಿ ಬೆಂಗಳೂರಿಗೆ ಆಗಮಿಸಲಿದೆ.

ರೈಲು ನಂಬರ್ 02510 ಗೌಹಾತಿ-ಬೆಂಗಳೂರು ಕಂಟೈನ್ಮೆಂಟ್ ವಿಶೇಷ ರೈಲು ನವೆಂಬರ್ 26ರಂದು ಪೆರಂಬೂರು ನಿಲ್ದಾಣಕ್ಕೆ ಹೋಗುವುದಿಲ್ಲ. ರೈಲು ನಂಬರ್ 02577 ದರ್ಬಾಂಗ್-ಮೈಸೂರು ಎಂಜಿಆರ್ ಚೆನ್ನೈ ಸೆಂಟ್ರಲ್ ರೈಲು ನಿಲ್ದಾಣಕ್ಕೆ ನವೆಂಬರ್ 26ರಂದು ಆಗಮಿಸುವುದಿಲ್ಲ.
ನವೆಂಬರ್ 26ರಂದು ಬೆಂಗಳೂರಿನಿಂದ ಹೊರಡುವ 02295 ಬೆಂಗಳೂರು-ದಾನ್ಪುರ್ ರೈಲು ಚೆನ್ನೈ ನಿಲ್ದಾಣಕ್ಕೆ ಹೋಗದಂತೆ ಮಾರ್ಗ ಬದಲಾವಣೆ ಮಾಡಲಾಗಿದೆ. ಯಶವಂತಪುರದಿಂದ ಹೊರಡುವ ದಾನಾಪುರ್ ವಿಶೇಷ ಎಕ್ಸ್ಪ್ರೆಸ್ ಸಹ ಚೆನ್ನೈಗೆ ಹೋಗುವುದಿಲ್ಲ.
Passengers kindly note, Owing to the onset of Cyclone Nivar, following trains have been fully/partially cancelled.#India #indianrailway #Karnataka pic.twitter.com/AdgVzqyXhN
— South Western Railway (@SWRRLY) November 23, 2020
ನಿವಾರ್ ಚಂಡಮಾರುತದ ಪರಿಣಾಮ ಚೆನ್ನೈನಲ್ಲಿ ಬುಧವಾರದಿಂದಲೇ ಭಾರಿ ಮಳೆಯಾಗುತ್ತಿದೆ. ಮುನ್ನೆಚ್ಚರಿಕೆ ಕ್ರಮವಾಗಿ ರೈಲುಗಳ ಮಾರ್ಗವನ್ನು ಬದಲಾವಣೆ ಮಾಡಲಾಗಿದೆ.
-
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
ಭಾರತದ ಏಕೈಕ ರೈಲು ಸಂಪರ್ಕವಿಲ್ಲದ ರಾಜ್ಯ ಸಿಕ್ಕಿಂ: ಕಾರಣ ಮತ್ತು ಪ್ರಯಾಣ ಮಾರ್ಗಗಳ ವಿವರ -
Vande Bharat Sleeper: ಉತ್ಪಾದನೆ ಗುರಿ ತಲುಪದ ಬೆಂಗಳೂರು-ಚೆನ್ನೈ ಕಂಪನಿಗಳು, ಸ್ಲೀಪರ್ ರೈಲು ವಿತರಣೆ ವಿಳಂಬ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ












Click it and Unblock the Notifications