ತಮಿಳುನಾಡಿನ 'ದಾವೂದ್ ಇಬ್ರಾಹಿಂ' ಶ್ರೀಧರ್ ಆತ್ಮಹತ್ಯೆ
ಚೆನ್ನೈ, ಅಕ್ಟೋಬರ್ 05: ಕಳ್ಳಭಟ್ಟಿ ವ್ಯವಹಾರ, ಭೂ ಅಕ್ರಮ ಸೇರಿದಂತೆ ಹತ್ತು ಹಲವು ಕುಕೃತ್ಯಗಳಲ್ಲಿ ತೊಡಗಿ ತಮಿಳುನಾಡಿನ 'ದಾವೂದ್ ಇಬ್ರಾಹಿಂ' ಎನಿಸಿಕೊಂಡಿದ್ದ ಶ್ರೀಧರ್ ಧನಪಾಲ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಕಾಂಬೋಡಿಯಾದಲ್ಲಿ ನೆಲೆ ಕಂಡುಕೊಂಡಿದ್ದ ಧನಪಾಲ್ ಸೈನಡ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಚೆನ್ನೈ ಪೊಲೀಸರು ಪ್ರಕಟಿಸಿದ್ದಾರೆ.

ಇಂಟರ್ ಪೋಲ್ ಸೇರಿದಂತೆ ಹಲವು ಏಜೆನ್ಸಿಗಳು ಈತನ ಹುಡುಕಾಟದಲ್ಲಿದ್ದವು, ಧನ್ ಪಾಲ್ ನ ಭಾರತೀಯ ಪಾಸ್ ಪೋರ್ಟ್ ಕೂಡಾ ರದ್ದಾಗಿತ್ತು.
ಸೈನಡ್ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೂ ಮುನ್ನ ಕಾಂಚೀಪುರಂನಲ್ಲಿರುವ ತನ್ನ ಸಹಚರರಿಗೆ ಫೋನ್ ಕರೆ ಮಾಡಿದ್ದ ಎಂದು ತಿಳಿದು ಬಂದಿದೆ. ಪೊಲೀಸರ ಕಾಟ ತಡೆಯಲು ಆಗುತ್ತಿಲ್ಲ ನಾನು ಊರಿಗೆ ಬರಬೇಕಿತ್ತು. ಈಗ ಸಾವನ್ನಪ್ಪುತ್ತಿದ್ದೇನೆ ಎಂದು ಹೇಳಿದ್ದ. ಆಸ್ಪತ್ರೆಗೆ ಕರೆತರುವಷ್ಟರಲ್ಲೇ ಧನ್ ಪಾಲ್ ಮೃತಪಟ್ಟಿದ್ದ ಎಂದು ಕಾಂಬೋಡಿಯಾದ ವೈದ್ಯಾಧಿಕಾರಿಗಳು ಹೇಳಿದ್ದಾರೆ.
ದುಬೈನಲ್ಲಿ ತೈಲ ದಂಧೆಯಲ್ಲಿ ಭಾಗಿಯಾಗಿದ್ದ ಧನ್ ಪಾಲ್ ಅಲ್ಲಿಂದ ಬಲವಂತವಾಗಿ ಶ್ರೀಲಂಕಾಕ್ಕೆ ಪರಾರಿಯಾಗಿದ್ದ. ಇತ್ತೀಚೆಗೆ ಕಾಂಬೋಡಿಯಾದಲ್ಲಿ ಅಡಗುತಾಣ ಕಂಡು ಕೊಂಡಿದ್ದ.7 ಕೊಲೆ ಕೇಸ್ ಸೇರಿದಂತೆ 43ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಧನ್ ಪಾಲ್ 2013ರಲ್ಲಿ ಭಾರತ ತೊರೆದ ಬಳಿಕ ಪೊಲೀಸರ ಕೈಗೆ ಸಿಕ್ಕಿರಲಿಲ್ಲ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications