ದಿನವಿಡೀ ಫ್ರೀಜರ್ ಪೆಟ್ಟಿಗೆಯಲ್ಲಿದ್ದರೂ ಬದುಕಿ ಬಂದ 'ಮೃತ' ವೃದ್ಧ! ಅಚ್ಚರಿಯ ಘಟನೆ
ಚೆನ್ನೈ, ಅಕ್ಟೋಬರ್ 14: ಮೃತಪಟ್ಟಿದ್ದಾನೆ ಎಂದು ನಂಬಲಾಗಿದ್ದ 74 ವರ್ಷದ ವೃದ್ಧನೊಬ್ಬನ ದೇಹವನ್ನು ರಾತ್ರಿಯಿಡೀ ಫ್ರೀಜರ್ ಪೆಟ್ಟಿಗೆಯಲ್ಲಿ ಇರಿಸಿದ್ದರೂ ಮರುದಿನ ಆತ ಬದುಕಿರುವ ವಿಚಿತ್ರ ಹಾಗೂ ಅಚ್ಚರಿಯ ಘಟನೆ ತಮಿಳುನಾಡಿನಲ್ಲಿ ನಡೆದಿದೆ.
ಸೇಲಂ ಜಿಲ್ಲೆಯ ಕಂಧಂಪಟ್ಟಿಯ ಬಾಲಸುಬ್ರಮಣಿಯ ಎಂಬ ವೃದ್ಧ ಮೃತಪಟ್ಟಿದ್ದಾರೆ ಎಂದು ನಂಬಿದ್ದ ಸಂಬಂಧಿಕರು ಸೋಮವಾರ 'ಮೃತದೇಹ'ವನ್ನು ಕೆಡದಂತೆ ತಡೆಯಲು ಫ್ರೀಜರ್ ಪೆಟ್ಟಿಗೆಯೊಂದರಲ್ಲಿ ಇರಿಸಿದ್ದರು. ಆದರೆ ಫ್ರೀಜರ್ ಕಂಪೆನಿಯ ತಯಾರಕರು ಆ ವ್ಯಕ್ತಿ ಇನ್ನೂ ಬದುಕಿದ್ದಾರೆ ಎಂದು ಪೊಲೀಸರಿಗೆ ಮಂಗಳವಾರ ಮಾಹಿತಿ ನೀಡಿದ್ದರು. ಕೂಡಲೇ ಸ್ಥಳಕ್ಕೆ ತೆರಳಿದ ಪೊಲೀಸರು ವ್ಯಕ್ತಿಯನ್ನು ರಕ್ಷಿಸಿದ್ದಾರೆ. ಈಗ ವೃದ್ಧನನ್ನು ಚಿಕಿತ್ಸೆಗಾಗಿ ಸೇಲಂನ ಆಸ್ಪತ್ರೆಗೆ ದಾಖಲಿಸಲಾಗಿದೆ.
74 ವರ್ಷದ ಬಾಲಸುಬ್ರಮಣಿಯ ಕುಮಾರ್, ತನ್ನ 70 ವರ್ಷದ ಸಹೋದರ ಸರವಣನ್ ಮತ್ತು ಸಹೋದರಿಯ ಮಗಳು ಗೀತಾ ಜತೆ ವಾಸಿಸುತ್ತಿದ್ದು, ಎರಡು ತಿಂಗಳಿಂದ ಹಾಸಿಗೆ ಹಿಡಿದಿದ್ದರು.
ಅಕ್ಟೋಬರ್ 12ರಂದು ಸುಬ್ರಮಣಿಯ ಅವರ ದೇಹದಲ್ಲಿ ಯಾವುದೇ ಚಲನೆ ಕಂಡುಬಾರದೆ ಇದ್ದಾಗ ಅವರು ಮೃತಪಟ್ಟಿದ್ದಾರೆ ಎಂದು ಭಾವಿಸಿ ದೇಹವನ್ನು ಇರಿಸಲು ಫ್ರೀಜರ್ ಬಾಕ್ಸ್ ತರಿಸಿದ್ದಾಗಿ ಸರವಣನ್ ತಿಳಿಸಿದ್ದಾರೆ. ಮಂಗಳವಾರ ಮಧ್ಯಾಹ್ನ ಅವರ ಸಂಬಂಧಿಕರು ಕೂಡ ಮನೆಗೆ ಆಗಮಿಸಿದ್ದರು. ಮುಂದೆ ಓದಿ.

ಉಸಿರಾಡುತ್ತಿದ್ದ ವ್ಯಕ್ತಿ
ಪೆಟ್ಟಿಗೆ ವಾಪಸ್ ಪಡೆದುಕೊಳ್ಳಲು ಫ್ರೀಜರ್ ಕಂಪೆನಿಯ ಸಿಬ್ಬಂದಿ ಮನೆಗೆ ಬಂದಿದ್ದರು. ಆದರೆ ಪೆಟ್ಟಿಗೆ ಒಳಗಿದ್ದ ವ್ಯಕ್ತಿ ಇನ್ನೂ ಉಸಿರಾಡುತ್ತಿದ್ದದ್ದನ್ನು ಕಂಡು ಅವರು ಬೆಚ್ಚಿಬಿದ್ದರು. ಕೂಡಲೇ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಬಾಲಸುಬ್ರಮಣಿಯ ಅವರನ್ನು ರಕ್ಷಿಸಲಾಯಿತು.

ಪೆಟ್ಟಿಗೆ ತರಿಸಿಕೊಂಡಿದ್ದ ಕುಟುಂಬದವರು
ಬಾಲಸುಬ್ರಮಣಿಯ ಅವರು ಸೋಮವಾರ ಮೃತಪಟ್ಟಿದ್ದು, ಶೈತ್ಯ ಪೆಟ್ಟಿಗೆ ಬೇಕೆಂದು ಅವರ ಸಂಬಂಧಿಕರು ಕಂಪೆನಿಗೆ ಕರೆ ಮಾಡಿ ಪೆಟ್ಟಿಗೆ ತರಿಸಿಕೊಂಡಿದ್ದರು ಎಂದು ಸೂರಮಂಗಲಂ ಸಬ್ ಇನ್ಸ್ಪೆಕ್ಟರ್ ರಾಜಶೇಖರನ್ ತಿಳಿಸಿದ್ದಾರೆ.

ಪೊಲೀಸರ ಅನುಮಾನ
'ಸೋಮವಾರ ಪೆಟ್ಟಿಗೆ ತಂದುಕೊಟ್ಟಿದ್ದ ಕಂಪೆನಿ ಸಿಬ್ಬಂದಿ, ಮರುದಿನ ಸಂಜೆ 7-8 ಗಂಟೆ ಸುಮಾರಿಗೆ ಪೆಟ್ಟಿಗೆಯನ್ನು ವಾಪಸ್ ಕೊಂಡೊಯ್ಯಲು ತೆರಳಿದ್ದರು. ಆಗ ಆ ವ್ಯಕ್ತಿ ಇನ್ನೂ ಬದುಕಿರುವುದು ಕಂಡುಬಂದಿದೆ. ಅಲ್ಲಿ ವಾಸ್ತವವಾಗಿ ನಡೆದಿದ್ದೇನೆ ಎಂದು ತಿಳಿಯಲು ಪ್ರಯತ್ನಿಸುತ್ತಿದ್ದೇವೆ. ಮನೆಯಲ್ಲಿ ಆ ಫ್ರೀಜರ್ ಪೆಟ್ಟಿಗೆ ಇದ್ದಷ್ಟೂ ಸಮಯ ವ್ಯಕ್ತಿಯನ್ನು ಅದರೊಳಗೆ ಇರಿಸಿರಲು ಸಾಧ್ಯವೇ ಇಲ್ಲ' ಎಂದು ಅವರು ಹೇಳಿದ್ದಾರೆ.

ಕುಟುಂಬದವರ ವಿರುದ್ಧ ಪ್ರಕರಣ
ಮನೆಯವರ ನಡೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಪೊಲೀಸರು ಬಾಲಸುಬ್ರಮಣಿಯ ಕುಟುಂಬದ ಸದಸ್ಯರ ವಿರುದ್ಧ ಐಪಿಸಿ ಸೆಕ್ಷನ್ 287 (ಮಾನವನ ಜೀವಕ್ಕೆ ಅಪಾಯ ತಂದೊಡ್ಡುವ ನಿರ್ಲಕ್ಷ್ಯದ ವರ್ತನೆ) ಮತ್ತು 336 (ಜೀವಕ್ಕೆ ಮಾರಕವಾದ ಕ್ರಿಯೆ ಅಥವಾ ಇತರರ ವೈಯಕ್ತಿಕ ಸುರಕ್ಷತೆಗೆ ಅಪಾಯ) ಅಡಿ ಪ್ರಕರಣ ದಾಖಲಿಸಲಾಗಿದೆ.
-
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ












Click it and Unblock the Notifications